ಮೈಸೂರು: ಕೇರಳ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯ ಅಬ್ಬರ ಜೋರಾಗಿದೆ. ಹೀಗಾಗಿ ಕಬಿನಿ ಹಾಗೂ ಕೆಆರ್ಎಸ್ಗೆ ಒಳಹರಿವಿನ ನೀರಿನ ಪ್ರಮಾಣ ಹೆಚ್ಚಾಗಿದೆ. ಎರಡು ಜಲಾಶಾಯಗಳಿಂದ 2 ಲಕ್ಷ ಕ್ಯೂಸೆಕ್ಸ್ ನೀರನ್ನು ಹೊರಕ್ಕೆ ಹರಿಸಲಾಗಿದೆ. ಈ ಹಿನ್ನೆಲೆ ನದಿಪಾತ್ರಗಳಲ್ಲಿ ಪ್ರವಾಹ ಉಂಟಾಗಿದೆ.
ಜಿಲ್ಲಾದ್ಯಂತ ನದಿ ಸಮೀಪದ 10 ಪ್ರದೇಶಗಳಲ್ಲಿ ವಾಸಿಸುವ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ, ಕೇರಳ ವಯನಾಡು ಭಾಗಗಳಲ್ಲಿ ಅತಿಯಾದ ಮಳೆಯಾಗುತ್ತಿರುವ ಹಿನ್ನೆಲೆ ಕಬಿನಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಸದ್ಯ 50ಸಾವಿರ ಕ್ಯೂಸೆಕ್ಸ್ ನೀರು ಹರಿದು ಬರುತ್ತಿದ್ದು, ಮುಂದಿನ ದಿನಗಳಲ್ಲಿ ನೀರಿನ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ತಿ.ನರಸೀಪುರದಲ್ಲಿ 3 ಕಡೆ, ನಂಜನಗೂಡು ತಾಲೂಕಿನಲ್ಲಿ 6 ಕಡೆ, ಎಚ್ಡಿ ಕೋಟೆ ತಾಲೂಕಿನ 1 ಪ್ರದೇಶ ಸೇರಿ ಜಿಲ್ಲೆಯಾದ್ಯಂತ 10 ಪ್ರದೇಶಗಳಲ್ಲಿ ನದಿ ಪಾತ್ರದಲ್ಲಿರುವ ಗ್ರಾಮಸ್ಥರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದರು.
೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…
ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…
ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…
‘ಸಪೋರ್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್ವೇ ಯೋಜನೆಗೆ ವೇಗ ದೊರೆತಿದೆ.…
ಕೆ.ಬಿ.ರಮೇಶನಾಯಕ ಮೈಸೂರು: ಹಲವು ರೋಗಗಳಿಗೆ ರಾಮಬಾಣವಾದ ಹಾಗೂ ಆರೋಗ್ಯಕ್ಕೆ ಹಿತಕರ ಎನ್ನಲಾಗಿರುವ ಮೀನು ಆಹಾರವನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು…