ಮೈಸೂರು: ಇಲ್ಲಿನ ಹೆಚ್.ಡಿ ಕೋಟೆ ತಾಲೂಕಿನಲ್ಲಿರುವ ಕಬಿನಿ ಜಲಾಶಯವು ಗರಿಷ್ಠ ಮಟ್ಟ ತಲುಪಿದ್ದು, ನದಿ ಪಾತ್ರದ ಜನರಿಗೆ ಪ್ರವಾಹದ ಮುನ್ನೆಚ್ಚರಿಕೆ ನೀಡಲಾಗಿದೆ.
ಕಬಿನಿ ಜಲಾಶಯಕ್ಕೆ ಒಳ ಹರಿವಿನ ಪ್ರಮಾಣ 5,000. ಕ್ಯೂಸೆಕ್ಸ್ ಗೂ ಹೆಚ್ಚಿದೆ. ಜಲಾನಯನ ಪ್ರದೇಶಗಳಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನಲೆ ಕಬಿನಿ ಜಲಾಶಯದಿಂದ 5,000 ಕ್ಯೂಸೆಕ್ಸ್ ನೀರನ್ನು ಹೊರಬಿಡಲಾಗುತ್ತಿದೆ.
ಯಾವುದೇ ಕ್ಷಣದಲ್ಲಾದರೂ ಇನ್ನೂ ಹೆಚ್ಚಿನ ಪ್ರಮಾಣದ ನೀರನ್ನು ನದಿಗೆ ಹರಿಸುವ ಸಾಧ್ಯತೆ ಇದ್ದು, ಕಬಿನಿ ನದಿಯ ಪಾತ್ರದಲ್ಲಿರುವ ಮತ್ತು ನದಿಯ ಎರಡೂ ದಂಡೆಯಲ್ಲಿ ವಾಸಿಸುತ್ತಿರುವ ಜನರು ತಮ್ಮ ಆಸ್ತಿ ಪಾಸ್ತಿ ಹಾಗೂ ಜಾನುವಾರು ರಕ್ಷಣೆಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸಿ ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚಿಸಲಾಗಿದೆ ಎಂದು ಕಬಿನಿ ಜಲಾಶಯ ವಿಭಾಗದ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…
ಮೈಸೂರು : ಬುಧವಾರವಷ್ಟೇ ಹೆಬ್ಬಾಳ್ನಲ್ಲಿ ಶೆಡ್ವೊಂದರ ಮೇಲೆ ದಾಳಿ ನಡೆಸಿದ್ದ ಎನ್ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…
ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…
ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…
ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…