ಮೈಸೂರು

ಅನವಶ್ಯಕ ಟ್ರೋಲ್‌ ಮಾಡಿದರೆ ದೂರು ದಾಖಲು : ಎಂ.ಲಕ್ಷ್ಮಣ್‌ ಎಚ್ಚರಿಕೆ !

ಮೈಸೂರು : ಅನವಶ್ಯಕವಾಗಿ ಸಿದ್ದರಾಮಯ್ಯ ವಿರುದ್ಧ ಟ್ರೋಲ್‌ ಮಾಡಿದರೆ ದೂರು ದಾಖಲು ಮಾಡುತ್ತೇವೆ ಎಂದು ಸಿದ್ದರಾಮಯ್ಯ ವಿರುದ್ಧ ಟ್ರೋಲರ್ಸ್‌ಗೆ ಕಾಂಗ್ರೆಸ್‌ ವಕ್ತಾರ ಎಂ.ಲಕ್ಷ್ಮಣ್‌ ಎಚ್ಚರಿಕೆ ನೀಡಿದ್ದಾರೆ.

ನಗರದ ಕಾಂಗ್ರೆಸ್‌ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಚಾರ ತಿಳಿದು ಟ್ರೋಲ್‌ ಮಾಡಬೇಕು. ಬಾಯಿಗೆ ಬಂದಂತೆ ಮಾಡಿದರೆ ನಿಮ್ಮ ಅಕ್ಕ-ತಂಗಿ, ತಾಯಿ-ತಂದೆಗೆ ಟ್ರೋಲ್‌ ಮಾಡಿದಹಾಗೆ ಎಂದು ಹೇಳಿದರು.

ಬಾಯಿಗೆ ಬಂದಹಾಗೆಲ್ಲಾ ಟ್ರೋಲ್‌ ಮಾಡುತ್ತಾರೆ. ಒಂದು ವ್ಯವಸ್ತೆ ಬೇಡವೆ? ಸಿದ್ದರಾಮಯ್ಯ ಭಾಷಣದಲ್ಲಿ ನಮ್ಮ ಮನೆಯವರು ಯಾವತ್ತೂ ಒಳಗೆ ಬಂದವರಲ್ಲ ಎಂದು ಹೇಳಿದ್ದಕ್ಕೆ ಒಂದು ಟ್ರೋಲ್‌ ಮಾಡುತ್ತಾರೆ. ಯಾವುದರಲ್ಲಿ ಹೊಡಿಬೇಕು ಇವರಿಗೆ ಎಂದು ಕಿಡಿ ಕಾರಿದರು.

ನಿಮ್ಮ ತೆವಲಿಗೆ ಸುಳ್ಳು ಸುಳ್ಳನ್ನೇ ಟ್ರೋಲ್‌ ಮಾಡಿದರೆ ನಿಮ್ಮ ತಂದೆ-ತಾಯಿ ಹಾಗೂ ಅಕ್ಕ-ತಂಗಿಯರಿಗೆ ಟ್ರೋಲ್‌ ಮಾಡಿದ ಹಾಗೆ ಎಂದರು.

ಟೋಲ್‌ ಮಾಡಿದರೆ ಯಾರು ಕೇಳಲ್ಲ, ಏನು ಆಗಲ್ಲ ಎಂಬ ವ್ಯವಸ್ಥೆ ಇದೆ ಎಂದು ಹೀಗೆ ಮಾಡುತ್ತಿದ್ದೀರಾ. ಸೈಬರ್‌ ಕ್ರೈಂಗೆ ದೂರು ನೀಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಲೋಕಾ ಪೊಲೀಸ್‌ ಕಸ್ಟಡಿಗೆ : ಕೋರ್ಟ್‌ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್‌…

3 hours ago

ಅನಾರೋಗ್ಯ ಹಿನ್ನಲೆ ದುಬಾರೆ ಸಾಕಾನೆ ʻತಕ್ಷʼ ಸಾವು

ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…

5 hours ago

ಮೈಸೂರು | ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನಿಗೇ ಚಾಕು ಇರಿತ

ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…

6 hours ago

ಮಹಿಳಾ ಉದ್ಯೋಗಿಗೆ ಕಿರುಕುಳ : ಕಾರ್ಖಾನೆ ಮಾಲೀಕನ ವಿರುದ್ದ ದೂರು

ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…

7 hours ago

ಚಾಮುಂಡೇಶ್ವರಿ ದರ್ಶನ : ಸೇವಾ ಶುಲ್ಕ ಏರಿಕೆಗೆ ಖಂಡನೆ

ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…

7 hours ago

ಮೂರು ತಿಂಗಳಲ್ಲಿ ಪಿಎಸ್‌ಐ ಖಾಲಿ ಹುದ್ದೆ ಭರ್ತಿ : ಗೃಹ ಸಚಿವ ಪರಮೇಶ್ವರ್‌

ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…

7 hours ago