ಮೈಸೂರು

ಎಟಿಎಂಗೆ ಹಣ ತುಂಬದೇ ಕಳ್ಳಾಟ: ಇಬ್ಬರ ವಿರುದ್ಧ ಎಫ್‌ಐಆರ್‌

ಮೈಸೂರು: ಎಟಿಎಂಗೆ ಹಣ ತುಂಬದೇ ತಾವೇ ತೆಗೆದುಕೊಂಡು ಹೋದ ಆರೋಪದಲ್ಲಿ ಮೈಸೂರು ಜಿಲ್ಲೆಯಲ್ಲಿ ಇಬ್ಬರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಅಕ್ಷಯ್‌ ಕುಮಾರ್‌ ಹಾಗೂ ತೇಜಸ್ವಿನಿ ಎಂಬುವವರ ವಿರುದ್ಧ ಬಿಳಿಕೆರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಕ್ಷಯ್‌ ಕುಮಾರ್‌ ಎಂಬುವವನು ಟಿಎಲ್‌ ಎಂಟರ್‌ಪ್ರೈಸಸ್‌ನಲ್ಲಿ ಕೆಲಸ ಮಾಡುತ್ತಿದ್ದ.

ಟಿಎಲ್‌ ಎಂಟರ್‌ಪ್ರೈಸಸ್‌, ಎಟಿಎಂಗೆ ಹಣ ತುಂಬುವ ಏಜೆನ್ಸಿ ಪಡೆದಿತ್ತು. ಮೈಸೂರು ಜಿಲ್ಲೆಯ ಒಟ್ಟು 16 ಎಟಿಎಂಗಳಿಗೆ ಅಕ್ಷಯ್‌ ಹಣ ತುಂಬುತ್ತಿದ್ದ ಎನ್ನಲಾಗಿದೆ. ಇನ್ನು ಕಂಪನಿ ಪರವಾಗಿ ಹೋಗಿ ಹಣ ತುಂಬುವ ಕೆಲಸ ಮಾಡಿದ್ದ. ಆದರೆ ಈಗ ಕಂಪನಿ ಆಡಿಟ್‌ ಮಾಡಿದಾಗ ಹಣದಲ್ಲಿ ಭಾರೀ ವ್ಯತ್ಯಾಸ ಕಂಡುಬಂದಿದೆ.

ಅನುಮಾನಗೊಂಡು ಎಟಿಎಂ ಸಿಸಿ ಕ್ಯಾಮರಾ ಪರಿಶೀಲನೆ ಮಾಡಿದಾಗ ಅಕ್ಷಯ್‌ ಎಟಿಎಂಗೆ ಹಣ ಹಾಕದೇ ಬ್ಯಾಗ್‌ನಲ್ಲಿ ತುಂಬಿಕೊಂಡು ಹೋದ ದೃಶ್ಯ ಸೆರೆಯಾಗಿದೆ. ಗದ್ದಿಗೆ ಗ್ರಾಮದ ಎಟಿಎಂನಲ್ಲಿ 5.80 ಲಕ್ಷ ಹಣ ಲೋಡ್‌ ಮಾಡಿಲ್ಲ ಎಂದು ಗೊತ್ತಾಗಿದೆ.

ಅಕ್ಷಯ್‌ ಕುಮಾರ್‌ಗೆ ಆತನ ಪರಿಚಯದ ತೇಜಸ್ವಿನಿ ಎಂಬಾಕೆ ಕುಮ್ಮಕ್ಕು ನೀಡಿರುವ ಆರೋಪ ಕೇಳಿಬಂದಿದ್ದು, ಇಬ್ಬರ ವಿರುದ್ಧ ಈಗ ಎಫ್‌ಐಆರ್‌ ದಾಖಲಾಗಿದೆ.

ಈ ಹಣದಿಂದ ಇಬ್ಬರು ಚಿನ್ನ ಖರೀದಿ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಚಿನ್ನದ ಅಂಗಡಿಯಲ್ಲಿ ಇಬ್ಬರು ಚಿನ್ನ ಖರೀದಿ ಮಾಡಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ದೇವನೂರಿಗೆ ಆಗಮಿಸಿದ ಪಂಪ

ಅರ್ಧ ಶತಮಾನಕ್ಕೂ ಹಿಂದಿನ ಕಾಲದ ಚಿತ್ರಗಳು  ಓ.ಎಲ್.ನಾಗಭೂಷಣ ಸ್ವಾಮಿ ದೇವನೂರ ಮಹಾದೇವ ಕನ್ನಡಿಗರ ಮನಸಿನಲ್ಲಿ ಮನೆ ಮಾಡಿರುವವರು. ಒಬ್ಬೊಬ್ಬರೂ ಮಹಾದೇವರ…

14 mins ago

ದೇವನೂರಿಗೆ ಆಗಮಿಸಿದ ಪಂಪ

ದೇಮ ಎಂಬ ನೈತಿಕ ಕೈಮರ  ಸುರೇಶ ಕಂಜರ್ಪಣೆ ಅಂದಕಾಲತ್ತಿಲೇ ನಾನು ಅರಕಲಗೂಡಲ್ಲಿ ಪಾಠ ಮಾಡುತ್ತಿದ್ದಾಗ ಅಲ್ಲಿನ ದೇವಸ್ಥಾನದಲ್ಲಿ ಶಿವರಾತ್ರಿಯಂದು ನಡೆದ…

18 mins ago

ಚೆಕ್‌ಡ್ಯಾಂ ತಡೆಗೋಡೆ ಒಡೆದು ಹಾಕಿದ ಕಿಡಿಗೇಡಿಗಳು: ಕಠಿಣ ಕ್ರಮಕ್ಕೆ ಪ್ರಜ್ಞಾವಂತ ನಾಗರಿಕರ ಆಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅಂತರ್ಜಲ ಮಟ್ಟ ಹೆಚ್ಚಳ ಮಾಡುವ ನಿಟ್ಟಿನಲ್ಲಿ ಮಳೆಯ ನೀರು ಸಂಗ್ರಹಿಸಲು…

36 mins ago

ಪ್ರವಾಸಿಗರ ಗಮನಕ್ಕೆ: ಬಲಮುರಿ ಮತ್ತು ಎಡಮುರಿ ತಾಣಗಳಿಗೆ ಪ್ರವೇಶ ನಿರ್ಬಂಧ

ಮಂಡ್ಯ: ಬೇಸಿಗೆ ರಜೆ ಹಾಗೂ ವೀಕೆಂಡ್‌ ಹಿನ್ನೆಲೆಯಲ್ಲಿ ಮಂಡ್ಯ ಭಾಗದ ಪ್ರವಾಸಿ ತಾಣಗಳಾದ ಬಲಮುರಿ ಮತ್ತು ಎಡಮುರಿ ತಾಣಗಳಿಗೆ ನಿಷೇಧ…

1 hour ago

ಹನೂರು| ಬೀದಿ ನಾಯಿ ದಾಳಿ: ಜಿಂಕೆ ಸಾವು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮೇವು ನೀರು ಅರಸಿ ಜಮೀನಿನತ್ತ ಬಂದಿದ್ದ ಜಿಂಕೆಯೊಂದರ ಮೇಲೆ ಬೀದಿ…

2 hours ago

ಕೊಡಗು ಜಿಲ್ಲೆಯಲ್ಲಿ ಮನೆ ಗಣತಿ ಕಾರ್ಯ ಚುರುಕು

ನವೀನ್ ಡಿಸೋಜ ಜಿಲ್ಲೆಯಲ್ಲಿ ಸು.೧೭೪,೧೧೪ ಕುಟುಂಬಗಳು, ಗಣತಿ ಕಾರ್ಯಕ್ಕೆ ಗುರುತು, ೭,೩೭೯ ಕುಟುಂಬಗಳಿಂದ ಸ್ವಯಂ ಗಣತಿ ಮಡಿಕೇರಿ: ನಮ್ಮ ಗಣತಿ,…

5 hours ago