ಮೈಸೂರು

ವಿದ್ಯಾರ್ಥಿ ದಿಸೆಯಲ್ಲೇ ಸಾಧನೆಗೆ ದಾರಿ ಕಂಡುಕೊಳ್ಳಿ : ಡಾ.ವೀರೇಂದ್ರ ಹೆಗ್ಗಡೆ

ಮೈಸೂರು: ವಿದ್ಯಾರ್ಥಿ ದಿಸೆಯಲ್ಲಿಯೇ ವಿದ್ಯಾರ್ಥಿಗಳು ತಮಗಿಷ್ಟವಾದ ಯಾವುದಾದರೊಂದು ಕ್ಷೇತ್ರವನ್ನು ಆರಿಸಿಕೊಂಡು ಸಾಧನೆ ವಾಡಿದಲ್ಲಿ ಮುಂದಿನ ಭವಿಷ್ಯ ಉಜ್ವಲವಾಗಬಲ್ಲದು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದರು.

ನಗರದ ಲಕ್ಷ್ಮಿಪುರಂನಲ್ಲಿರುವ ಎಸ್‌ಡಿಎಂ ಕಾಲೇಜು ಆವರಣದಲ್ಲಿ ಎಂಎಂಕೆ, ಎಸ್‌ಡಿಎಂ ಮಹಾ ವಿದ್ಯಾಲುಂದ ವತಿಯಿಂದ ಶುಕ್ರವಾರ ಏರ್ಪಡಿಸಲಾಗಿದ್ದ ‘ಪ್ರಭಿಗ್ಯಾನ್’ ಅಂತರ ಕಾಲೇಜು ಹಬ್ಬವನ್ನು ಉದ್ಘಾಟಿಸಿ ಅವರು ವಾತನಾಡಿದರು.

ಪ್ರತಿಯೊಬ್ಬ ವಿದ್ಯಾರ್ಥಿುಯಲ್ಲಿಯೂ ಒಂದಲ್ಲಾ ಒಂದು ಪ್ರತಿಭೆ ಇದ್ದೇ ಇರುತ್ತದೆ. ಸುಪ್ತವಾಗಿರುವ ಪ್ರತಿಭೆಯನ್ನು ಹೊರತರುವ ಕೆಲಸವಾಗಬೇಕು. ಇದರಿಂದ ವಿದ್ಯಾರ್ಥಿಗಳಿಗೂ ಅನುಕೂಲವಾಗುತ್ತದೆ. ವಿದ್ಯಾಸಂಸ್ಥೆಗಳಿಗೂ ಒಳ್ಳೆುಂ ಹೆಸರು ಬರುತ್ತದೆ ಎಂದು ಹೇಳಿದರು.

ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆ, ಸಂಗೀತ, ನೃತ್ಯ ಹೀಗೆ ಯಾವುದಾದರೂ ಒಂದು ಕ್ಷೇತ್ರವನ್ನು ಆರಿಸಿಕೊಳ್ಳಬೇಕು. ಸಮುಂಕ್ಕೆ ಬಹಳ ಮಹತ್ವವಿದೆ. ಇರುವ ಸಮುಂವನ್ನು ಉಪೋಂಗಿಸಿಕೊಂಡು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ವಾಡಲು ಯತ್ನಿಸಬೇಕು ಎಂದು ಕಿವಿವಾತು ಹೇಳಿದರು.
ಒಂದು ಹಸುವಿಗೆ ಯಾವ ಆಹಾರ ನೀಡಿದರೂ ಸ್ವೀಕರಿಸುತ್ತದೆ. ಮಲಗಿದ ವೇಳೆ ಅದನ್ನು ಬಾಯಿಗೆ ತಂದುಕೊಂಡು ಮೆಲುಕು ಹಾಕುವ ಮೂಲಕ ಜೀರ್ಣಿಸಿಕೊಳ್ಳುತ್ತದೆ. ವಿದ್ಯಾರ್ಥಿಗಳಿಗೆ ಏನನ್ನು ಬೇಕಾದರೂ ಕಲಿಯುವ ಶಕ್ತಿ ಇರುತ್ತದೆ. ಹಸುವಿನ ರೀತಿುಂಲ್ಲಿ ಎಲ್ಲವನ್ನೂ ಸ್ವೀಕರಿಸಿ. ನಂತರ ಒಂದು ಕ್ಷೇತ್ರವನ್ನು ಆರಿಸಿಕೊಂಡು ಸಾಧನೆ ವಾಡಿ ಎಂದರು.

ಇದೇ ವೇಳೆ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ೭೫ನೇ ಜನ್ಮದಿನದ ಅಂಗವಾಗಿ ಕಾಲೇಜು ಆವರಣದಲ್ಲಿ ನೇತ್ರದಾನ ಶಿಬಿರ ಏರ್ಪಡಿಸಲಾಗಿತ್ತು. ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ನೋಂದಣಿ ವಾಡಿಕೊಂಡರು. ರಕ್ತದಾನ ಶಿಬಿರದಲ್ಲಿ ೪೯ ವಿದ್ಯಾರ್ಥಿನಿುಂರು ರಕ್ತದಾನ ವಾಡಿದರು.

ಅಂತರ ಕಾಲೇಜು ಫೆಸ್ಟ್ ಅಂಗವಾಗಿ ಪಾಪ್ ಕ್ವಿಜ್, ಫೋಟೋಗ್ರಫಿ, ನೃತ್ಯ, ಪೇಂಟಿಂಗ್, ಹಾಡುಗಾರಿಕೆ, ಶಾರ್ಟ್ ಫಿಲಂ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಮೈಸೂರು, ಮಂಡ್ಯ, ಕೊಳ್ಳೇಗಾಲ ಮುಂತಾದ ಕಡೆಗಳಿಂದ ೨೦ಕ್ಕೂ ಹೆಚ್ಚು ಕಾಲೇಜು ವಿದ್ಯಾರ್ಥಿಗಳು ಸ್ಪರ್ಧೆಗಳಲ್ಲಿ ಪಾಲ್ಗೊಂಡರು.

ಕಾರ್ಯಕ್ರಮದಲ್ಲಿ ಪಿಯುಸಿ ಕಾಲೇಜು ಪ್ರಾಂಶುಪಾಲರಾದ ಪ್ರೊ.ನುಂನಕುವಾರಿ ಅವರನ್ನು ಸನ್ಮಾನಿಸಲಾಯಿತು. ಪ್ರಾಂಶುಪಾಲರಾದ ಪ್ರೊ.ಸಾಯಿನಾಥ್ ಮಲ್ಲಿಗೆವಾಡು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜ್ಯೋತಿಲಕ್ಷ್ಮಿಜಿ. ಕಾವ, ಡಾ.ವಿನೋದ, ಹಾಜಿರಾ ಬೇಗಂ ಭಾಗವಹಿಸಿದ್ದರು.

 

 

 

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ನಟ ಚೇತನ್‌ ಅಹಿಂಸಾ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು: ಡಾ.ರಾಜ್‌ಕುಮಾರ್‌ ಸಮಾಧಿ ಬಗ್ಗೆ ಶುರುವಾಗಿದ್ದ ವಿವಾದ ಸಂಬಂಧ ಇದೀಗ ನಟ ಚೇತನ್‌ ಅಹಿಂಸಾ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಇತ್ತೀಚೆಗಷ್ಟೇ…

7 mins ago

ನನ್ನ ಅಜ್ಜನ ರೀತಿ ಅಜಾತಶತ್ರು ಆಗುತ್ತೇನೆ: ನೂತನ ಶಾಸಕ ಸಮರ್ಥ್‌ ಶಾಮನೂರು

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿ ನೂತನ ಶಾಸಕರಾಗಿ ಆಯ್ಕೆಯಾಗಿರುವ ಸಮರ್ಥ್‌ ಶಾಮನೂರು ತಮ್ಮ ಗೆಲುವಿನ…

24 mins ago

ಉಪಚುನಾವಣೆಯಲ್ಲಿ ವಿಪಕ್ಷಗಳ ಷಡ್ಯಂತ್ರ ನಡೆಯಲಿಲ್ಲ, ನಾವೇ ಗೆದ್ದಿದ್ದೇವೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಉಪಚುನಾವಣೆಯಲ್ಲಿ ವಿಪಕ್ಷಗಳ ಷಡ್ಯಂತ್ರ ಏನೂ ನಡೆಯಲಿಲ್ಲ. ನಾನೇ ಗೆಲುವು ಸಾಧಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ. ರಾಜ್ಯದ…

2 hours ago

ಖಾಲಿ ಕಾಂಪೌಂಡ್‌ಗಳ ಮುಂದೆ ನಿಂತು ಮೂತ್ರ ವಿಸರ್ಜನೆ ಮಾಡುವವರೇ ಎಚ್ಚರ ಎಚ್ಚರ.

ನಿಮ್ಮ ತಪ್ಪನ್ನು ನಿಮಗೇ ತೋರಿಸಲಿದೆ ಕನ್ನಡಿ! ಮೈಸೂರು: ಖಾಲಿ ಕಾಂಪೌಂಡ್ ಬಳಿ ಮೂತ್ರ ವಿಸರ್ಜನೆಯ ದುರ್ವಾಸನೆ ತಪ್ಪಿಸಲು ಮೈಸೂರು ಮಹಾನಗರ…

2 hours ago

ಜನಗಣತಿ ಮಾಡುವ ವೇಳೆಯೇ ಹೃದಯಾಘಾತ: ಶಿಕ್ಷಕ ಸಾವು

ಕೆ.ಆರ್.ನಗರ: ಜನಗಣತಿ ಮಾಡುವ ವೇಳೆ ಸರ್ಕಾರಿ ಶಾಲೆಯ ಶಿಕ್ಷಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಪಟ್ಟಣದ ಕುವೆಂಪು ಬಡಾವಣೆಯಲ್ಲಿ ನಡೆದಿದೆ. ಮೃತಪಟ್ಟ…

3 hours ago

ಓದುಗರ ಪತ್ರ: ಪಂಚ.. ತಂತ್ರ !

ಪಂಚ.. ತಂತ್ರ ! ಚುನಾವಣೆಯಲ್ಲಿ ಗೆದ್ದವರಿಗೆ ಸಿಎಂ ಚಿಂತೆ, ಸೋತವರಿಗೆ ಇವಿಎಂನದೇ ಚಿಂತೆ ! -ಮ.ಗು.ಬಸವಣ್ಣ, ಜೆಎಸ್‌ಎಸ್ ಬಡಾವಣೆ, ಮೈಸೂರು

5 hours ago