ಮೈಸೂರು

ನಾಗರಹೊಳೆ ಅಭಯಾರಣ್ಯದಲ್ಲಿ ಬೆಂಕಿ ಅನಾಹುತ ತಡೆಯಲು ಫೈರ್‌ಲೈನ್‌ ನಿರ್ಮಾಣ ಕಾರ್ಯ

ಪ್ರಶಾಂತ್‌ ಎಸ್ 

ಮೈಸೂರು: ಈ ಬಾರಿ ಮಳೆಗಾಲ ಉತ್ತಮವಾಗಿದ್ದು, ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಉದ್ಯಾನದೊಳಗಿನ ಕೆರೆ-ಕಟ್ಟೆಗಳಲ್ಲಿ ಸಮೃದ್ಧ ನೀರಿರುವ ಪರಿಣಾಮ ಇನ್ನೂ ಹಸಿರು ನಳನಳಿಸುತ್ತಿದೆ.

ಅರಣ್ಯದೊಳಗಿನ ಸೋಲಾರ್ ಪಂಪ್‌ನಿಂದಾಗಿ ಕೆರೆ-ಕಟ್ಟೆಗಳಿಗೆ ನಿರಂತರವಾಗಿ ನೀರು ತುಂಬುತ್ತಿರುವುದು ಹಾಗೂ ಉದ್ಯಾನವನದೊಳಗೆ ಹರಿಯುವ ನಾಗರಹೊಳೆ, ಸಾರಥಿ, ಲಕ್ಷ್ಮಣತೀರ್ಥ ನದಿಗಳಲ್ಲಿ ನೀರಿನ ಹರಿವು ಇರುವುದರಿಂದ ಅರಣ್ಯ ಬೆಂಕಿ ತಡೆಗೆ ಹಾಗೂ ವನ್ಯಜೀವಿಗಳ ನೀರಿನ ದಾಹ ನೀಗಿಸಲು ಸಜ್ಜಾಗಿದೆ.

ಪ್ರತಿ ವರ್ಷ ಡಿಸೆಂಬರ್ ಅಂತ್ಯದೊಳಗೆ ಫೈರ್‌ಲೈನ್ ಕಾರ್ಯ ಮುಗಿಯುತ್ತಿತ್ತು. ಈ ಬಾರಿ ಜನವರಿ ಅಂತ್ಯದೊಳಗೆ ಬಹುತೇಕ ಮುಗಿಯಬಹುದೆಂದು ನಿರೀಕ್ಷಿಸಲಾಗಿದೆ. ‌

ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯಲ್ಲಿರುವ ವೀರನಹೊಸಹಳ್ಳಿ, ಹುಣಸೂರು, ಮತ್ತಿಗೋಡು, ನಾಗರಹೊಳೆ, ಕಲ್ಲಳ್ಳ, ಅಂತರಸಂತೆ, ಮೇಟಿಕುಪ್ಪೆ, ಡಿ.ಬಿ.ಕುಪ್ಪೆ ವಲಯಗಳಲ್ಲಿ ೨,೫೩೭ ಕಿ.ಮೀ ನಷ್ಟು ಫೈರ್‌ಲೈನ್ ನಿರ್ಮಿಸಬೇಕಿದ್ದು, ಈಗಾಗಲೇ ಬೆಂಕಿರೇಖೆ ನಿರ್ಮಿಸುವ ಸಲುವಾಗಿ ಗಿಡಗಂಟಿ ತೆರವುಗೊಳಿಸಲಾಗಿದೆ. ಬಹುತೇಕ ಕಡೆಗಳಲ್ಲಿ ಪೈರ್‌ಲೈನ್ ನಿರ್ಮಿಸಲಾಗಿದೆ. ‌

ಪ್ರತಿ ವಲಯದಲ್ಲೂ ಅಗತ್ಯಕ್ಕೆ ತಕ್ಕಂತೆ ಬೆಂಕಿ ನಂದಿಸುವ ಕಾರ್ಯದಲ್ಲಿ ನುರಿತ ಸುಮಾರು ೪೦೦ ಮಂದಿ ಆದಿವಾಸಿಗಳನ್ನು ಪ್ರತಿ ವಲಯಕ್ಕೆ ೪೦-೬೫ ಮಂದಿಯಂತೆ ನೇಮಿಸಿಕೊಳ್ಳಲಾಗಿದೆ. ಇವರಿಗೆ ನಿತ್ಯ ಮಧ್ಯಾಹ್ನ ಊಟ ಮತ್ತು ಕುಡಿಯುವ ನೀರಿನ ವ್ಯವಸ್ಥೆ, ಅಗತ್ಯ ಪರಿಕರಗಳ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದು ಅರಣ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇನ್ನು ಉದ್ಯಾನವನದ ಹಲವೆಡೆ ಇರುವ ದೊಡ್ಡದಾದ ೩೧ ವೀಕ್ಷಣಾ ಗೋಪುರಗಳ ಮೂಲಕ ಹಾಗೂ ಉದ್ಯಾನವನದ ಅಂಚಿನ ಪ್ರದೇಶದ ಅಲ್ಲಲ್ಲಿ ಮರದ ಮೇಲೆ ಅಟ್ಟಣೆ ನಿರ್ಮಿಸಲಾಗಿದೆ. ಹಗಲು-ರಾತ್ರಿ ವೇಳೆ ಛಾಯಾಚಿತ್ರ ತೆಗೆಯುವ ೩ ಡ್ರೋನ್ ಕ್ಯಾಮೆರಾ ಹಾಗೂ ಅರಣ್ಯದಂಚಿನ ಪ್ರದೇಶಗಳಲ್ಲಿ ಅಕ್ರಮವಾಗಿ ಒಳನುಸುಳುವವರ ಪತ್ತೆಗಾಗಿ ಅಲ್ಲಲ್ಲಿ ಕ್ಯಾಮೆರಾ ಅಳವಡಿಸಲಾಗಿದೆ.

ಇನ್ನು ಪ್ರತಿ ವಲಯಕ್ಕೆ ಒಂದರಂತೆ ಜೀಪ್ ಮೌಂಟೆಡ್ ಟ್ಯಾಂಕರ್ ಇದೆ. ೮೦ ಸ್ಪ್ರೇಯರ್, ೧೫ ಪವರ್ ಮರ ಕತ್ತರಿಸುವ ಯಂತ್ರ, ೧೧ ಬ್ಲೋಯರ್ಸ್‌ಗಳು ಹಾಗೂ ೩ ಅಗ್ನಿಶಾಮಕ ದಳದ ವಾಹನ ಮತ್ತು ಕ್ಯೂಆರ್‌ಟಿ ವಾಹನಗಳು ಸನ್ನದ್ಧವಾಗಿವೆ. ಹುಣಸೂರು, ಡಿ.ಬಿ.ಕುಪ್ಪೆ ವಲಯಕ್ಕೆ ೨, ನಾಗರಹೊಳೆ, ವೀರನಹೊಸಹಳ್ಳಿ, ಆನೆಚೌಕೂರು, ಕಲ್ಲಹಳ್ಳ, ಮೇಟಿಕುಪ್ಪೆ, ಅಂತರಸಂತೆ ವಲಯಗಳಿಗೆ ತಲಾ ಒಂದರಂತೆ ೧೧ ವಾಹನಗಳ ವ್ಯವಸ್ಥೆ ಮಾಡಲಾಗಿದೆ.

ಇನ್ನು ಬೆಂಕಿ ನಿಯಂತ್ರಣಕ್ಕೆ ಜನವರಿಯಿಂದ ಮಾರ್ಚ್‌ ಅಂತ್ಯದವರೆಗೆ ಇಲಾಖೆಯಿಂದ ಹೆಚ್ಚುವರಿಯಾಗಿ 400 ಸಿಬ್ಬಂದಿ ನೇಮಿಸಿಕೊಂಡು, 8 ವಲಯಗಳಿಗೆ ನಿಯೋಜಿಸಲಾಗಿದೆ.

ಇಲಾಖೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ಪ್ರತಿ ದಿನಕ್ಕೆ 674 ರೂ ವೇತನ ಹಾಗೂ ರಕ್ಷಣೆ ಒದಗಿಸಲಾಗುತ್ತಿದೆ.

 

ಆಂದೋಲನ ಡೆಸ್ಕ್

Recent Posts

ಎಚ್‌.ಡಿ.ಕೋಟೆ: ಗುಜರಿ ಗೋಡೌನ್‌ಗೆ ಬೆಂಕಿ: ಲಕ್ಷಾಂತರ ರೂ ಬೆಲೆಬಾಳುವ ಸಾಮಗ್ರಿ ನಾಶ

ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್‌ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್‌ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…

39 mins ago

ವಂದೇ ಭಾರತ್‌ ರೈಲಿನಲ್ಲಿ ಕೊಟ್ಟ ಮೊಸರಿನಲ್ಲಿ ಹುಳು ಪತ್ತೆ: IRCTCಗೆ 10 ಲಕ್ಷ ರೂ ದಂಡ

ಪಾಟ್ನಾ: ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10…

49 mins ago

ಹನೂರು: ಬಿಆರ್‌ಟಿ ವನ್ಯಜೀವಿ ವ್ಯಾಪ್ತಿಯಲ್ಲಿ ಕಾಡ್ಗಿಚ್ಚು: 80 ಎಕರೆಗೂ ಹೆಚ್ಚು ಅರಣ್ಯ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…

59 mins ago

ಪಾಲಿಕೆ ಬಜೆಟ್‌ ಸತ್ವ ಇಲ್ಲದ ಬಜೆಟ್‌: ಮಾಜಿ ಮೇಯರ್‌ ಶಿವಕುಮಾರ್‌ ಆಕ್ರೋಶ

ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…

1 hour ago

ಗುಂಡ್ಲುಪೇಟೆ| ಮದ್ದೂರು ವಲಯದಲ್ಲಿ ಮತ್ತೆರಡು ಹುಲಿ ಪ್ರತ್ಯಕ್ಷ

ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…

2 hours ago

ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿದ ಸರ್ಕಾರ: ಆರ್‌.ಅಶೋಕ್‌ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…

2 hours ago