Mysore-Udaipur Palace Queen train
ಚನ್ನಪಟ್ಟಣ: ತಾಲ್ಲೂಕಿನ ವಂದಾರಗುಪ್ಪೆ ಬಳಿ ಮೈಸೂರು- ಉದಯಪುರ ನಡುವೆ ಸಂಚರಿಸುವ ಪ್ಯಾಲೇಸ್ ಕ್ವೀನ್ ಹಮ್ ಸಫರ್ ಎಕ್ಸ್ಪ್ರೆಸ್ (ರೈಲು ಸಂಖ್ಯೆ: ೧೯೬೬೮) ರೈಲಿನ ಇಂಜಿನ್ನಲ್ಲಿ ಗುರುವಾರ ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಮೈಸೂರಿನಿಂದ ಹೊರಟಿದ್ದ ರೈಲು ಬೆಳಿಗ್ಗೆ ೧೧.೪೫ರ ಸುಮಾರಿಗೆ ಚನ್ನಪಟ್ಟಣ ನಿಲ್ದಾಣ ದಾಟಿ ವಂದಾರಗುಪ್ಪೆ ಬಳಿ ಚಲಿಸುತ್ತಿದ್ದಾಗ ಇದ್ದಕ್ಕಿದ್ದಂತೆ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡಿತು. ಇದನ್ನು ಗಮನಿಸಿದ ಲೋಕೊಪೈಲಟ್ ಕೂಡಲೇ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಿ ರೈಲು ನಿಲ್ಲಿಸಿದರು.
ಸ್ಥಳಕ್ಕೆ ಬಂದ ಚನ್ನಪಟ್ಟಣ ಅಗ್ನಿಶಾಮಕ ದಳದ ಸಿಬ್ಬಂದಿ ರೈಲ್ವೆ ನೌಕರರ ಸಹಕಾರದೊಂದಿಗೆ ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದರು. ಬಳಿಕ ಸ್ಥಳಕ್ಕೆ ಬೇರೆ ಇಂಜಿನ್ ತಂದು ಅಳವಡಿಸಿದ ನಂತರ ರೈಲು ಹೊರಟಿತು. ಈ ಘಟನೆಯಿಂದಾಗಿ ಕೆಲ ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಿತ್ತು ಎಂದು ರೈಲ್ವೆ ಇಲಾಖೆ ಮೂಲಗಳು ತಿಳಿಸಿವೆ.
ಮೆಮು ರೈಲುಗಳ ಸಂಚಾರ ಭಾಗಶಃ ರದ್ದು: ಜೋಲಾರಪೇಟೆಯಲ್ಲಿ ನಡೆಯುತ್ತಿರುವ ಸುರಕ್ಷತಾ ಕಾಮಗಾರಿಗಳ ಹಿನ್ನೆಲೆಯಲ್ಲಿ, ಜುಲೈ ೭ ರಿಂದ ಜುಲೈ ೧೦ರವರೆಗೆ ನಾಲ್ಕು ದಿನಗಳ ಕಾಲ ಮೆಮು ರೈಲು ಸೇವೆಗಳನ್ನು ಭಾಗಶಃ ರದ್ದುಗೊಳಿಸಲಾಗಿದೆ ಎಂದು ದಕ್ಷಿಣ ರೈಲ್ವೆ ತಿಳಿಸಿದೆ.
೧. ರೈಲು ಸಂಖ್ಯೆ ೬೬೫೫೦ ಕೆಎಸ್ಆರ್ ಬೆಂಗಳೂರು-ಜೋಲಾರಪೇಟೆ ಮೆಮು ಎಕ್ಸ್ ಪ್ರೆಸ್ ರೈಲು ಸೋಮನಾಯಕನಪಟ್ಟಿ ಮತ್ತು ಜೋಲಾರಪೇಟೆ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳಲಿದೆ. ಇದು ಜೋಲಾರಪೇಟೆ ಬದಲಿಗೆ ಸೋಮನಾಯಕನಪಟ್ಟಿಯಲ್ಲಿ ತನ್ನ ಸಂಚಾರವನ್ನು ಕೊನೆಗೊಳಿಸಲಿದೆ.
೨. ರೈಲು ಸಂಖ್ಯೆ ೬೬೫೪೯ ಜೋಲಾರಪೇಟೆ, ಕೆಎಸ್ಆರ್ ಬೆಂಗಳೂರು ಮೆಮು ಎಕ್ಸ್ ಪ್ರೆಸ್ ರೈಲು ಜೋಲಾರಪೇಟೆ ಮತ್ತು ಸೋಮನಾಯಕನಪಟ್ಟಿ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳಲಿದೆ. ಇದು ಜೋಲಾರಪೇಟೆ ಬದಲಿಗೆ ಸೋಮನಾಯಕನ ಪಟ್ಟಿಯಿಂದ ತನ್ನ ಸಂಚಾರವನ್ನು ಆರಂಭಿಸಲಿದೆ.
ಹನೂರು : ಪಟ್ಟಣದಿಂದ ಹೂಗ್ಯಂಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿರುವ ಘಟನೆ ರಾಮಪುರ…
ಬೆಂಗಳೂರು: ಡಾ.ರಾಜ್ಕುಮಾರ್ ಸಮಾಧಿ ಬಗ್ಗೆ ಶುರುವಾಗಿದ್ದ ವಿವಾದ ಸಂಬಂಧ ಇದೀಗ ನಟ ಚೇತನ್ ಅಹಿಂಸಾ ವಿರುದ್ಧ ಎಫ್ಐಆರ್ ದಾಖಲಾಗಿದೆ. ಇತ್ತೀಚೆಗಷ್ಟೇ…
ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿ ನೂತನ ಶಾಸಕರಾಗಿ ಆಯ್ಕೆಯಾಗಿರುವ ಸಮರ್ಥ್ ಶಾಮನೂರು ತಮ್ಮ ಗೆಲುವಿನ…
ಮೈಸೂರು: ಉಪಚುನಾವಣೆಯಲ್ಲಿ ವಿಪಕ್ಷಗಳ ಷಡ್ಯಂತ್ರ ಏನೂ ನಡೆಯಲಿಲ್ಲ. ನಾನೇ ಗೆಲುವು ಸಾಧಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ. ರಾಜ್ಯದ…
ನಿಮ್ಮ ತಪ್ಪನ್ನು ನಿಮಗೇ ತೋರಿಸಲಿದೆ ಕನ್ನಡಿ! ಮೈಸೂರು: ಖಾಲಿ ಕಾಂಪೌಂಡ್ ಬಳಿ ಮೂತ್ರ ವಿಸರ್ಜನೆಯ ದುರ್ವಾಸನೆ ತಪ್ಪಿಸಲು ಮೈಸೂರು ಮಹಾನಗರ…
ಕೆ.ಆರ್.ನಗರ: ಜನಗಣತಿ ಮಾಡುವ ವೇಳೆ ಸರ್ಕಾರಿ ಶಾಲೆಯ ಶಿಕ್ಷಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಪಟ್ಟಣದ ಕುವೆಂಪು ಬಡಾವಣೆಯಲ್ಲಿ ನಡೆದಿದೆ. ಮೃತಪಟ್ಟ…