ಮೈಸೂರು: ನಿನ್ನೆ (ಗುರುವಾರ, ಮೇ.3) ಮೈಸೂರು ಜಿಲ್ಲೆಯಾದ್ಯಂತ ಗುಡುಗು,ಮಿಂಚು ಬಿರುಗಾಳಿ ಸಹಿತ ಆರ್ಭಟಿಸಿದ ಭಾರೀ ಮಳೆಗೆ ನಗರದಾದ್ಯಂತ ಅಪಾರ ಹಾನಿಯಾಗಿದೆ.
ಮೈಸೂರು ನಗರದ ಹಲವು ಭಾಗಗಳಲ್ಲಿ ಆಲಕಲ್ಲು ಸಹಿತ ಮಳೆ ಬಂದಿದೆ. ಜೊತೆಗೆ ಭಾರೀ ಮಳೆಗೆ ಕೂಲಿಂಗ್ ಶೀಟ್ ತಲೆ ಮೇಲೆ ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಮೈಸೂರಿನ ಆಳನಹಳ್ಳಿಯಲ್ಲಿ ನಡೆದಿದೆ. ಮಾರಶೆಟ್ಟನ ಹಳ್ಳಿಯ 34 ವರ್ಷದ ಶಿವಕುಮಾರ್ ಮೃತರಾದವರು. ಇವರು ಆಲನಹಳ್ಳಿಯಲ್ಲಿ ಕಟ್ಟಡ ಕಾಮಗಾರಿ ಮಾಡುತ್ತಿದ್ದರು. ಈ ವೇಳೆ ಏಕಾಏಕಿ ಬಿರುಗಾಳಿ ಸಹಿತ ಬಂದ ಮಳೆಯಿಂದ ಕೂಲಿಂಗ್ ಶೀಟರ್ ತಲೆಮೇಲೆ ಬಿದ್ದು, ಸಾವನ್ನಪ್ಪಿದ್ದಾರೆ. ಈ ಸಂಬಂಧ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೊದಲ ಮಳೆಗೆ ಧರೆಗುರುಳಿದ ಮರಗಳು: ಇನ್ನು ನಿನ್ನೆ ಸಂಜೆ ಮೈಸೂರು ನಗರದಾದ್ಯಂತ ಸುರಿದ ಭಾರೀ ಮಳೆಗೆ ನಗರದ ಪ್ರಮುಖ ಬೀದಿಗಳಲ್ಲಿನ ಹಳೆಯ ಕಟ್ಟಡಗಳು, ಮರಗಳು ರಸ್ತೆ ಮೇಲೆ ಉರುಳಿರುವ ದೃಶ್ಯ ಕಂಡುಬಂದಿದೆ.
ಕುಕ್ಕರಹಳ್ಳಿ ಕರೆ ಸಮೀಪ ವಿದ್ಯುತ್ ಲೈನ್ ಮೇಲೆ ಮರ ಮುರಿದು ಬಿದ್ದಿದೆ. ಸರಸ್ವತಿ ಪುರಂನ ಫೈರ್ ಬ್ರಿಗೇಡ್ ಬಳಿಯ ಅಂಡರ್ಪಾಸ್ ಒಳಗೆ ಮರ ಬಿದ್ದಿದೆ, ಮಹಾರಾಣಿ ಕಾಲೇಜು, ಜೆಎಸ್ಎಸ್ ಕಾಲೇಜು ಸರಸ್ವತಿ ಪುರಂ ಭಾಗದಲ್ಲಿ ಮರಗಳು ನೆಲಕ್ಕುರುಳಿದೆ. ಇನ್ನು ಅರಮನೆ ಕೋಟೆ ಮಾರಿಯಮ್ಮ ದೇವಾಲಯ ಆವರಣ ಜಲಾವೃತವಾಗಿದ್ದರೇ, ಮೈಸೂರು ನಗರ ಬಸ್ ನಿಲ್ದಾಣವೂ ಕೂಡಾ ಕೆಲಕಾಲ ಜಲಾವೃತವಾಗಿತ್ತು. ಜೊತೆಗೆ ಮೈಸೂರಿಗೆ ವರ್ಷದ ಮೊದಲ ಮಳೆ ಆಲಿಕಲ್ಲಿನ ಜೊತೆಗೆ ಬಂದಿರುವುದು ವಿಶೇಷವಾಗಿತ್ತು.
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಕಡು ಕಹಿ ಎಲೆ, ಕಾಂಡ, ಕಾಯಿ ನೀಡುವ ಬೇವಿನ ಮರದಲ್ಲಿ…
ಬೆಂಗಳೂರು: ರೈಲ್ವೆಯ ಯಾವುದೇ ಪರೀಕ್ಷೆಯಿರಲಿ, ಅದನ್ನು ಕನ್ನಡದಲ್ಲೇ ಕಡ್ಡಾಯವಾಗಿ ನಡೆಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ…
ಮಂಡ್ಯ: ಜನವರಿ.27ರಿಂದ ಪ್ರಾರಂಭವಾಗಿರುವ ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಹಿನ್ನೆಲೆಯಲ್ಲಿ ಇಂದು ತಾಲ್ಲೂಕಿನ ಸೂನಗನಹಳ್ಳಿ ಮತ್ತು ತಗ್ಗಹಳ್ಳಿ ಗ್ರಾಮದ ಸರ್ಕಾರಿ…
ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಉಂಟಾದ ಭಾರೀ ಗದ್ದಲ ಮತ್ತು ಸ್ಪೀಕರ್ ಪೀಠದ ಕಡೆಗೆ ಪೇಪರ್ ಹರಿದು…
ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಯೋಜನೆಯನ್ನು ವಿರೋಧಿಸಿ ಹಾಗೂ ಹಳೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಟಳ್ಳಿ ಹಾಗೂ ಸುಳ್ವಾಡಿ…