ಮೈಸೂರು

ಮೈಸೂರಲ್ಲಿ ಮೊದಲ ಬಾರಿಗೆ ಚಕ್ಕುಲಿ ಕಂಬಳ ಮೇಳ

ಮೈಸೂರು : ಫೋರ್ ಸೀ ಸೆಂಟರ್ ಫಾರ್ ಕಲ್ಚರ್ ಕಮ್ಯುನಿಕೇಷನ್ ಅಂಡ್ ಕ್ರಿಯೇಟಿವಿಟಿ ಸಂಸ್ಥೆ ವತಿಯಿಂದ ಉತ್ತರ ಕನ್ನಡ ಜಿಲ್ಲಾ ಸಾಂಸ್ಕೃತಿಕ ಸಂಘದ ಸಭಾಂಗಣದಲ್ಲಿ, ಮೈಸೂರಿನಲ್ಲಿ ವಾಸಿಸುತ್ತಿರುವ ಮಲೆನಾಡು ಹಾಗೂ ಕರಾವಳಿ ಭಾಗದ ಜನರಿಗಾಗಿ ಮೊದಲ ಬಾರಿಗೆ ಸಾಮೂಹಿಕ ಚಕ್ಕುಲಿ ಕಂಬಳ ಮೇಳ ಆಯೋಜಿಸಲಾಗಿತ್ತು.

ಚಕ್ಕುಲಿ ಕಂಬಳ ಮಲೆನಾಡು ಹಾಗೂ ಕರಾವಳಿ ಭಾಗದ ಅತ್ಯಂತ ಜನಪ್ರಿಯ ಆಚರಣೆಯಾಗಿದೆ. ನಾಗೇಂದ್ರಭಟ್ ಅವರ ಸಾರಥ್ಯದಲ್ಲಿ ಕಂಬಳ ಮೇಳ ನಡೆಯಿತು. ಮೇಳದಲ್ಲಿ ೩೦ಕ್ಕೂ ಹೆಚ್ಚಿನ ಕರಾವಳಿ ಹಾಗೂ ಮಲೆನಾಡಿನ ಭಾಗದ ಮಹಿಳೆಯರು ಭಾಗವಹಿಸಿದ್ದರು. ಮೇಳದಲ್ಲಿ ಸಾಮೂಹಿಕವಾಗಿ ಭಾಗವಹಿಸಿದ ಮಹಿಳೆಯರು ಚಕ್ಕುಲಿ ಮಾಡಿ ಸಂತಸಪಟ್ಟರು.

ಸುಮಾರು ೧೦ ಕೆ.ಜಿ ಅಕ್ಕಿ ಹಿಟ್ಟು ಬಳಸಿ ೫ ಲೀಟರ್ ನಷ್ಟು ಬಿಸಿ ನೀರಿಗೆ ಬೆಣ್ಣೆ, ಸಾಸಿವೆ, ಹೋಮ್ ಕಾಳು ಬೆರಸಿ ಅದಕ್ಕೆ ಅಗತ್ಯಕ್ಕೆ ತಕ್ಕಷ್ಟು ಉಪ್ಪು ಸೇರಿಸಿ ನೀರು ಕುದಿಸಿ, ನಂತರ ಅಕ್ಕಿ ಹಿಟ್ಟಿಗೆ ಹಾಕಿ ಹದವಾಗಿ ಹಿಟ್ಟನ್ನು ಕಲಸಲಾಯಿತು. ಬಳಿಕ ಅಲ್ಲಿದ್ದ ಮಹಿಳೆಯರು ಹಿಟ್ಟನ್ನು ಉಂಡೆಗಳನ್ನಾಗಿ ಮಾಡಿಕೊಂಡು ಬಾಳೆ ಎಲೆಯ ಮೇಲೆ ಎಣ್ಣೆ ಸವರಿ, ಚಕ್ಕುಲಿಯ ಒಳ್ಳುಗಳಲ್ಲಿ ಹಿಟ್ಟನ್ನು ಹಾಕಿ ವೃತಾಕಾರದಲ್ಲಿ ಚಕ್ಕುಲಿ ಮಾಡಿದರು. ಬಳಿಕ ಎಣ್ಣೆಯಲ್ಲಿ ಚಕ್ಕುಲಿಯನ್ನು ಕರಿದು ಮನೆಗಳಿಗೆ ಕೊಂಡೋಯ್ದರು.

ಪಾರಂಪರಿಕ ಆಚರಣೆ
ಕಾರ್ಯಕ್ರಮ ಆಯೋಜಿಸಿದ್ದ ಸಂಸ್ಥೆಯ ಮುಖ್ಯಸ್ಥೆ ಸಿರಿ ಅವರು ಮೇಳ ಕುರಿತು ಮಾತನಾಡಿ ಚಕ್ಕುಲಿ ಕಂಬಳ ಇದೊಂದು ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಕಂಡು ಬರುವ ಪ್ರಮುಖ ಆರಚಣೆಯಾಗಿದ್ದು, ಪಾರಂಪರಿಕವಾಗಿ ನಡೆದುಕೊಂಡು ಬರುತ್ತಿದೆ. ಚಕ್ಕುಲಿ ಕಂಬಳ ಎಂದರೆ ಗಣೇಶ ಚತುರ್ಥಿ ಅಥವಾ ಚೌತಿ ಹಬ್ಬದ ವಿಶೇಷವಾಗಿದೆ. ಹಬ್ಬಕ್ಕೂ ಒಂದು ವಾರ ಮೊದಲು ಈ ಚಕ್ಕುಲಿ ಕಂಬಳವನ್ನು ಗ್ರಾಮಗಳಲ್ಲಿ ಸಾಮೂಹಿಕವಾಗಿ ಎಲ್ಲರೂ ಒಂದೆಡೆ ಭಾಗವಹಿಸಿ ಚಕ್ಕುಲಿ ತಯಾರಿ ಮನೆಗಳಿಗೆ ತೆಗೆದುಕೊಂಡು ಹೋಗಲಾಗುತ್ತದೆ.

ಚಕ್ಕುಲಿಯನ್ನು ಮೀಸಲಿರಿಸಿ ಚೌತಿ ಹಬ್ಬದ ದಿನದಂದು ಗಣಪತಿಗೆ ನೈವೇದ್ಯಕ್ಕಿರಿಸಲಾಗುತ್ತದೆ ಎಂದರು. ಇದೇ ಮೊದಲ ಬಾರಿಗೆ ಮೈಸೂರಿನಲ್ಲಿ ಆಯೋಜಿಸಿದ್ದು ಪಾರಂಪರಿಕ ಆಚರಣೆಯನ್ನು ಮುಂದುವರೆಸಿಕೊಂಡು ಹೋಗುವ ಉದ್ಧೇಶದಿಂದ ಚಕ್ಕುಲಿ ಕಂಬಳ ನಡೆಸಲಾಗುತ್ತಿದೆ ಎಂದು ತಿಳಿಸದರು.

ಸಂಸ್ಥೆಯ ಕಾರ್ಯದರ್ಶಿ ಶ್ರೀವತ್ಸ, ಪ್ರೋ.ನಿರಂಜನ್ ವಾನಳ್ಳಿ, ಮತ್ತಿತರರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಬೆಟ್ಟಗಳು ಯಾವತ್ತೂ ಸುಳ್ಳು ಹೇಳುವುದಿಲ್ಲ!

ಪ್ರತ್ಯಕ್ಷ ವರದಿ ಕೆ.ಪಿ.ನಾಗರಾಜ್‌ ಪಬ್ಲಿಕ್‌ ಟಿವಿ ಕೇರಳ ರಾಜ್ಯದ ವಯನಾಡಿನಲ್ಲಿ ಮತ್ತೆ ಬೆಟ್ಟ ಕುಸಿದಿದೆ. ಸುದ್ದಿ ವಾಹಿನಿಗಳು ಇದನ್ನು ‘ಭೂ…

10 hours ago

ಮೈಸೂರು ನೃತ್ಯ ಪರಂಪರೆಯ ತವರೂರು

ಮೈಸೂರಿನ ನೃತ್ಯ ಪರಂಪರೆಯ ವೈಭವಕ್ಕೆ ಪ್ರೇರಕ ಶಕ್ತಿ ಹಲವು ಕೆ.ರಾಮಮೂರ್ತಿ‌ ರಾವ್ ಮೈಸೂರು ಪ್ರಾಚೀನ ಕಾಲದಿಂದಲೂ ಲಲಿತಕಲೆಗಳಿಗೆ ನೆಲೆಯಾಗಿದ್ದ ಸ್ಥಳ.…

10 hours ago

ʼಮಾನವೀಯತೆ ಎಂಬುದು ನನ್ನಂಥ ಜನರಿಗೆ ಸಿಗದ ಸವಲತ್ತುʼ

ವಿಚಾರಣೆ ಇಲ್ಲದೆ ಆರು ವರ್ಷಗಳಿಂದ ಜೈಲುವಾಸದಲ್ಲಿರುವ ಉಮರ್‌ ಖಾಲಿದ್‌ ಪ್ರಥಮ ಸಂದರ್ಶನ ಈಶಾನ್ಯ ದೆಹಲಿ ಗಲಭೆಗಳಿಗೆ ಸಂಬಂಧಿಸಿದಂತೆ ೨೦೨೦ರಲ್ಲಿ ಜೈಲು…

11 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 9 ಗುರುವಾರ

14 hours ago

ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ: ಭಾಗಮಂಡಲ, ತ್ರಿವೇಣಿ ಸಂಗಮದಲ್ಲಿ ನೀರಿನ ಪ್ರಮಾಣ ಏರಿಕೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಭಾಗಮಂಡಲ…

1 day ago

ದಟ್ಟವಾದ ತೋಟದಲ್ಲಿ ಅಡಗಿದ್ದ ಓರ್ವ ಲಷ್ಕರ್‌ ಉಗ್ರನ ಹತ್ಯೆ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಐದು ದಿನಗಳಿಂದ ಭದ್ರತಾ ಪಡೆಗಳ ಕಣ್ಣಿಗೆ ಮಣ್ಣೆರಚಿ ತಪ್ಪಿಸಿಕೊಳ್ಳುತ್ತಿದ್ದ ಶಂಕಿತ ಲಷ್ಕರ್‌ ಎ ತೊಯ್ಬಾ ಉಗ್ರನನ್ನು ಭದ್ರತಾ…

1 day ago