Mysore
31
clear sky

Social Media

ಗುರುವಾರ, 13 ಫೆಬ್ರವರಿ 2025
Light
Dark

ಎಟಿಎಂಗೆ ಹಣ ತುಂಬದೇ ಕಳ್ಳಾಟ: ಇಬ್ಬರ ವಿರುದ್ಧ ಎಫ್‌ಐಆರ್‌

ಮೈಸೂರು: ಎಟಿಎಂಗೆ ಹಣ ತುಂಬದೇ ತಾವೇ ತೆಗೆದುಕೊಂಡು ಹೋದ ಆರೋಪದಲ್ಲಿ ಮೈಸೂರು ಜಿಲ್ಲೆಯಲ್ಲಿ ಇಬ್ಬರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಅಕ್ಷಯ್‌ ಕುಮಾರ್‌ ಹಾಗೂ ತೇಜಸ್ವಿನಿ ಎಂಬುವವರ ವಿರುದ್ಧ ಬಿಳಿಕೆರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಕ್ಷಯ್‌ ಕುಮಾರ್‌ ಎಂಬುವವನು ಟಿಎಲ್‌ ಎಂಟರ್‌ಪ್ರೈಸಸ್‌ನಲ್ಲಿ ಕೆಲಸ ಮಾಡುತ್ತಿದ್ದ.

ಟಿಎಲ್‌ ಎಂಟರ್‌ಪ್ರೈಸಸ್‌, ಎಟಿಎಂಗೆ ಹಣ ತುಂಬುವ ಏಜೆನ್ಸಿ ಪಡೆದಿತ್ತು. ಮೈಸೂರು ಜಿಲ್ಲೆಯ ಒಟ್ಟು 16 ಎಟಿಎಂಗಳಿಗೆ ಅಕ್ಷಯ್‌ ಹಣ ತುಂಬುತ್ತಿದ್ದ ಎನ್ನಲಾಗಿದೆ. ಇನ್ನು ಕಂಪನಿ ಪರವಾಗಿ ಹೋಗಿ ಹಣ ತುಂಬುವ ಕೆಲಸ ಮಾಡಿದ್ದ. ಆದರೆ ಈಗ ಕಂಪನಿ ಆಡಿಟ್‌ ಮಾಡಿದಾಗ ಹಣದಲ್ಲಿ ಭಾರೀ ವ್ಯತ್ಯಾಸ ಕಂಡುಬಂದಿದೆ.

ಅನುಮಾನಗೊಂಡು ಎಟಿಎಂ ಸಿಸಿ ಕ್ಯಾಮರಾ ಪರಿಶೀಲನೆ ಮಾಡಿದಾಗ ಅಕ್ಷಯ್‌ ಎಟಿಎಂಗೆ ಹಣ ಹಾಕದೇ ಬ್ಯಾಗ್‌ನಲ್ಲಿ ತುಂಬಿಕೊಂಡು ಹೋದ ದೃಶ್ಯ ಸೆರೆಯಾಗಿದೆ. ಗದ್ದಿಗೆ ಗ್ರಾಮದ ಎಟಿಎಂನಲ್ಲಿ 5.80 ಲಕ್ಷ ಹಣ ಲೋಡ್‌ ಮಾಡಿಲ್ಲ ಎಂದು ಗೊತ್ತಾಗಿದೆ.

ಅಕ್ಷಯ್‌ ಕುಮಾರ್‌ಗೆ ಆತನ ಪರಿಚಯದ ತೇಜಸ್ವಿನಿ ಎಂಬಾಕೆ ಕುಮ್ಮಕ್ಕು ನೀಡಿರುವ ಆರೋಪ ಕೇಳಿಬಂದಿದ್ದು, ಇಬ್ಬರ ವಿರುದ್ಧ ಈಗ ಎಫ್‌ಐಆರ್‌ ದಾಖಲಾಗಿದೆ.

ಈ ಹಣದಿಂದ ಇಬ್ಬರು ಚಿನ್ನ ಖರೀದಿ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಚಿನ್ನದ ಅಂಗಡಿಯಲ್ಲಿ ಇಬ್ಬರು ಚಿನ್ನ ಖರೀದಿ ಮಾಡಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

 

Tags: