ಮೈಸೂರು

ನಾಗರಹೊಳೆ ಅಭಯಾರಣ್ಯದಲ್ಲಿ ಬೆಂಕಿ ಅನಾಹುತ ತಡೆಯಲು ಫೈರ್‌ಲೈನ್‌ ನಿರ್ಮಾಣ ಕಾರ್ಯ

ಪ್ರಶಾಂತ್‌ ಎಸ್ 

ಮೈಸೂರು: ಈ ಬಾರಿ ಮಳೆಗಾಲ ಉತ್ತಮವಾಗಿದ್ದು, ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಉದ್ಯಾನದೊಳಗಿನ ಕೆರೆ-ಕಟ್ಟೆಗಳಲ್ಲಿ ಸಮೃದ್ಧ ನೀರಿರುವ ಪರಿಣಾಮ ಇನ್ನೂ ಹಸಿರು ನಳನಳಿಸುತ್ತಿದೆ.

ಅರಣ್ಯದೊಳಗಿನ ಸೋಲಾರ್ ಪಂಪ್‌ನಿಂದಾಗಿ ಕೆರೆ-ಕಟ್ಟೆಗಳಿಗೆ ನಿರಂತರವಾಗಿ ನೀರು ತುಂಬುತ್ತಿರುವುದು ಹಾಗೂ ಉದ್ಯಾನವನದೊಳಗೆ ಹರಿಯುವ ನಾಗರಹೊಳೆ, ಸಾರಥಿ, ಲಕ್ಷ್ಮಣತೀರ್ಥ ನದಿಗಳಲ್ಲಿ ನೀರಿನ ಹರಿವು ಇರುವುದರಿಂದ ಅರಣ್ಯ ಬೆಂಕಿ ತಡೆಗೆ ಹಾಗೂ ವನ್ಯಜೀವಿಗಳ ನೀರಿನ ದಾಹ ನೀಗಿಸಲು ಸಜ್ಜಾಗಿದೆ.

ಪ್ರತಿ ವರ್ಷ ಡಿಸೆಂಬರ್ ಅಂತ್ಯದೊಳಗೆ ಫೈರ್‌ಲೈನ್ ಕಾರ್ಯ ಮುಗಿಯುತ್ತಿತ್ತು. ಈ ಬಾರಿ ಜನವರಿ ಅಂತ್ಯದೊಳಗೆ ಬಹುತೇಕ ಮುಗಿಯಬಹುದೆಂದು ನಿರೀಕ್ಷಿಸಲಾಗಿದೆ. ‌

ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯಲ್ಲಿರುವ ವೀರನಹೊಸಹಳ್ಳಿ, ಹುಣಸೂರು, ಮತ್ತಿಗೋಡು, ನಾಗರಹೊಳೆ, ಕಲ್ಲಳ್ಳ, ಅಂತರಸಂತೆ, ಮೇಟಿಕುಪ್ಪೆ, ಡಿ.ಬಿ.ಕುಪ್ಪೆ ವಲಯಗಳಲ್ಲಿ ೨,೫೩೭ ಕಿ.ಮೀ ನಷ್ಟು ಫೈರ್‌ಲೈನ್ ನಿರ್ಮಿಸಬೇಕಿದ್ದು, ಈಗಾಗಲೇ ಬೆಂಕಿರೇಖೆ ನಿರ್ಮಿಸುವ ಸಲುವಾಗಿ ಗಿಡಗಂಟಿ ತೆರವುಗೊಳಿಸಲಾಗಿದೆ. ಬಹುತೇಕ ಕಡೆಗಳಲ್ಲಿ ಪೈರ್‌ಲೈನ್ ನಿರ್ಮಿಸಲಾಗಿದೆ. ‌

ಪ್ರತಿ ವಲಯದಲ್ಲೂ ಅಗತ್ಯಕ್ಕೆ ತಕ್ಕಂತೆ ಬೆಂಕಿ ನಂದಿಸುವ ಕಾರ್ಯದಲ್ಲಿ ನುರಿತ ಸುಮಾರು ೪೦೦ ಮಂದಿ ಆದಿವಾಸಿಗಳನ್ನು ಪ್ರತಿ ವಲಯಕ್ಕೆ ೪೦-೬೫ ಮಂದಿಯಂತೆ ನೇಮಿಸಿಕೊಳ್ಳಲಾಗಿದೆ. ಇವರಿಗೆ ನಿತ್ಯ ಮಧ್ಯಾಹ್ನ ಊಟ ಮತ್ತು ಕುಡಿಯುವ ನೀರಿನ ವ್ಯವಸ್ಥೆ, ಅಗತ್ಯ ಪರಿಕರಗಳ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದು ಅರಣ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇನ್ನು ಉದ್ಯಾನವನದ ಹಲವೆಡೆ ಇರುವ ದೊಡ್ಡದಾದ ೩೧ ವೀಕ್ಷಣಾ ಗೋಪುರಗಳ ಮೂಲಕ ಹಾಗೂ ಉದ್ಯಾನವನದ ಅಂಚಿನ ಪ್ರದೇಶದ ಅಲ್ಲಲ್ಲಿ ಮರದ ಮೇಲೆ ಅಟ್ಟಣೆ ನಿರ್ಮಿಸಲಾಗಿದೆ. ಹಗಲು-ರಾತ್ರಿ ವೇಳೆ ಛಾಯಾಚಿತ್ರ ತೆಗೆಯುವ ೩ ಡ್ರೋನ್ ಕ್ಯಾಮೆರಾ ಹಾಗೂ ಅರಣ್ಯದಂಚಿನ ಪ್ರದೇಶಗಳಲ್ಲಿ ಅಕ್ರಮವಾಗಿ ಒಳನುಸುಳುವವರ ಪತ್ತೆಗಾಗಿ ಅಲ್ಲಲ್ಲಿ ಕ್ಯಾಮೆರಾ ಅಳವಡಿಸಲಾಗಿದೆ.

ಇನ್ನು ಪ್ರತಿ ವಲಯಕ್ಕೆ ಒಂದರಂತೆ ಜೀಪ್ ಮೌಂಟೆಡ್ ಟ್ಯಾಂಕರ್ ಇದೆ. ೮೦ ಸ್ಪ್ರೇಯರ್, ೧೫ ಪವರ್ ಮರ ಕತ್ತರಿಸುವ ಯಂತ್ರ, ೧೧ ಬ್ಲೋಯರ್ಸ್‌ಗಳು ಹಾಗೂ ೩ ಅಗ್ನಿಶಾಮಕ ದಳದ ವಾಹನ ಮತ್ತು ಕ್ಯೂಆರ್‌ಟಿ ವಾಹನಗಳು ಸನ್ನದ್ಧವಾಗಿವೆ. ಹುಣಸೂರು, ಡಿ.ಬಿ.ಕುಪ್ಪೆ ವಲಯಕ್ಕೆ ೨, ನಾಗರಹೊಳೆ, ವೀರನಹೊಸಹಳ್ಳಿ, ಆನೆಚೌಕೂರು, ಕಲ್ಲಹಳ್ಳ, ಮೇಟಿಕುಪ್ಪೆ, ಅಂತರಸಂತೆ ವಲಯಗಳಿಗೆ ತಲಾ ಒಂದರಂತೆ ೧೧ ವಾಹನಗಳ ವ್ಯವಸ್ಥೆ ಮಾಡಲಾಗಿದೆ.

ಇನ್ನು ಬೆಂಕಿ ನಿಯಂತ್ರಣಕ್ಕೆ ಜನವರಿಯಿಂದ ಮಾರ್ಚ್‌ ಅಂತ್ಯದವರೆಗೆ ಇಲಾಖೆಯಿಂದ ಹೆಚ್ಚುವರಿಯಾಗಿ 400 ಸಿಬ್ಬಂದಿ ನೇಮಿಸಿಕೊಂಡು, 8 ವಲಯಗಳಿಗೆ ನಿಯೋಜಿಸಲಾಗಿದೆ.

ಇಲಾಖೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ಪ್ರತಿ ದಿನಕ್ಕೆ 674 ರೂ ವೇತನ ಹಾಗೂ ರಕ್ಷಣೆ ಒದಗಿಸಲಾಗುತ್ತಿದೆ.

 

ಆಂದೋಲನ ಡೆಸ್ಕ್

Recent Posts

ದಸರಾ ಉನ್ನತ ಮಟ್ಟದ ಸಭೆ: ದಸರಾ ಪಾಸ್‌ಗಳನ್ನು ಸಂಪೂರ್ಣ ತಿರಸ್ಕರಿಸಿದ ಸಂಸದ ಯದುವೀರ್‌ ಒಡೆಯರ್‌

ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು…

4 hours ago

ಜೀಪಿನ ಮೇಲೆ ಬಿದ್ದ ಮರದ ಕೊಂಬೆ: ಕೂದಲೆಳೆ ಅಂತರದಲ್ಲಿ ತಪ್ಪಿದ ದುರಂತ

ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…

5 hours ago

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಅ.11ಕ್ಕೆ ದಸರಾ ಉದ್ಘಾಟನೆ

ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್‌ ಆಗಿದೆ. ಅಕ್ಟೋಬರ್.‌11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…

6 hours ago

ಜನವಸತಿ ಪ್ರದೇಶದಲ್ಲಿ ಸಂಚರಿಸಿ ಆತಂಕ ಸೃಷ್ಟಿಸಿದ ಕಾಡಾನೆ

ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…

7 hours ago

ವಯನಾಡು ಭೂಕುಸಿತ ದುರಂತ ಪ್ರಕರಣ: ಸಾವಿನ ಸಂಖ್ಯೆ 7ಕ್ಕೆ ಏರಿಕೆ

ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…

7 hours ago

ಚೀನಾ ಪ್ರವಾಹದ ಮಧ್ಯೆ 900ಕ್ಕೂ ಹೆಚ್ಚು ವಿಷಕಾರಿ ಹಾವುಗಳು ನಾಪತ್ತೆ: ನೀರಿಗೆ ಇಳಿಯದಂತೆ ಜನತೆಗೆ ಸೂಚನೆ

ಬೀಜಿಂಗ್:‌ ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…

9 hours ago