ಮೈಸೂರು

ಅನವಶ್ಯಕ ಟ್ರೋಲ್‌ ಮಾಡಿದರೆ ದೂರು ದಾಖಲು : ಎಂ.ಲಕ್ಷ್ಮಣ್‌ ಎಚ್ಚರಿಕೆ !

ಮೈಸೂರು : ಅನವಶ್ಯಕವಾಗಿ ಸಿದ್ದರಾಮಯ್ಯ ವಿರುದ್ಧ ಟ್ರೋಲ್‌ ಮಾಡಿದರೆ ದೂರು ದಾಖಲು ಮಾಡುತ್ತೇವೆ ಎಂದು ಸಿದ್ದರಾಮಯ್ಯ ವಿರುದ್ಧ ಟ್ರೋಲರ್ಸ್‌ಗೆ ಕಾಂಗ್ರೆಸ್‌ ವಕ್ತಾರ ಎಂ.ಲಕ್ಷ್ಮಣ್‌ ಎಚ್ಚರಿಕೆ ನೀಡಿದ್ದಾರೆ.

ನಗರದ ಕಾಂಗ್ರೆಸ್‌ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಚಾರ ತಿಳಿದು ಟ್ರೋಲ್‌ ಮಾಡಬೇಕು. ಬಾಯಿಗೆ ಬಂದಂತೆ ಮಾಡಿದರೆ ನಿಮ್ಮ ಅಕ್ಕ-ತಂಗಿ, ತಾಯಿ-ತಂದೆಗೆ ಟ್ರೋಲ್‌ ಮಾಡಿದಹಾಗೆ ಎಂದು ಹೇಳಿದರು.

ಬಾಯಿಗೆ ಬಂದಹಾಗೆಲ್ಲಾ ಟ್ರೋಲ್‌ ಮಾಡುತ್ತಾರೆ. ಒಂದು ವ್ಯವಸ್ತೆ ಬೇಡವೆ? ಸಿದ್ದರಾಮಯ್ಯ ಭಾಷಣದಲ್ಲಿ ನಮ್ಮ ಮನೆಯವರು ಯಾವತ್ತೂ ಒಳಗೆ ಬಂದವರಲ್ಲ ಎಂದು ಹೇಳಿದ್ದಕ್ಕೆ ಒಂದು ಟ್ರೋಲ್‌ ಮಾಡುತ್ತಾರೆ. ಯಾವುದರಲ್ಲಿ ಹೊಡಿಬೇಕು ಇವರಿಗೆ ಎಂದು ಕಿಡಿ ಕಾರಿದರು.

ನಿಮ್ಮ ತೆವಲಿಗೆ ಸುಳ್ಳು ಸುಳ್ಳನ್ನೇ ಟ್ರೋಲ್‌ ಮಾಡಿದರೆ ನಿಮ್ಮ ತಂದೆ-ತಾಯಿ ಹಾಗೂ ಅಕ್ಕ-ತಂಗಿಯರಿಗೆ ಟ್ರೋಲ್‌ ಮಾಡಿದ ಹಾಗೆ ಎಂದರು.

ಟೋಲ್‌ ಮಾಡಿದರೆ ಯಾರು ಕೇಳಲ್ಲ, ಏನು ಆಗಲ್ಲ ಎಂಬ ವ್ಯವಸ್ಥೆ ಇದೆ ಎಂದು ಹೀಗೆ ಮಾಡುತ್ತಿದ್ದೀರಾ. ಸೈಬರ್‌ ಕ್ರೈಂಗೆ ದೂರು ನೀಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

3 hours ago

ಸಕ್ಕರೆ ಬೆಲೆ ಗಗನಮುಖಿ; ಗ್ರಾಹಕರಿಗೆ ಬರೆ

ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…

3 hours ago

ಮಣ್ಣಿನ ಘಮ, ನಾಟಿ ಸಂಭ್ರಮ, ಗ್ರಾಮೀಣ ಕ್ರೀಡೆಗಳ ಉತ್ಸಾಹ

ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ  ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…

3 hours ago

ಮಳೆ ಕೊರತೆ; ರೈತರ ಕೈ ಸೇರದ ಬೆಳೆಗಳು

ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…

3 hours ago

ದುಬಾರಿ ಬಾಡಿಗೆ: ಬಾಡಿಗೆದಾರರಿಲ್ಲದೆ ಖಾಲಿ ಬಿದ್ದ ಮಳಿಗೆಗಳು

ಭೇರ್ಯ ಮಹೇಶ್ ಭೇರ್ಯ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…

3 hours ago