ಮೈಸೂರು

ಕಟ್ಟಕಡೆಯ ಮನುಷ್ಯನಿಗೂ ಸರ್ಕಾರದಿಂದ ಮೊಟ್ಟಮೊದಲ ಆದ್ಯತೆ: ಎಚ್.ಸಿ ಮಹದೇವಪ್ಪ

ಮೈಸೂರು : ಸಾಮಾಜಿಕ ಅಸಮಾನತೆ ವಿರುದ್ಧವಾಗಿ ಸಂವಿಧಾನವಿದೆ. ಸಂವಿಧಾನಬದ್ದ ಹಕ್ಕುಗಳ ರಕ್ಷಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬದ್ಧವಾಗಿದೆ. ತುಳಿತಕ್ಕೊಳಗಾದ ವರ್ಗವನ್ನು ಮೇಲೆತ್ತುವ ಮೂಲಕ ಕಟ್ಟಕಡೆಯ ಮನುಷ್ಯನಿಗೂ ಮೊಟ್ಟಮೊದಲ ಆದ್ಯತೆಯನ್ನು ನಮ್ಮ ಸರ್ಕಾರ ನೀಡುತ್ತಿದೆ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ತಿಳಿಸಿದರು.

ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಪೌರಕಾರ್ಮಿಕರ ವಿಶೇಷ ನೇರ ನೇಮಕಾತಿಯಲ್ಲಿ ಆಯ್ಕೆಯಾಗಿರುವ 173 ಅಭ್ಯರ್ಥಿಗಳಿಗೆ ನೇಮಕಾತಿ ಆದೇಶವನ್ನು ವಿತರಿಸಿ ಮಾತನಾಡಿದ ಸಚಿವರು, ತಳ ಸಮುದಾಯದ ಏಳಿಗೆಯೇ ನಮ್ಮ ಸರ್ಕಾರದ ಪ್ರಮುಖ ಧ್ಯೇಯವಾಗಿದೆ ಎಂದು ಹೇಳಿದರು.

ಪೌರಕಾರ್ಮಿಕ ಬಂಧುಗಳು ಊರಿನ ಕಸ ಸ್ವಚ್ಛಗೊಳಿಸಿ ನೈರ್ಮಲ್ಯ ಕಾಪಾಡುವಲ್ಲಿ ಪ್ರತಿನಿತ್ಯ ಶ್ರಮವಹಿಸುತ್ತಾರೆ. ಅತ್ಯಂತ ಕಷ್ಟದ, ನಿಕೃಷ್ಟದ ಹಾಗೂ ತ್ಯಾಗದ ಬದುಕು ನಿಮ್ಮದಾಗಿದೆ. ನಿಮ್ಮಿಂದ ಉಳಿದವರು ಸುಖದಿಂದ ಬದಕುದ್ದಾರೆ. ನೀವು ಮಾತ್ರ ಕಷ್ಟದ ಜೀವನವನ್ನೆ ನಡೆಸುತ್ತಾರೆ. ಈ ಪರಿಸ್ಥಿತಿ ಸುಧಾರಣೆಗೆ ಸರ್ಕಾರದಿಂದ ಕ್ರಮವಹಿಸಲಾಗುವುದು ಎಂದರು.

ಈಗಾಗಲೇ ನಮ್ಮ ಸರ್ಕಾರವು 4,400 ಸಫಾಯಿ ಕರ್ಮಚಾರಿಗಳಿಗೆ ತಲಾ 40 ಸಾವಿರ ರೂಪಾಯಿ ಸಹಾಯಧನ ನೀಡಿದೆ‌. ಇದಕ್ಕೆ 18 ಕೋಟಿ ರೂ. ವ್ಯಹಿಸಲಾಗಿದೆ. ಮೈಸೂರು ನಗರ ಪಾಲಿಕೆಯು ರಾಜ್ಯದಲ್ಲಿ ಎರಡನೇ ದೊಡ್ಡ ಜನಸಂಖ್ಯೆಯ ಪಾಲಿಕೆಯಾಗಿದ್ದು, ಇಂದು ನೇಮಕಾತಿ ಆದೇಶ ನೀಡುತ್ತಿರುವುದು ನನಗೆ ವೈಯಕ್ತಿಕವಾಗಿ ಸಂತೋಷವಿದೆ ಎಂದರು.

ಸ್ವಚ್ಛತೆ ಕಾಪಾಡುವುದು ನಿಮ್ಮ ಜವಬ್ದಾರಿ, ಅದರಂತೆ ನಿಮ್ಮ ಯೋಗಕ್ಷೇಮ ಕಾಪಾಡುವುದು ಸರ್ಕಾರದ ಕರ್ತವ್ಯವಾಗಿದೆ. ಈ ದೇಶದ ಮೂಲ ನಿವಾಸಿಗಳು ನಾವಾಗಿದ್ದು, ನಮ್ಮ ಸಂಸ್ಕೃತಿ ಸಿಂಧೂ ನದಿಯ ನಾಗರಿತೆಯಾಗಿದೆ. ಪ್ರತಿಯೊಬ್ಬರೂ ಮೂಢನಂಬಿಕೆ ತೊರೆದು ವೈಚಾರಿಕತೆ ರೂಢಿಸಿಕೊಳ್ಳದಿದ್ದರೆ ಶತಮಾನಕ್ಕೂ ನಾವು ಮೇಲೆ ಬರಲು ಸಾಧ್ಯವಿಲ್ಲ ಎಂದು ಕಿವಿಮಾತು ಹೇಳಿದರು.

ವಿಜ್ಞಾನ, ತಂತ್ರಜ್ಞಾನ ಬೆಳಿದಿದೆ. ವಿದೇಶಗಳಲ್ಲಿ ಸ್ವಚ್ಛತೆ ಕಸುಬು ಒಂದು ವೃತ್ತಿಯಾಗಿದೆ. ನಮ್ಮ ದೇಶದಲ್ಲಿ ಮಾತ್ರ ಒಂದು ವರ್ಗಕ್ಕೆ ಸೀಮಿತವಾಗಿದೆ. ಇಂದು ಧರ್ಮ, ದೇವರು ಹೆಸರಿನಲ್ಲಿ ಜನರನ್ನು ಭಾವನಾತ್ಮಕವಾಗಿ ದಾರಿ ತಪ್ಪಿಸುವ ಕೆಲಸ ನಡೆಯುತ್ತಿದೆ. ಈ ನಿಟ್ಟಿನಲ್ಲಿ ಸಾಂವಿಧಾನಿಕ ಹಕ್ಕುಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ರಾಜ್ಯದ ಉದ್ಧಗಲಕ್ಕೂ ‘ಸಂವಿಧಾನ ಜಾಗೃತಿ ಜಾಥಾ’ ಹಮ್ಮಿಕೊಳ್ಳಲಾಗಿದೆ ಎಂದರು.

ಶಾಸಕ ಹರೀಶ್ ಗೌಡ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯರಾದ ಡಾ.ಡಿ.ತಿಮ್ಮಯ್ಯ, ಸಿ.ಎನ್.ಮಂಜೇಗೌಡ, ಮರಿತಿಬ್ಬೇಗೌಡ, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ನಗರ ಪಾಲಿಕೆ ಆಯುಕ್ತ ಅರ್ಷಾದ್ ಉರ್ ರೆಹಮಾನ್ ಷರೀಫ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

andolanait

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

9 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

9 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

9 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

9 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

9 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

9 hours ago