ಮೈಸೂರು

ಮಾದಕ ವಸ್ತುಗಳ ವಿರುದ್ಧ ಹೋರಾಟ ಅತ್ಯಗತ್ಯ : ವಿನಯ್‌ ಗುರೂಜಿ

ಮೈಸೂರು : ಸಮಾಜಕ್ಕೆ ಮಾರಕವಾಗಿರುವ ಮಾದಕ ದ್ರವ್ಯಗಳ ಸೇವನೆ, ಮಾರಾಟದ ವಿರುದ್ಧ ಯುದ್ಧದ ಮಾದರಿಯಲ್ಲಿ ಹೋರಾಟ ಮಾಡಬೇಕಾಗಿದೆ ಎಂದು ಅವಧೂತ ವಿನಯ್ ಗುರೂಜಿ ಹೇಳಿದರು.

ನಗರದ ಶ್ರೀ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಎದುರು ಭಾನುವಾರ ವಿ.ಆರ್.ಟ್ರಸ್ಟ್, ರೋಟರಿ, ಲಯನ್ಸ್ ಇಂಟರ್‌ನ್ಯಾಷನಲ್ ಸೇರಿದಂತೆ ಹಲವು ಸಂಘ-ಸಂಸ್ಥೆಗಳ ವತಿಯಿಂದ ಆಯೋಜಿಸಿದ್ದ ಬೈಕ್ ರ‍್ಯಾಲಿಯಲ್ಲಿ 500ಕ್ಕೂ ಬೈಕ್‌ಗಳಲ್ಲಿ ಸಂಚರಿಸಿದ ಸವಾರರು, ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಕೂಡಲೇ ಮಾದಕ ವ್ಯಸ್ತುಗಳನ್ನು ತ್ಯಜಿಸುವಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.

ಶ್ರೀ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಿಂದ ಆರಂಭವಾದ ಬೈಕ್ ರ‍್ಯಾಲಿ ಹಾರ್ಡಿಂಗ್ ಸರ್ಕಲ್, ಚಾಮರಾಜ ಜೋಡಿ ರಸ್ತೆ, ರಾಮಸ್ವಾಮಿ ಸರ್ಕಲ್, ಜೆಎಲ್‌ಬಿ ರಸ್ತೆ ಮಾರ್ಗವಾಗಿ ಮುಡಾ ಸರ್ಕಲ್, ರೈಲ್ವೆ ನಿಲ್ದಾಣ ವೃತ್ತ, ಇರ್ವಿನ್ ರಸ್ತೆ ಮಾರ್ಗವಾಗಿ ಅಶೋಕ ರಸ್ತೆ ಮೂಲಕ ಪುನಃ ಶ್ರೀ ಕೋಟೆ ಆಂಜನೇಯಸ್ವಾಮಿ ಎದುರು ಮುಕ್ತಾಯಗೊಂಡಿತು.

ರ‍್ಯಾಲಿಗೆ ಚಾಲನೆ ನೀಡುವ ಮುನ್ನ ಮಾತನಾಡಿದ ಅವಧೂತ ಗುರೂಜಿ ಅವರು, ಭೂಮಿಯಲ್ಲಿ ಶಾಂತಿ ಸಿಗುವುದು ಒಂದು ತಾಯಿ ಗರ್ಭ ಹಾಗೂ ಭೂ ಗರ್ಭ ಎಂಬುದನ್ನು ನಾವೆಲ್ಲ ಅರಿಯಬೇಕು. ಯುವಕತು ಎಲ್ಲಿಯ ತನಕ ಡ್ರಗ್ಸ್ ವಿರುದ್ದ ಎಚ್ಚರಿಕೆಯಿಂದ ಇರುವುದಿಲ್ಲವೋ ಅಲ್ಲಿ ತನಕ ಜೀವನದಲ್ಲಿ ಮುಂದು ಬರಲು ಸಾಧ್ಯವಿಲ್ಲ ಎಂದರು. ಮೈಸೂರಲ್ಲಿ ಡ್ರಗ್ ಕೇಸ್ ಸಿಗುತ್ತಿದೆ ಎಂದರೆ ಅದು ನೋವಿನ ಸಂಗತಿ ಇಡೀ ಕರ್ನಾಟಕದಲ್ಲಿ ಟ್ರಾಫಿಕ್ ಸಮಸ್ಯೆ ಕಡಿಮೆ ಇದ್ದು ಉತ್ತಮವಾದ ಪರಿಸರ ಸಿಗುವುದು ಮೈಸೂರಲ್ಲಿಯೇ ಅಂತರದಲ್ಲಿ ಡ್ರಗ್ಸ್ ಜಾಲ ಹೆಚ್ಚುತ್ತಿರುವುದು ಅಸಮಾಧಾನ ವಿಚಾರ ಎಂದು ಹೇಳಿದರು.

ಇದನ್ನು ಓದಿ:ರಾಜ್ಯದಲ್ಲಿ ತಗ್ಗಿದ ವರುಣನ ಆರ್ಭಟ: ಈ ಜಿಲ್ಲೆಗಳಲ್ಲಿ ಮುಂದುವರಿಯಲಿದೆ ಮಳೆ

ಡ್ರಗ್ಸ್ ಮಾರುವವರಿಗೆ ಕಠಿಣ ಶಿಕ್ಷೆ ನೀಡುವಂತೆ ಸರ್ಕಾರಕ್ಕೆ ಒತ್ತಾಯ ಮಾಡಲಾಗುತ್ತದೆ. ಅಲ್ಲದೇ ಯಾರು ಏನೇ ಹೇಳಲ್ಲಿ ನಮ್ಮ ಬದುಕು ನಮಗೆ ಮುಖ್ಯ ಎಂಬುದನ್ನು ಪ್ರತಿಯೊಬ್ಬರು ಅರಿಯಬೇಕು. ಮಾದಕ ದ್ರವ್ಯ ಸೇವಿಸುವವರ ಸಂಖ್ಯೆ ಹೆಚ್ಚಾಗಿದ್ದು, ಅದರಲ್ಲೂ ಯುವ ಜನತೆ ಅಧಿಕ ಪ್ರಮಾಣದಲ್ಲಿದ್ದಾರೆ. ಆದರೆ, ನಗರ ಪ್ರದೇಶಗಳಲ್ಲಿ ಮಾದಕ ದ್ರವ್ಯಗಳ ಸೇವನೆ ನಿರಂತರವಾಗಿದ್ದು, ಮಾನಸಿಕ ಮತ್ತು ದೈಹಿಕ ಆರೋಗ್ಯ ಸಂಪೂರ್ಣ ಹಾಳಾಗುತ್ತದೆ. ಮಾದಕ ವಸ್ತುಗಳು ವಿವಿಧ ರೂಪಗಳಲ್ಲಿ ಮಾರಾಟ ಆಗುತ್ತಿದ್ದು, ನಿಯಂತ್ರಣಕ್ಕೆ ಸರ್ಕಾರ ಹಲವು ಕ್ರಮಗಳನ್ನು ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದರು.

ಡ್ರಗ್ ಎಂಬುದು ಹಿಂದಿನಿಂದಲೂ ನಿರಂತರವಾಗಿ ನಡೆಯುತ್ತ ಬಂದಿದ್ದು ಇಂತಹ ಕಾರ್ಯಕ್ರಮದ ಮೂಲಕ ಶಾಲಾ ಕಾಲೇಜು ಹಾಗೂ ಪೋಷಕರಿಗೂ ಇದರ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಜೊತೆಗೆ ಪೊಲೀಸ್ ಇಲಾಖೆ ಜೊತೆಗೆ ನಮ್ಮ ಸಹಕಾರ ಕೂಡ ನೀಡಿದರಷ್ಟೇ ಡ್ರಗ್ಸ್ ಮುಕ್ತ ಮಾಡಬಹುದು ಎಂದು ಅಭಿಪ್ರಾಯಪಟ್ಟರು.

ಬಳಿಕ ಮಾತನಾಡಿದ ಗೋಪಾಲಗೌಡ ಆಸ್ಪತ್ರೆ ಮುಖ್ಯಸ್ಥ ಡಾ.ಶುಶ್ರುತ್‌ಗೌಡ, ದೇಶದಲ್ಲಿ ಮಾದಕ ವಸ್ತುಗಳ ದುರುಪಯೋಗ ವೀಪರಿತ ಹೆಚ್ಚುತ್ತಿದೆ. ಇಂದು ಭಾರತದಲ್ಲಿ ಸುಮಾರು 3 ಕೋಟಿ ಜನರು ಮಾದಕ ವಸ್ತುಗಳ ವ್ಯಸನಿಗಳಾಗಿದ್ದಾರೆ. ಈ ಹಿಂದೆ ಪಂಜಾಬ್, ಹಿಮಾಚಲ ಪ್ರದೇಶ, ಮಣಿಪುರ ಮತ್ತು ಹರಿಯಾಣದಂತಹ ರಾಜ್ಯಗಳು ಮಾದಕ ವಸ್ತುಗಳ ಮಾರಾಟದ ಕೇಂದ್ರಗಳಾಗಿ ಗುರುತಿಸಿಕೊಂಡಿದ್ದವು. ಬೇಸರವೆಂದರೆ ಕರ್ನಾಟಕವು ಸಹ ಅವುಗಳ ಸಾಲಿಗೆ ಸೇರುವಂತಾಗಿರುವುದು ತೀರ ಆಘಾತಕಾರಿ ಸಂಗತಿ ಎಂದು ಕಳವಳ ವ್ಯಕ್ತಪಡಿಸಿದರು.

ಮಾದಕ ವಸ್ತುಗಳ ಪಿಡುಗನ್ನು ಪೊಲೀಸರು ಮತ್ತು ಸರ್ಕಾರ ಮಾತ್ರ ನಿರ್ಲಕ್ಷ್ಯ ವಹಿಸದಂತೆ ಕಟ್ಟೆಚ್ಚರದ ಕಠಿಣ ಕ್ರಮ ಜಾರಿ ಮಾಡಬೇಕು. ಅಲ್ಲದೇ ಈ ಸಮಸ್ಯೆ ಪ್ರತಿಯೊಬ್ಬ ಪ್ರಜೆಗಳ ಜವಾಬ್ದಾರಿ. ಎನ್‌ಜಿಒಗಳು, ಕಾಲೇಜುಗಳು, ಯುವ ಪ್ರತಿಮೆಗಳು ಮತ್ತು ಕುಟುಂಬಗಳು ಎಲ್ಲರೂ ಒಟ್ಟಾಗಿ ಬರಬೇಕು. ಪೊಲೀಸರು ತಮ್ಮ ಸಾಮರ್ಥ್ಯಕ್ಕೂ ಮೀರಿ ಕೆಲಸ ಮಾಡುತ್ತಿದ್ದಾರೆ, ಆದರೆ ಮಾದಕ ವಸ್ತುಗಳ ವಿರುದ್ಧದ ಹೋರಾಟಕ್ಕೆ ಒಗ್ಗಟ್ಟಿನ ಸಮಾಜ ಬೇಕು” ಎಂದು ಕರೆಕೊಟ್ಟರು.

ಮಾದಕ ವಸ್ತುಗಳ ಮಾರಾಟಗಾರರು ಕೊಲೆಗಾರರಿಗಿಂತ ಕಡಿಮೆಯಿಲ್ಲ. ಅವರು ನಮ್ಮ ಮಕ್ಕಳ ಭವಿಷ್ಯವನ್ನು ನಾಶಗೊಳಿಸುತ್ತಾರೆ ಮತ್ತು ಕುಟುಂಬಗಳ ನಡುವೆ ಅಶಾಂತಿ, ಬಿರುಕುಗಳನ್ನು ಮೂಡಿಸಲು ಕಾರಣಿಕೃತರಾಗುತಿದ್ದಾರೆ. ಇಂತಹವರು ಕೊಲೆಗಾರರಂತೆಯೇ ಕಠಿಣ ಕಾನೂನುಗಳನ್ನು ಎದುರಿಸಬೇಕು” ಎಂದು ಒತ್ತಾಯಿಸಿದರು.

ಜಿಎಸ್‌ಎಸ್ ಸಂಸ್ಥೆ ಮುಖ್ಯಸ್ಥ ಶ್ರೀಹರಿ ಮಾತನಾಡಿ, ಕರ್ನಾಟಕ ಬಹಳಷ್ಟು ವಿಷಯದಲ್ಲಿ ಮುಂದಿದೆ ಆದರೆ ಮಾದಕ ದ್ರವ್ಯ ಬಳಸುವ ರಾಜ್ಯಗಳಲ್ಲಿ ನಮ್ಮ ಕರ್ನಾಟಕ ಕೂಡ ಸೇರಿರುವುದು ದುರಷ್ಟಕಾರ ಸಂಗತಿಯಾಗಿದೆ. ಅಲ್ಲದೇ ಪೊಲೀಸ್ ಇಲಾಖೆ ಕೂಡ ಇದನ್ನು ತಡೆಗಟ್ಟಲು ಬಹಳಷ್ಟು ಶ್ರಮಪಡುತ್ರಿದ್ದು ಅವರ ಜೊತೆಗೆ ನಮ್ಮ ಸಹಕಾರ ಕೂಡ ನೀಡಬೇಕಾಗಿದೆ ಎಂದು ಹೇಳಿದರು.

ಮಾಜಿ ಮೇಯರ್ ಸಂದೇಶ್ ಸ್ವಾಮಿ ಲಯನ್ಸ್ ಕ್ಲಬ್ ಗವರ್ನರ್ ರಾಜಶೇಖರ್, ಅರುಣ್ ಯೋಗಿರಾಜ್, ಡಾ ಎಚ್.ಕೆಚೇತನ್‌ ಇದ್ದರು

ಆಂದೋಲನ ಡೆಸ್ಕ್

Recent Posts

ಹೆಚ್ಚುತ್ತಿರುವ ಯುವತಿಯರ ಆತ್ಮಹತ್ಯೆ ; ಯುವತಿಯರಿಗೆ ಕಂಗನಾ ರಣಾವತ್ ಕಿವಿಮಾತು

ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…

5 hours ago

ಆ.31ರೊಳಗೆ ಜಿಬಿಎ ಚುನಾವಣೆ ನಡೆಸಿ ; ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಅಂತಿಮ ಗಡುವು

ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…

8 hours ago

ಸಫಾರಿಗಳಲ್ಲಿ ಇನ್ಮುಂದೆ ತೆರೆದ ವಾಹನಕ್ಕೆ ಅವಕಾಶವಿಲ್ಲ : ಈಶ್ವರ ಖಂಡ್ರೆ

ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು :  ರಾಜ್ಯದ ಐದು ಹುಲಿ…

9 hours ago

ಮ.ಬೆಟ್ಟ | ಮರದ ಕೊಂಬೆ ಬಿದ್ದು ಮೂವರಿಗೆ ಗಾಯ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…

11 hours ago

ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ

ಬೆಂಗಳೂರು: ಆನ್‍ಲೈನ್‍ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್‍ಗೆ ಮಿಶ್ರ…

14 hours ago

ಯಳಂದೂರು: ಬೋನಿಗೆ ಬಿದ್ದ ಚಿರತೆ

ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ…

14 hours ago