ಮೈಸೂರು: ನಿನ್ನೆ (ಗುರುವಾರ, ಮೇ.3) ಮೈಸೂರು ಜಿಲ್ಲೆಯಾದ್ಯಂತ ಗುಡುಗು,ಮಿಂಚು ಬಿರುಗಾಳಿ ಸಹಿತ ಆರ್ಭಟಿಸಿದ ಭಾರೀ ಮಳೆಗೆ ನಗರದಾದ್ಯಂತ ಅಪಾರ ಹಾನಿಯಾಗಿದೆ.
ಮೈಸೂರು ನಗರದ ಹಲವು ಭಾಗಗಳಲ್ಲಿ ಆಲಕಲ್ಲು ಸಹಿತ ಮಳೆ ಬಂದಿದೆ. ಜೊತೆಗೆ ಭಾರೀ ಮಳೆಗೆ ಕೂಲಿಂಗ್ ಶೀಟ್ ತಲೆ ಮೇಲೆ ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಮೈಸೂರಿನ ಆಳನಹಳ್ಳಿಯಲ್ಲಿ ನಡೆದಿದೆ. ಮಾರಶೆಟ್ಟನ ಹಳ್ಳಿಯ 34 ವರ್ಷದ ಶಿವಕುಮಾರ್ ಮೃತರಾದವರು. ಇವರು ಆಲನಹಳ್ಳಿಯಲ್ಲಿ ಕಟ್ಟಡ ಕಾಮಗಾರಿ ಮಾಡುತ್ತಿದ್ದರು. ಈ ವೇಳೆ ಏಕಾಏಕಿ ಬಿರುಗಾಳಿ ಸಹಿತ ಬಂದ ಮಳೆಯಿಂದ ಕೂಲಿಂಗ್ ಶೀಟರ್ ತಲೆಮೇಲೆ ಬಿದ್ದು, ಸಾವನ್ನಪ್ಪಿದ್ದಾರೆ. ಈ ಸಂಬಂಧ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೊದಲ ಮಳೆಗೆ ಧರೆಗುರುಳಿದ ಮರಗಳು: ಇನ್ನು ನಿನ್ನೆ ಸಂಜೆ ಮೈಸೂರು ನಗರದಾದ್ಯಂತ ಸುರಿದ ಭಾರೀ ಮಳೆಗೆ ನಗರದ ಪ್ರಮುಖ ಬೀದಿಗಳಲ್ಲಿನ ಹಳೆಯ ಕಟ್ಟಡಗಳು, ಮರಗಳು ರಸ್ತೆ ಮೇಲೆ ಉರುಳಿರುವ ದೃಶ್ಯ ಕಂಡುಬಂದಿದೆ.
ಕುಕ್ಕರಹಳ್ಳಿ ಕರೆ ಸಮೀಪ ವಿದ್ಯುತ್ ಲೈನ್ ಮೇಲೆ ಮರ ಮುರಿದು ಬಿದ್ದಿದೆ. ಸರಸ್ವತಿ ಪುರಂನ ಫೈರ್ ಬ್ರಿಗೇಡ್ ಬಳಿಯ ಅಂಡರ್ಪಾಸ್ ಒಳಗೆ ಮರ ಬಿದ್ದಿದೆ, ಮಹಾರಾಣಿ ಕಾಲೇಜು, ಜೆಎಸ್ಎಸ್ ಕಾಲೇಜು ಸರಸ್ವತಿ ಪುರಂ ಭಾಗದಲ್ಲಿ ಮರಗಳು ನೆಲಕ್ಕುರುಳಿದೆ. ಇನ್ನು ಅರಮನೆ ಕೋಟೆ ಮಾರಿಯಮ್ಮ ದೇವಾಲಯ ಆವರಣ ಜಲಾವೃತವಾಗಿದ್ದರೇ, ಮೈಸೂರು ನಗರ ಬಸ್ ನಿಲ್ದಾಣವೂ ಕೂಡಾ ಕೆಲಕಾಲ ಜಲಾವೃತವಾಗಿತ್ತು. ಜೊತೆಗೆ ಮೈಸೂರಿಗೆ ವರ್ಷದ ಮೊದಲ ಮಳೆ ಆಲಿಕಲ್ಲಿನ ಜೊತೆಗೆ ಬಂದಿರುವುದು ವಿಶೇಷವಾಗಿತ್ತು.
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…