ಮೈಸೂರು : ಅನವಶ್ಯಕವಾಗಿ ಸಿದ್ದರಾಮಯ್ಯ ವಿರುದ್ಧ ಟ್ರೋಲ್ ಮಾಡಿದರೆ ದೂರು ದಾಖಲು ಮಾಡುತ್ತೇವೆ ಎಂದು ಸಿದ್ದರಾಮಯ್ಯ ವಿರುದ್ಧ ಟ್ರೋಲರ್ಸ್ಗೆ ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ಎಚ್ಚರಿಕೆ ನೀಡಿದ್ದಾರೆ.
ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಚಾರ ತಿಳಿದು ಟ್ರೋಲ್ ಮಾಡಬೇಕು. ಬಾಯಿಗೆ ಬಂದಂತೆ ಮಾಡಿದರೆ ನಿಮ್ಮ ಅಕ್ಕ-ತಂಗಿ, ತಾಯಿ-ತಂದೆಗೆ ಟ್ರೋಲ್ ಮಾಡಿದಹಾಗೆ ಎಂದು ಹೇಳಿದರು.
ಬಾಯಿಗೆ ಬಂದಹಾಗೆಲ್ಲಾ ಟ್ರೋಲ್ ಮಾಡುತ್ತಾರೆ. ಒಂದು ವ್ಯವಸ್ತೆ ಬೇಡವೆ? ಸಿದ್ದರಾಮಯ್ಯ ಭಾಷಣದಲ್ಲಿ ನಮ್ಮ ಮನೆಯವರು ಯಾವತ್ತೂ ಒಳಗೆ ಬಂದವರಲ್ಲ ಎಂದು ಹೇಳಿದ್ದಕ್ಕೆ ಒಂದು ಟ್ರೋಲ್ ಮಾಡುತ್ತಾರೆ. ಯಾವುದರಲ್ಲಿ ಹೊಡಿಬೇಕು ಇವರಿಗೆ ಎಂದು ಕಿಡಿ ಕಾರಿದರು.
ನಿಮ್ಮ ತೆವಲಿಗೆ ಸುಳ್ಳು ಸುಳ್ಳನ್ನೇ ಟ್ರೋಲ್ ಮಾಡಿದರೆ ನಿಮ್ಮ ತಂದೆ-ತಾಯಿ ಹಾಗೂ ಅಕ್ಕ-ತಂಗಿಯರಿಗೆ ಟ್ರೋಲ್ ಮಾಡಿದ ಹಾಗೆ ಎಂದರು.
ಟೋಲ್ ಮಾಡಿದರೆ ಯಾರು ಕೇಳಲ್ಲ, ಏನು ಆಗಲ್ಲ ಎಂಬ ವ್ಯವಸ್ಥೆ ಇದೆ ಎಂದು ಹೀಗೆ ಮಾಡುತ್ತಿದ್ದೀರಾ. ಸೈಬರ್ ಕ್ರೈಂಗೆ ದೂರು ನೀಡುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…
ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…
ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…
ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…
ಭೇರ್ಯ ಮಹೇಶ್ ಭೇರ್ಯ: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…