ಮೈಸೂರು : ಅನವಶ್ಯಕವಾಗಿ ಸಿದ್ದರಾಮಯ್ಯ ವಿರುದ್ಧ ಟ್ರೋಲ್ ಮಾಡಿದರೆ ದೂರು ದಾಖಲು ಮಾಡುತ್ತೇವೆ ಎಂದು ಸಿದ್ದರಾಮಯ್ಯ ವಿರುದ್ಧ ಟ್ರೋಲರ್ಸ್ಗೆ ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ಎಚ್ಚರಿಕೆ ನೀಡಿದ್ದಾರೆ.
ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಚಾರ ತಿಳಿದು ಟ್ರೋಲ್ ಮಾಡಬೇಕು. ಬಾಯಿಗೆ ಬಂದಂತೆ ಮಾಡಿದರೆ ನಿಮ್ಮ ಅಕ್ಕ-ತಂಗಿ, ತಾಯಿ-ತಂದೆಗೆ ಟ್ರೋಲ್ ಮಾಡಿದಹಾಗೆ ಎಂದು ಹೇಳಿದರು.
ಬಾಯಿಗೆ ಬಂದಹಾಗೆಲ್ಲಾ ಟ್ರೋಲ್ ಮಾಡುತ್ತಾರೆ. ಒಂದು ವ್ಯವಸ್ತೆ ಬೇಡವೆ? ಸಿದ್ದರಾಮಯ್ಯ ಭಾಷಣದಲ್ಲಿ ನಮ್ಮ ಮನೆಯವರು ಯಾವತ್ತೂ ಒಳಗೆ ಬಂದವರಲ್ಲ ಎಂದು ಹೇಳಿದ್ದಕ್ಕೆ ಒಂದು ಟ್ರೋಲ್ ಮಾಡುತ್ತಾರೆ. ಯಾವುದರಲ್ಲಿ ಹೊಡಿಬೇಕು ಇವರಿಗೆ ಎಂದು ಕಿಡಿ ಕಾರಿದರು.
ನಿಮ್ಮ ತೆವಲಿಗೆ ಸುಳ್ಳು ಸುಳ್ಳನ್ನೇ ಟ್ರೋಲ್ ಮಾಡಿದರೆ ನಿಮ್ಮ ತಂದೆ-ತಾಯಿ ಹಾಗೂ ಅಕ್ಕ-ತಂಗಿಯರಿಗೆ ಟ್ರೋಲ್ ಮಾಡಿದ ಹಾಗೆ ಎಂದರು.
ಟೋಲ್ ಮಾಡಿದರೆ ಯಾರು ಕೇಳಲ್ಲ, ಏನು ಆಗಲ್ಲ ಎಂಬ ವ್ಯವಸ್ಥೆ ಇದೆ ಎಂದು ಹೀಗೆ ಮಾಡುತ್ತಿದ್ದೀರಾ. ಸೈಬರ್ ಕ್ರೈಂಗೆ ದೂರು ನೀಡುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…
ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…