ಮೈಸೂರು

ವಿದ್ಯಾರ್ಥಿ ದಿಸೆಯಲ್ಲೇ ಸಾಧನೆಗೆ ದಾರಿ ಕಂಡುಕೊಳ್ಳಿ : ಡಾ.ವೀರೇಂದ್ರ ಹೆಗ್ಗಡೆ

ಮೈಸೂರು: ವಿದ್ಯಾರ್ಥಿ ದಿಸೆಯಲ್ಲಿಯೇ ವಿದ್ಯಾರ್ಥಿಗಳು ತಮಗಿಷ್ಟವಾದ ಯಾವುದಾದರೊಂದು ಕ್ಷೇತ್ರವನ್ನು ಆರಿಸಿಕೊಂಡು ಸಾಧನೆ ವಾಡಿದಲ್ಲಿ ಮುಂದಿನ ಭವಿಷ್ಯ ಉಜ್ವಲವಾಗಬಲ್ಲದು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದರು.

ನಗರದ ಲಕ್ಷ್ಮಿಪುರಂನಲ್ಲಿರುವ ಎಸ್‌ಡಿಎಂ ಕಾಲೇಜು ಆವರಣದಲ್ಲಿ ಎಂಎಂಕೆ, ಎಸ್‌ಡಿಎಂ ಮಹಾ ವಿದ್ಯಾಲುಂದ ವತಿಯಿಂದ ಶುಕ್ರವಾರ ಏರ್ಪಡಿಸಲಾಗಿದ್ದ ‘ಪ್ರಭಿಗ್ಯಾನ್’ ಅಂತರ ಕಾಲೇಜು ಹಬ್ಬವನ್ನು ಉದ್ಘಾಟಿಸಿ ಅವರು ವಾತನಾಡಿದರು.

ಪ್ರತಿಯೊಬ್ಬ ವಿದ್ಯಾರ್ಥಿುಯಲ್ಲಿಯೂ ಒಂದಲ್ಲಾ ಒಂದು ಪ್ರತಿಭೆ ಇದ್ದೇ ಇರುತ್ತದೆ. ಸುಪ್ತವಾಗಿರುವ ಪ್ರತಿಭೆಯನ್ನು ಹೊರತರುವ ಕೆಲಸವಾಗಬೇಕು. ಇದರಿಂದ ವಿದ್ಯಾರ್ಥಿಗಳಿಗೂ ಅನುಕೂಲವಾಗುತ್ತದೆ. ವಿದ್ಯಾಸಂಸ್ಥೆಗಳಿಗೂ ಒಳ್ಳೆುಂ ಹೆಸರು ಬರುತ್ತದೆ ಎಂದು ಹೇಳಿದರು.

ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆ, ಸಂಗೀತ, ನೃತ್ಯ ಹೀಗೆ ಯಾವುದಾದರೂ ಒಂದು ಕ್ಷೇತ್ರವನ್ನು ಆರಿಸಿಕೊಳ್ಳಬೇಕು. ಸಮುಂಕ್ಕೆ ಬಹಳ ಮಹತ್ವವಿದೆ. ಇರುವ ಸಮುಂವನ್ನು ಉಪೋಂಗಿಸಿಕೊಂಡು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ವಾಡಲು ಯತ್ನಿಸಬೇಕು ಎಂದು ಕಿವಿವಾತು ಹೇಳಿದರು.
ಒಂದು ಹಸುವಿಗೆ ಯಾವ ಆಹಾರ ನೀಡಿದರೂ ಸ್ವೀಕರಿಸುತ್ತದೆ. ಮಲಗಿದ ವೇಳೆ ಅದನ್ನು ಬಾಯಿಗೆ ತಂದುಕೊಂಡು ಮೆಲುಕು ಹಾಕುವ ಮೂಲಕ ಜೀರ್ಣಿಸಿಕೊಳ್ಳುತ್ತದೆ. ವಿದ್ಯಾರ್ಥಿಗಳಿಗೆ ಏನನ್ನು ಬೇಕಾದರೂ ಕಲಿಯುವ ಶಕ್ತಿ ಇರುತ್ತದೆ. ಹಸುವಿನ ರೀತಿುಂಲ್ಲಿ ಎಲ್ಲವನ್ನೂ ಸ್ವೀಕರಿಸಿ. ನಂತರ ಒಂದು ಕ್ಷೇತ್ರವನ್ನು ಆರಿಸಿಕೊಂಡು ಸಾಧನೆ ವಾಡಿ ಎಂದರು.

ಇದೇ ವೇಳೆ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ೭೫ನೇ ಜನ್ಮದಿನದ ಅಂಗವಾಗಿ ಕಾಲೇಜು ಆವರಣದಲ್ಲಿ ನೇತ್ರದಾನ ಶಿಬಿರ ಏರ್ಪಡಿಸಲಾಗಿತ್ತು. ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ನೋಂದಣಿ ವಾಡಿಕೊಂಡರು. ರಕ್ತದಾನ ಶಿಬಿರದಲ್ಲಿ ೪೯ ವಿದ್ಯಾರ್ಥಿನಿುಂರು ರಕ್ತದಾನ ವಾಡಿದರು.

ಅಂತರ ಕಾಲೇಜು ಫೆಸ್ಟ್ ಅಂಗವಾಗಿ ಪಾಪ್ ಕ್ವಿಜ್, ಫೋಟೋಗ್ರಫಿ, ನೃತ್ಯ, ಪೇಂಟಿಂಗ್, ಹಾಡುಗಾರಿಕೆ, ಶಾರ್ಟ್ ಫಿಲಂ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಮೈಸೂರು, ಮಂಡ್ಯ, ಕೊಳ್ಳೇಗಾಲ ಮುಂತಾದ ಕಡೆಗಳಿಂದ ೨೦ಕ್ಕೂ ಹೆಚ್ಚು ಕಾಲೇಜು ವಿದ್ಯಾರ್ಥಿಗಳು ಸ್ಪರ್ಧೆಗಳಲ್ಲಿ ಪಾಲ್ಗೊಂಡರು.

ಕಾರ್ಯಕ್ರಮದಲ್ಲಿ ಪಿಯುಸಿ ಕಾಲೇಜು ಪ್ರಾಂಶುಪಾಲರಾದ ಪ್ರೊ.ನುಂನಕುವಾರಿ ಅವರನ್ನು ಸನ್ಮಾನಿಸಲಾಯಿತು. ಪ್ರಾಂಶುಪಾಲರಾದ ಪ್ರೊ.ಸಾಯಿನಾಥ್ ಮಲ್ಲಿಗೆವಾಡು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜ್ಯೋತಿಲಕ್ಷ್ಮಿಜಿ. ಕಾವ, ಡಾ.ವಿನೋದ, ಹಾಜಿರಾ ಬೇಗಂ ಭಾಗವಹಿಸಿದ್ದರು.

 

 

 

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

16 mins ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

1 hour ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

3 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

9 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

15 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

15 hours ago