ಮೈಸೂರು

ಮೈಸೂರಿಗೆ ವರುಣ ಸಿಂಚನ: ನಗರದಾದ್ಯಂತ ಧರೆಗುರುಳಿದ ಮರಗಳು, ಒಂದು ಸಾವು

ಮೈಸೂರು: ನಿನ್ನೆ (ಗುರುವಾರ, ಮೇ.3) ಮೈಸೂರು ಜಿಲ್ಲೆಯಾದ್ಯಂತ ಗುಡುಗು,ಮಿಂಚು ಬಿರುಗಾಳಿ ಸಹಿತ ಆರ್ಭಟಿಸಿದ ಭಾರೀ ಮಳೆಗೆ ನಗರದಾದ್ಯಂತ ಅಪಾರ ಹಾನಿಯಾಗಿದೆ.

ಮೈಸೂರು ನಗರದ ಹಲವು ಭಾಗಗಳಲ್ಲಿ ಆಲಕಲ್ಲು ಸಹಿತ ಮಳೆ ಬಂದಿದೆ. ಜೊತೆಗೆ ಭಾರೀ ಮಳೆಗೆ ಕೂಲಿಂಗ್‌ ಶೀಟ್‌ ತಲೆ ಮೇಲೆ ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಮೈಸೂರಿನ ಆಳನಹಳ್ಳಿಯಲ್ಲಿ ನಡೆದಿದೆ. ಮಾರಶೆಟ್ಟನ ಹಳ್ಳಿಯ 34 ವರ್ಷದ ಶಿವಕುಮಾರ್‌ ಮೃತರಾದವರು. ಇವರು ಆಲನಹಳ್ಳಿಯಲ್ಲಿ ಕಟ್ಟಡ ಕಾಮಗಾರಿ ಮಾಡುತ್ತಿದ್ದರು. ಈ ವೇಳೆ ಏಕಾಏಕಿ ಬಿರುಗಾಳಿ ಸಹಿತ ಬಂದ ಮಳೆಯಿಂದ ಕೂಲಿಂಗ್‌ ಶೀಟರ್‌ ತಲೆಮೇಲೆ ಬಿದ್ದು, ಸಾವನ್ನಪ್ಪಿದ್ದಾರೆ. ಈ ಸಂಬಂಧ ಆಲನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೊದಲ ಮಳೆಗೆ ಧರೆಗುರುಳಿದ ಮರಗಳು: ಇನ್ನು ನಿನ್ನೆ ಸಂಜೆ ಮೈಸೂರು ನಗರದಾದ್ಯಂತ ಸುರಿದ ಭಾರೀ ಮಳೆಗೆ ನಗರದ ಪ್ರಮುಖ ಬೀದಿಗಳಲ್ಲಿನ ಹಳೆಯ ಕಟ್ಟಡಗಳು, ಮರಗಳು ರಸ್ತೆ ಮೇಲೆ ಉರುಳಿರುವ ದೃಶ್ಯ ಕಂಡುಬಂದಿದೆ.

ಕುಕ್ಕರಹಳ್ಳಿ ಕರೆ ಸಮೀಪ ವಿದ್ಯುತ್‌ ಲೈನ್‌ ಮೇಲೆ ಮರ ಮುರಿದು ಬಿದ್ದಿದೆ. ಸರಸ್ವತಿ ಪುರಂನ ಫೈರ್‌ ಬ್ರಿಗೇಡ್‌ ಬಳಿಯ ಅಂಡರ್‌ಪಾಸ್‌ ಒಳಗೆ ಮರ ಬಿದ್ದಿದೆ, ಮಹಾರಾಣಿ ಕಾಲೇಜು, ಜೆಎಸ್‌ಎಸ್‌ ಕಾಲೇಜು ಸರಸ್ವತಿ ಪುರಂ ಭಾಗದಲ್ಲಿ ಮರಗಳು ನೆಲಕ್ಕುರುಳಿದೆ. ಇನ್ನು ಅರಮನೆ ಕೋಟೆ ಮಾರಿಯಮ್ಮ ದೇವಾಲಯ ಆವರಣ ಜಲಾವೃತವಾಗಿದ್ದರೇ, ಮೈಸೂರು ನಗರ ಬಸ್‌ ನಿಲ್ದಾಣವೂ ಕೂಡಾ ಕೆಲಕಾಲ ಜಲಾವೃತವಾಗಿತ್ತು. ಜೊತೆಗೆ ಮೈಸೂರಿಗೆ ವರ್ಷದ ಮೊದಲ ಮಳೆ ಆಲಿಕಲ್ಲಿನ ಜೊತೆಗೆ ಬಂದಿರುವುದು ವಿಶೇಷವಾಗಿತ್ತು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆ

ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆಯಾಗಿದೆ. ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಪರದಂಡ…

1 hour ago

ಪೊಲೀಸ್ ಠಾಣೆ ಕೂಗಳತೆ ದೂರದಲ್ಲಿ ಯುವಕನ ಭೀಕರ ಕೊಲೆ

ಶ್ರೀರಂಗಪಟ್ಟಣ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್ ಗ್ರಾಮದಲ್ಲಿ ತಡರಾತ್ರಿ ಭೀಕರ ಕೊಲೆ ನಡೆದಿದ್ದು, ಯುವಕನೊಬ್ಬನನ್ನು ದುಷ್ಕರ್ಮಿಗಳು ಅತ್ಯಂತ ಬರ್ಬರವಾಗಿ…

2 hours ago

ಮಲ್ಲಯ್ಯನಪುರ ಗುಡ್ಡದಲ್ಲಿ ಥೋರಿಯಂ ಖನಿಜ ನಿಕ್ಷೇಪ ಪತ್ತೆ

ಗುಂಡ್ಲುಪೇಟೆ: ಪಟ್ಟಣ ಮತ್ತು ಮಲ್ಲಯ್ಯನಪುರ ನಡುವಿನ ಅನ್ಗಲ್ ಗುಡ್ಡದ ತಪ್ಪಲಿನ ಪ್ರದೇಶದಲ್ಲಿ ಅಪರೂಪದ ಥೋರಿಯಂ ನಿಕ್ಷೇಪ ಪತ್ತೆಯಾಗಿದೆ. ಹಿಂದಿನ ವರ್ಷ…

7 hours ago

ಓದುಗರ ಪತ್ರ: ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಸ್ಥಳಾಂತರಿಸಿ

ಹೆಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಮೈಸೂರು -ಮಾನಂದವಾಡಿ ಮುಖ್ಯ ರಸ್ತೆಯಲ್ಲಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಖಾಸಗಿ ಕಟ್ಟಡದ ಎರಡನೇ…

7 hours ago

ಓದುಗರ ಪತ್ರ: ಕಾಣಿಕೆ ದುರುಪಯೋಗ ತಡೆಗೆ ಸರ್ಕಾರ ಮುಂದಾಗಲಿ

ಅಯೋಧ್ಯೆಯ ರಾಮ ಮಂದಿರವೂ ಸೇರಿದಂತೆ ದೇಶದ ವಿವಿಧ ದೇವಾಲಯಗಳಲ್ಲಿ ಕಾಣಿಕೆ ಹಣ, ದೇವರಿಗೆ ಭಕ್ತರು ಕಾಣಿಕೆ ರೂಪದಲ್ಲಿ ಸಲ್ಲಿಸುವ ಚಿನ್ನಾಭರಣಗಳು…

7 hours ago

ಓದುಗರ ಪತ್ರ: ಮರದ ಕೆಳಗಿರುವ ವಿದ್ಯುತ್ ಕೇಬಲ್ ತೆರವುಗೊಳಿಸಿ

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ(ಸೆಸ್ಕ್)ದವರು ಮೈಸೂರು ನಗರದ ವಿವಿಧೆಡೆ ಭೂಗತ ಕೇಬಲ್‌ಗಳನ್ನು ಅಳವಡಿಸುತ್ತಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಸೆಸ್ಕ್ ಯುಜಿ ಕೇಬಲ್…

7 hours ago