ಮೈಸೂರು: ಎಟಿಎಂಗೆ ಹಣ ತುಂಬದೇ ತಾವೇ ತೆಗೆದುಕೊಂಡು ಹೋದ ಆರೋಪದಲ್ಲಿ ಮೈಸೂರು ಜಿಲ್ಲೆಯಲ್ಲಿ ಇಬ್ಬರ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಅಕ್ಷಯ್ ಕುಮಾರ್ ಹಾಗೂ ತೇಜಸ್ವಿನಿ ಎಂಬುವವರ ವಿರುದ್ಧ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಕ್ಷಯ್ ಕುಮಾರ್ ಎಂಬುವವನು ಟಿಎಲ್ ಎಂಟರ್ಪ್ರೈಸಸ್ನಲ್ಲಿ ಕೆಲಸ ಮಾಡುತ್ತಿದ್ದ.
ಟಿಎಲ್ ಎಂಟರ್ಪ್ರೈಸಸ್, ಎಟಿಎಂಗೆ ಹಣ ತುಂಬುವ ಏಜೆನ್ಸಿ ಪಡೆದಿತ್ತು. ಮೈಸೂರು ಜಿಲ್ಲೆಯ ಒಟ್ಟು 16 ಎಟಿಎಂಗಳಿಗೆ ಅಕ್ಷಯ್ ಹಣ ತುಂಬುತ್ತಿದ್ದ ಎನ್ನಲಾಗಿದೆ. ಇನ್ನು ಕಂಪನಿ ಪರವಾಗಿ ಹೋಗಿ ಹಣ ತುಂಬುವ ಕೆಲಸ ಮಾಡಿದ್ದ. ಆದರೆ ಈಗ ಕಂಪನಿ ಆಡಿಟ್ ಮಾಡಿದಾಗ ಹಣದಲ್ಲಿ ಭಾರೀ ವ್ಯತ್ಯಾಸ ಕಂಡುಬಂದಿದೆ.
ಅನುಮಾನಗೊಂಡು ಎಟಿಎಂ ಸಿಸಿ ಕ್ಯಾಮರಾ ಪರಿಶೀಲನೆ ಮಾಡಿದಾಗ ಅಕ್ಷಯ್ ಎಟಿಎಂಗೆ ಹಣ ಹಾಕದೇ ಬ್ಯಾಗ್ನಲ್ಲಿ ತುಂಬಿಕೊಂಡು ಹೋದ ದೃಶ್ಯ ಸೆರೆಯಾಗಿದೆ. ಗದ್ದಿಗೆ ಗ್ರಾಮದ ಎಟಿಎಂನಲ್ಲಿ 5.80 ಲಕ್ಷ ಹಣ ಲೋಡ್ ಮಾಡಿಲ್ಲ ಎಂದು ಗೊತ್ತಾಗಿದೆ.
ಅಕ್ಷಯ್ ಕುಮಾರ್ಗೆ ಆತನ ಪರಿಚಯದ ತೇಜಸ್ವಿನಿ ಎಂಬಾಕೆ ಕುಮ್ಮಕ್ಕು ನೀಡಿರುವ ಆರೋಪ ಕೇಳಿಬಂದಿದ್ದು, ಇಬ್ಬರ ವಿರುದ್ಧ ಈಗ ಎಫ್ಐಆರ್ ದಾಖಲಾಗಿದೆ.
ಈ ಹಣದಿಂದ ಇಬ್ಬರು ಚಿನ್ನ ಖರೀದಿ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಚಿನ್ನದ ಅಂಗಡಿಯಲ್ಲಿ ಇಬ್ಬರು ಚಿನ್ನ ಖರೀದಿ ಮಾಡಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…