ಮೈಸೂರು: ಮುಸ್ಲಿಂರಿಗೆ ಮತದಾನದ ಹಕ್ಕು ನೀಡಬಾರದು ಎಂದು ಹೇಳಿಕೆ ನೀಡಿ ಬಳಿಕ ಈ ಬಗ್ಗೆ ಕ್ಷಮೆಯಾಚಿಸಿದ ಚಂದ್ರಶೇಖರ್ ಸ್ವಾಮೀಜಿ ವಿರುದ್ಧ ಎಫ್ಐಆರ್ ದಾಖಲಿಸಿರುವುದು ಖಂಡನೀಯ ಎಂದು ಎಂಲ್ಸಿ ಎಚ್.ವಿಶ್ವನಾಥ್ ಸರ್ಕಾರದ ಕ್ರಮವನ್ನು ಖಂಡಿಸಿದ್ದಾರೆ.
ನಗರದ ಜಲದರ್ಶಿನಿ ಅತಿಥಿ ಗೃಹದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಒಕ್ಕಲಿಗ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ಮೇಲೆ ಆಗಿರುವ ಎಫ್ಐಆರ್ ಖಂಡನೀಯ. ಬಾಯತಪ್ಪಿ ಹೇಳಿರುವ ಮಾತಿಗೆ ಕ್ಷಮೆ ಕೋರಿದ್ದಾರೆ. ಇಳಿ ವಯಸ್ಸಿನಲ್ಲಿ ಅವರಿಗೆ ತೊಂದರೆ ಕೊಡಬಾರದು. ಕೂಡಲೇ ಅವರ ವಿರುದ್ಧದ ಪ್ರಕರಣವನ್ನು ವಾಪಸ್ಸು ತೆಗೆದುಕೊಳ್ಳಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು.
ಮುಡಾ ಹಿಂದಿನ ಅಧ್ಯಕ್ಷರು ಹಾಗೂ ಆಯುಕ್ತರ ಮೇಲೆ ದೂರು ದಾಖಲಿಸಿ
ಮುಡಾ ಆಸ್ತಿಗೆ ಅಧ್ಯಕ್ಷರು ಹಾಗೂ ಆಯುಕ್ತರೇ ಮಾಲೀಕರು. ಅಕ್ರಮ ಪ್ರಕರಣಗಳು ದಾಖಲಾದರೂ ದೂರು ಕೊಟ್ಟಿಲ್ಲವೇಕೆ? ಇಷ್ಟಾದ ಮೇಲೂ ಜಿಲ್ಲಾಧಿಕಾರಿಗಳು ಕಾನೂನು ಸಲಹೆ ಪಡೆದು ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎನ್ನುವುದು ಸರಿಯಲ್ಲ. ಹಿಂದಿನ ಅಧ್ಯಕ್ಷರು ಹಾಗೂ ಆಯುಕ್ತರ ಮೇಲೆ ತಕ್ಷಣ ದೂರು ದಾಖಾಲಿಸಬೇಕು ಎಂದು ಒತ್ತಾಯಿಸಿದರು.
ಸರ್ಕಾರ ಮುಡಾದ ಬಗ್ಗೆ ಗಂಭೀರ ಕ್ರಮ ಕೈಗೊಳ್ಳದಿದ್ದರೆ, ನಿವೇಶನ ಪಡೆದವರು ಪ್ರಾಣ ಕಳೆದುಕೊಳ್ಳುವ ಅಪಾಯ ಎದುರಾಗಬಹುದು. ಇದನ್ನು ಗಂಭೀರವಾಗಿ ಪರಿಗಣಿಸಿ ಎಂದು ಆಗ್ರಹಿಸಿದ ಅವರು ಮುಡಾನೇ ಅಕ್ರಮದ ಬಗ್ಗೆ ದೂರು ಕೊಟ್ಟಿಲ್ಲ ಎಂದು ಪ್ರಕರಣ ಮುಚ್ಚಿಹಾಕುವ ಪ್ರಯತ್ನ ನಡೆದಿದೆ ಎಂದು ಆರೋಪಿಸಿದರು.
ಮುಡಾದಿಂದ 140 ಫೈಲ್ಗಳನ್ನು ಐಎಎಸ್ ಅಧಿಕಾರಿ ತೆಗೆದುಕೊಂಡು ಹೋಗಿ ಸುಟ್ಟು ಹಾಕಿದ್ದಾರೆ ಎಂದು ಲೋಕಾಯುಕ್ತ ಟಿಪ್ಪಣಿಯಲ್ಲಿ ಹೇಳಿದ್ದಾರೆ. ಅವು ಯಾರಿಗೆ ಸಂಬಂಧ ಪಟ್ಟವು ಎಂಬುದನ್ನು ಸರ್ಕಾರ ತಿಳಿಸಬೇಕು ಎಂದು ಒತ್ತಾಯಿಸಿದರು.
ಹಾಸನದಲ್ಲಿ ನಿಯೋಜನೆಗೊಂಡಿರುವ ಸಮಾವೇಶ ಯಾರಿಗೋಸ್ಕರ? ಸಿದ್ದರಾಮಯ್ಯ ಅವರಿಗೆ ಸಂಕಟ ಬಂದಾಗಲೆಲ್ಲಾ ಈ ತರಹದ ಸಮಾವೇಶ ಏರ್ಪಡಿಸುತ್ತಾರೆ. ಅಹಿಂದ ವರ್ಗಕ್ಕೆ ಏನು ಮಾಡಿದ್ದಾರೆ ಎಂದು ಪ್ರಶ್ನಿಸಿದರು.
ಬೀಜಿಂಗ್: ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ…
ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…
ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…
ಕೆಲ ದಿನಗಳ ಹಿಂದಷ್ಟೇ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಚಿತ್ರನಟ ಜೋಸೆಫ್ ವಿಜಯ್ ಅವರು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಒಂದೇ ರಸ್ತೆಯಲ್ಲಿ…
ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್ಗಳನ್ನು ಚಾಲನೆ ಮಾಡುವ ಬಗ್ಗೆ…