Mysore-Udaipur Palace Queen train
ಚನ್ನಪಟ್ಟಣ: ತಾಲ್ಲೂಕಿನ ವಂದಾರಗುಪ್ಪೆ ಬಳಿ ಮೈಸೂರು- ಉದಯಪುರ ನಡುವೆ ಸಂಚರಿಸುವ ಪ್ಯಾಲೇಸ್ ಕ್ವೀನ್ ಹಮ್ ಸಫರ್ ಎಕ್ಸ್ಪ್ರೆಸ್ (ರೈಲು ಸಂಖ್ಯೆ: ೧೯೬೬೮) ರೈಲಿನ ಇಂಜಿನ್ನಲ್ಲಿ ಗುರುವಾರ ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಮೈಸೂರಿನಿಂದ ಹೊರಟಿದ್ದ ರೈಲು ಬೆಳಿಗ್ಗೆ ೧೧.೪೫ರ ಸುಮಾರಿಗೆ ಚನ್ನಪಟ್ಟಣ ನಿಲ್ದಾಣ ದಾಟಿ ವಂದಾರಗುಪ್ಪೆ ಬಳಿ ಚಲಿಸುತ್ತಿದ್ದಾಗ ಇದ್ದಕ್ಕಿದ್ದಂತೆ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡಿತು. ಇದನ್ನು ಗಮನಿಸಿದ ಲೋಕೊಪೈಲಟ್ ಕೂಡಲೇ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಿ ರೈಲು ನಿಲ್ಲಿಸಿದರು.
ಸ್ಥಳಕ್ಕೆ ಬಂದ ಚನ್ನಪಟ್ಟಣ ಅಗ್ನಿಶಾಮಕ ದಳದ ಸಿಬ್ಬಂದಿ ರೈಲ್ವೆ ನೌಕರರ ಸಹಕಾರದೊಂದಿಗೆ ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದರು. ಬಳಿಕ ಸ್ಥಳಕ್ಕೆ ಬೇರೆ ಇಂಜಿನ್ ತಂದು ಅಳವಡಿಸಿದ ನಂತರ ರೈಲು ಹೊರಟಿತು. ಈ ಘಟನೆಯಿಂದಾಗಿ ಕೆಲ ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಿತ್ತು ಎಂದು ರೈಲ್ವೆ ಇಲಾಖೆ ಮೂಲಗಳು ತಿಳಿಸಿವೆ.
ಮೆಮು ರೈಲುಗಳ ಸಂಚಾರ ಭಾಗಶಃ ರದ್ದು: ಜೋಲಾರಪೇಟೆಯಲ್ಲಿ ನಡೆಯುತ್ತಿರುವ ಸುರಕ್ಷತಾ ಕಾಮಗಾರಿಗಳ ಹಿನ್ನೆಲೆಯಲ್ಲಿ, ಜುಲೈ ೭ ರಿಂದ ಜುಲೈ ೧೦ರವರೆಗೆ ನಾಲ್ಕು ದಿನಗಳ ಕಾಲ ಮೆಮು ರೈಲು ಸೇವೆಗಳನ್ನು ಭಾಗಶಃ ರದ್ದುಗೊಳಿಸಲಾಗಿದೆ ಎಂದು ದಕ್ಷಿಣ ರೈಲ್ವೆ ತಿಳಿಸಿದೆ.
೧. ರೈಲು ಸಂಖ್ಯೆ ೬೬೫೫೦ ಕೆಎಸ್ಆರ್ ಬೆಂಗಳೂರು-ಜೋಲಾರಪೇಟೆ ಮೆಮು ಎಕ್ಸ್ ಪ್ರೆಸ್ ರೈಲು ಸೋಮನಾಯಕನಪಟ್ಟಿ ಮತ್ತು ಜೋಲಾರಪೇಟೆ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳಲಿದೆ. ಇದು ಜೋಲಾರಪೇಟೆ ಬದಲಿಗೆ ಸೋಮನಾಯಕನಪಟ್ಟಿಯಲ್ಲಿ ತನ್ನ ಸಂಚಾರವನ್ನು ಕೊನೆಗೊಳಿಸಲಿದೆ.
೨. ರೈಲು ಸಂಖ್ಯೆ ೬೬೫೪೯ ಜೋಲಾರಪೇಟೆ, ಕೆಎಸ್ಆರ್ ಬೆಂಗಳೂರು ಮೆಮು ಎಕ್ಸ್ ಪ್ರೆಸ್ ರೈಲು ಜೋಲಾರಪೇಟೆ ಮತ್ತು ಸೋಮನಾಯಕನಪಟ್ಟಿ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳಲಿದೆ. ಇದು ಜೋಲಾರಪೇಟೆ ಬದಲಿಗೆ ಸೋಮನಾಯಕನ ಪಟ್ಟಿಯಿಂದ ತನ್ನ ಸಂಚಾರವನ್ನು ಆರಂಭಿಸಲಿದೆ.
ಮೈಸೂರು: ಚಾಮುಂಡಿ ಬೆಟ್ಟದಲ್ಲಿ ನಡೆಯುತ್ತಿರುವ ಅವೈಜ್ಞಾನಿಕ ತೋಡಿಕೆ ಮತ್ತು ನಿರ್ಮಾಣ ಕಾರ್ಯಗಳ ವಿರುದ್ಧ ಮೈಸೂರಿನ ಹಲವು ನಾಯಕರು, ಚಿಂತಿತ ನಾಗರಿಕರು…
ಬೆಂಗಳೂರು: ಇಂದು ಕರಾಳ ದಿನ. ಕರಾಳ ರೀತಿಯಲ್ಲಿ ಈ ಅಧಿವೇಶನವನ್ನು ಕಾಂಗ್ರೆಸ್ ನಡೆಸಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.…
ಬೆಂಗಳೂರು: ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣ ಹಾಗೂ ಸದನದಲ್ಲಿ ಚರ್ಚಿಸಬಹುದಾದ ವಿಷಯಗಳಿಗೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಲು ಜನವರಿ.28ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ…
ಬೆಂಗಳೂರು: ರಾಜ್ಯಪಾಲರು ಹಾಗೂ ಕಾಂಗ್ರೆಸ್ ಸರ್ಕಾರದ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ. ಕರ್ನಾಟಕ ವಿಧಾನಸಭೆಯ ವಿಶೇಷ ಅಧಿವೇಶನದ ಮೊದಲ…
ದಾವಣಗೆರೆ: ಜಿಲ್ಲೆಯ ಆನಗೋಡಿನ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ನಾಲ್ಕು ಚುಕ್ಕೆ ಜಿಂಕೆಗಳ ಸಾವಿಗೆ ಕಾರಣ ಬಹಿರಂಗವಾಗಿದೆ. ನಾಲ್ಕು ಚುಕ್ಕೆ…
ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ರದ್ದು…