ಮೈಸೂರು: ನಿನ್ನೆ (ಗುರುವಾರ, ಮೇ.3) ಮೈಸೂರು ಜಿಲ್ಲೆಯಾದ್ಯಂತ ಗುಡುಗು,ಮಿಂಚು ಬಿರುಗಾಳಿ ಸಹಿತ ಆರ್ಭಟಿಸಿದ ಭಾರೀ ಮಳೆಗೆ ನಗರದಾದ್ಯಂತ ಅಪಾರ ಹಾನಿಯಾಗಿದೆ.
ಮೈಸೂರು ನಗರದ ಹಲವು ಭಾಗಗಳಲ್ಲಿ ಆಲಕಲ್ಲು ಸಹಿತ ಮಳೆ ಬಂದಿದೆ. ಜೊತೆಗೆ ಭಾರೀ ಮಳೆಗೆ ಕೂಲಿಂಗ್ ಶೀಟ್ ತಲೆ ಮೇಲೆ ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಮೈಸೂರಿನ ಆಳನಹಳ್ಳಿಯಲ್ಲಿ ನಡೆದಿದೆ. ಮಾರಶೆಟ್ಟನ ಹಳ್ಳಿಯ 34 ವರ್ಷದ ಶಿವಕುಮಾರ್ ಮೃತರಾದವರು. ಇವರು ಆಲನಹಳ್ಳಿಯಲ್ಲಿ ಕಟ್ಟಡ ಕಾಮಗಾರಿ ಮಾಡುತ್ತಿದ್ದರು. ಈ ವೇಳೆ ಏಕಾಏಕಿ ಬಿರುಗಾಳಿ ಸಹಿತ ಬಂದ ಮಳೆಯಿಂದ ಕೂಲಿಂಗ್ ಶೀಟರ್ ತಲೆಮೇಲೆ ಬಿದ್ದು, ಸಾವನ್ನಪ್ಪಿದ್ದಾರೆ. ಈ ಸಂಬಂಧ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೊದಲ ಮಳೆಗೆ ಧರೆಗುರುಳಿದ ಮರಗಳು: ಇನ್ನು ನಿನ್ನೆ ಸಂಜೆ ಮೈಸೂರು ನಗರದಾದ್ಯಂತ ಸುರಿದ ಭಾರೀ ಮಳೆಗೆ ನಗರದ ಪ್ರಮುಖ ಬೀದಿಗಳಲ್ಲಿನ ಹಳೆಯ ಕಟ್ಟಡಗಳು, ಮರಗಳು ರಸ್ತೆ ಮೇಲೆ ಉರುಳಿರುವ ದೃಶ್ಯ ಕಂಡುಬಂದಿದೆ.
ಕುಕ್ಕರಹಳ್ಳಿ ಕರೆ ಸಮೀಪ ವಿದ್ಯುತ್ ಲೈನ್ ಮೇಲೆ ಮರ ಮುರಿದು ಬಿದ್ದಿದೆ. ಸರಸ್ವತಿ ಪುರಂನ ಫೈರ್ ಬ್ರಿಗೇಡ್ ಬಳಿಯ ಅಂಡರ್ಪಾಸ್ ಒಳಗೆ ಮರ ಬಿದ್ದಿದೆ, ಮಹಾರಾಣಿ ಕಾಲೇಜು, ಜೆಎಸ್ಎಸ್ ಕಾಲೇಜು ಸರಸ್ವತಿ ಪುರಂ ಭಾಗದಲ್ಲಿ ಮರಗಳು ನೆಲಕ್ಕುರುಳಿದೆ. ಇನ್ನು ಅರಮನೆ ಕೋಟೆ ಮಾರಿಯಮ್ಮ ದೇವಾಲಯ ಆವರಣ ಜಲಾವೃತವಾಗಿದ್ದರೇ, ಮೈಸೂರು ನಗರ ಬಸ್ ನಿಲ್ದಾಣವೂ ಕೂಡಾ ಕೆಲಕಾಲ ಜಲಾವೃತವಾಗಿತ್ತು. ಜೊತೆಗೆ ಮೈಸೂರಿಗೆ ವರ್ಷದ ಮೊದಲ ಮಳೆ ಆಲಿಕಲ್ಲಿನ ಜೊತೆಗೆ ಬಂದಿರುವುದು ವಿಶೇಷವಾಗಿತ್ತು.
ಬೆಂಡರವಾಡಿ ಕೆರೆಗೆ ಹಾರಿ ಮಂಡ್ಯ ಜಿಲ್ಲೆಯ ವ್ಯಕ್ತಿ ಆತ್ಮಹತ್ಯೆ ಚಾಮರಾಜನಗರ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ…
ಹೈದರಾಬಾದ್: ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ…
ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…
ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್ ಐಕಾನ್ ಲಿಯಾಂಡರ್ ಪೇಸ್ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…
ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…