ಮೈಸೂರು

ನಾಗರಹೊಳೆ ಅಭಯಾರಣ್ಯದಲ್ಲಿ ಬೆಂಕಿ ಅನಾಹುತ ತಡೆಯಲು ಫೈರ್‌ಲೈನ್‌ ನಿರ್ಮಾಣ ಕಾರ್ಯ

ಪ್ರಶಾಂತ್‌ ಎಸ್ 

ಮೈಸೂರು: ಈ ಬಾರಿ ಮಳೆಗಾಲ ಉತ್ತಮವಾಗಿದ್ದು, ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಉದ್ಯಾನದೊಳಗಿನ ಕೆರೆ-ಕಟ್ಟೆಗಳಲ್ಲಿ ಸಮೃದ್ಧ ನೀರಿರುವ ಪರಿಣಾಮ ಇನ್ನೂ ಹಸಿರು ನಳನಳಿಸುತ್ತಿದೆ.

ಅರಣ್ಯದೊಳಗಿನ ಸೋಲಾರ್ ಪಂಪ್‌ನಿಂದಾಗಿ ಕೆರೆ-ಕಟ್ಟೆಗಳಿಗೆ ನಿರಂತರವಾಗಿ ನೀರು ತುಂಬುತ್ತಿರುವುದು ಹಾಗೂ ಉದ್ಯಾನವನದೊಳಗೆ ಹರಿಯುವ ನಾಗರಹೊಳೆ, ಸಾರಥಿ, ಲಕ್ಷ್ಮಣತೀರ್ಥ ನದಿಗಳಲ್ಲಿ ನೀರಿನ ಹರಿವು ಇರುವುದರಿಂದ ಅರಣ್ಯ ಬೆಂಕಿ ತಡೆಗೆ ಹಾಗೂ ವನ್ಯಜೀವಿಗಳ ನೀರಿನ ದಾಹ ನೀಗಿಸಲು ಸಜ್ಜಾಗಿದೆ.

ಪ್ರತಿ ವರ್ಷ ಡಿಸೆಂಬರ್ ಅಂತ್ಯದೊಳಗೆ ಫೈರ್‌ಲೈನ್ ಕಾರ್ಯ ಮುಗಿಯುತ್ತಿತ್ತು. ಈ ಬಾರಿ ಜನವರಿ ಅಂತ್ಯದೊಳಗೆ ಬಹುತೇಕ ಮುಗಿಯಬಹುದೆಂದು ನಿರೀಕ್ಷಿಸಲಾಗಿದೆ. ‌

ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯಲ್ಲಿರುವ ವೀರನಹೊಸಹಳ್ಳಿ, ಹುಣಸೂರು, ಮತ್ತಿಗೋಡು, ನಾಗರಹೊಳೆ, ಕಲ್ಲಳ್ಳ, ಅಂತರಸಂತೆ, ಮೇಟಿಕುಪ್ಪೆ, ಡಿ.ಬಿ.ಕುಪ್ಪೆ ವಲಯಗಳಲ್ಲಿ ೨,೫೩೭ ಕಿ.ಮೀ ನಷ್ಟು ಫೈರ್‌ಲೈನ್ ನಿರ್ಮಿಸಬೇಕಿದ್ದು, ಈಗಾಗಲೇ ಬೆಂಕಿರೇಖೆ ನಿರ್ಮಿಸುವ ಸಲುವಾಗಿ ಗಿಡಗಂಟಿ ತೆರವುಗೊಳಿಸಲಾಗಿದೆ. ಬಹುತೇಕ ಕಡೆಗಳಲ್ಲಿ ಪೈರ್‌ಲೈನ್ ನಿರ್ಮಿಸಲಾಗಿದೆ. ‌

ಪ್ರತಿ ವಲಯದಲ್ಲೂ ಅಗತ್ಯಕ್ಕೆ ತಕ್ಕಂತೆ ಬೆಂಕಿ ನಂದಿಸುವ ಕಾರ್ಯದಲ್ಲಿ ನುರಿತ ಸುಮಾರು ೪೦೦ ಮಂದಿ ಆದಿವಾಸಿಗಳನ್ನು ಪ್ರತಿ ವಲಯಕ್ಕೆ ೪೦-೬೫ ಮಂದಿಯಂತೆ ನೇಮಿಸಿಕೊಳ್ಳಲಾಗಿದೆ. ಇವರಿಗೆ ನಿತ್ಯ ಮಧ್ಯಾಹ್ನ ಊಟ ಮತ್ತು ಕುಡಿಯುವ ನೀರಿನ ವ್ಯವಸ್ಥೆ, ಅಗತ್ಯ ಪರಿಕರಗಳ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದು ಅರಣ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇನ್ನು ಉದ್ಯಾನವನದ ಹಲವೆಡೆ ಇರುವ ದೊಡ್ಡದಾದ ೩೧ ವೀಕ್ಷಣಾ ಗೋಪುರಗಳ ಮೂಲಕ ಹಾಗೂ ಉದ್ಯಾನವನದ ಅಂಚಿನ ಪ್ರದೇಶದ ಅಲ್ಲಲ್ಲಿ ಮರದ ಮೇಲೆ ಅಟ್ಟಣೆ ನಿರ್ಮಿಸಲಾಗಿದೆ. ಹಗಲು-ರಾತ್ರಿ ವೇಳೆ ಛಾಯಾಚಿತ್ರ ತೆಗೆಯುವ ೩ ಡ್ರೋನ್ ಕ್ಯಾಮೆರಾ ಹಾಗೂ ಅರಣ್ಯದಂಚಿನ ಪ್ರದೇಶಗಳಲ್ಲಿ ಅಕ್ರಮವಾಗಿ ಒಳನುಸುಳುವವರ ಪತ್ತೆಗಾಗಿ ಅಲ್ಲಲ್ಲಿ ಕ್ಯಾಮೆರಾ ಅಳವಡಿಸಲಾಗಿದೆ.

ಇನ್ನು ಪ್ರತಿ ವಲಯಕ್ಕೆ ಒಂದರಂತೆ ಜೀಪ್ ಮೌಂಟೆಡ್ ಟ್ಯಾಂಕರ್ ಇದೆ. ೮೦ ಸ್ಪ್ರೇಯರ್, ೧೫ ಪವರ್ ಮರ ಕತ್ತರಿಸುವ ಯಂತ್ರ, ೧೧ ಬ್ಲೋಯರ್ಸ್‌ಗಳು ಹಾಗೂ ೩ ಅಗ್ನಿಶಾಮಕ ದಳದ ವಾಹನ ಮತ್ತು ಕ್ಯೂಆರ್‌ಟಿ ವಾಹನಗಳು ಸನ್ನದ್ಧವಾಗಿವೆ. ಹುಣಸೂರು, ಡಿ.ಬಿ.ಕುಪ್ಪೆ ವಲಯಕ್ಕೆ ೨, ನಾಗರಹೊಳೆ, ವೀರನಹೊಸಹಳ್ಳಿ, ಆನೆಚೌಕೂರು, ಕಲ್ಲಹಳ್ಳ, ಮೇಟಿಕುಪ್ಪೆ, ಅಂತರಸಂತೆ ವಲಯಗಳಿಗೆ ತಲಾ ಒಂದರಂತೆ ೧೧ ವಾಹನಗಳ ವ್ಯವಸ್ಥೆ ಮಾಡಲಾಗಿದೆ.

ಇನ್ನು ಬೆಂಕಿ ನಿಯಂತ್ರಣಕ್ಕೆ ಜನವರಿಯಿಂದ ಮಾರ್ಚ್‌ ಅಂತ್ಯದವರೆಗೆ ಇಲಾಖೆಯಿಂದ ಹೆಚ್ಚುವರಿಯಾಗಿ 400 ಸಿಬ್ಬಂದಿ ನೇಮಿಸಿಕೊಂಡು, 8 ವಲಯಗಳಿಗೆ ನಿಯೋಜಿಸಲಾಗಿದೆ.

ಇಲಾಖೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ಪ್ರತಿ ದಿನಕ್ಕೆ 674 ರೂ ವೇತನ ಹಾಗೂ ರಕ್ಷಣೆ ಒದಗಿಸಲಾಗುತ್ತಿದೆ.

 

ಆಂದೋಲನ ಡೆಸ್ಕ್

Recent Posts

ಒಂದು ತಿಂಗಳು ʼಜಲ ಸಂರಕ್ಷಣಾ ಅಭಿಯಾನʼ: ಡಿಕೆ ಶಿವಕುಮಾರ್‌

ಬೆಂಗಳೂರು: ಜಲ ಸಂರಕ್ಷಣೆ ವಿಚಾರವಾಗಿ ರಾಜ್ಯದಲ್ಲಿ ಒಂದು ತಿಂಗಳುಗಳ ಕಾಲ ʼಜಲ ಸಂರಕ್ಷಣಾ ಅಭಿಯಾನʼ ಹಮ್ಮಿಕೊಳ್ಳಲಾಗಿದೆ ಎಂದು ಡಿಸಿಎಂ ಡಿಕೆ…

20 mins ago

ಸರ್ವಜ್ಞನಗರದಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ: ಸಚಿವ ಕೆ.ಜೆ.ಜಾರ್ಜ್

ಬೆಂಗಳೂರು: ಸರ್ವಜ್ಞ ನಗರದಲ್ಲಿ ನಿರ್ಮಾಣಗೊಳ್ಳುತ್ತಿರುವ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿಯನ್ನು ಕ್ಷೇತ್ರದ ಶಾಸಕರಾದ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಪರಿಶೀಲನೆ ನಡೆಸಿದರು.…

46 mins ago

ಹೊಸ 7 ವಿವಿಗಳನ್ನು ಮುಚ್ಚುವುದಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ ಸ್ಥಾಪನೆಯಾಗಿರುವ 7 ವಿಶ್ವವಿದ್ಯಾಲಯಗಳನ್ನು ಮುಚ್ಚುವುದಾಗಿ ನಾವು ಎಲ್ಲಿಯೂ ಹೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾಸಭೆಯಲ್ಲಿ…

1 hour ago

ವೈದ್ಯರ ನಿವೃತ್ತಿ ವಯಸ್ಸು ಏರಿಸಲು ಚಿಂತನೆ: ಸಚಿವ ಶರಣ ಪ್ರಕಾಶ ಪಾಟೀಲ

ಬೆಂಗಳೂರು: ವೈದ್ಯಕೀಯ ಶಿಕ್ಷಣ ಮತ್ತು ತರಬೇತಿ ಪಡೆದು ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸಿತ್ತಿರುವ ತಜ್ಞ ವೈದ್ಯರ ನಿವೃತ್ತಿ ವಯಸ್ಸನ್ನು…

2 hours ago

ನಿಯಮ ಪಾಲಿಸಿದರೆ ಗಣಿಗಾರಿಕೆಗೆ ಅನುಮತಿ: ಈಶ್ವರ್‌ ಖಂಡ್ರೆ

ಬೆಂಗಳೂರು: ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ (ಕೆ.ಐ.ಎ.ಸಿ.ಎಲ್) ನಿಬಂಧನೆಗಳನ್ನು ಸಂಪೂರ್ಣವಾಗಿ ಅನುಪಾಲನೆ ಮಾಡಿದಲ್ಲಿ ಸಂಡೂರು, ದೇವದರಿಯಲ್ಲಿ ಗಣಿಗಾರಿಕೆಗೆ ಅನುಮತಿ…

3 hours ago

ಅಪ್ಪು ಸಿನಿಮಾ ರೀ-ರಿಲೀಸ್‌: ನೆನೆದು ಭಾವುಕರಾದ ರಾಘಣ್ಣ

ಪುನೀತ್‌ ರಾಜಕುಮಾರ್‌ಗೆ 50ನೇ ವರ್ಷದ ಹುಟ್ಟು ಹಬ್ಬ ಹಿನ್ನಲೆ, ಪವರ್‌ಸ್ಟಾರ್‌ ಎಂಬ ಬಿರುದು ನೀಡಿದ ಮೊದಲ ಸಿನಿಮಾ ʼಅಪ್ಪುʼ ರೀ-ರೀಲಿಸ್‌…

3 hours ago