ಮೈಸೂರು: ಕೇರಳ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯ ಅಬ್ಬರ ಜೋರಾಗಿದೆ. ಹೀಗಾಗಿ ಕಬಿನಿ ಹಾಗೂ ಕೆಆರ್ಎಸ್ಗೆ ಒಳಹರಿವಿನ ನೀರಿನ ಪ್ರಮಾಣ ಹೆಚ್ಚಾಗಿದೆ. ಎರಡು ಜಲಾಶಾಯಗಳಿಂದ 2 ಲಕ್ಷ ಕ್ಯೂಸೆಕ್ಸ್ ನೀರನ್ನು ಹೊರಕ್ಕೆ ಹರಿಸಲಾಗಿದೆ. ಈ ಹಿನ್ನೆಲೆ ನದಿಪಾತ್ರಗಳಲ್ಲಿ ಪ್ರವಾಹ ಉಂಟಾಗಿದೆ.
ಜಿಲ್ಲಾದ್ಯಂತ ನದಿ ಸಮೀಪದ 10 ಪ್ರದೇಶಗಳಲ್ಲಿ ವಾಸಿಸುವ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ, ಕೇರಳ ವಯನಾಡು ಭಾಗಗಳಲ್ಲಿ ಅತಿಯಾದ ಮಳೆಯಾಗುತ್ತಿರುವ ಹಿನ್ನೆಲೆ ಕಬಿನಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಸದ್ಯ 50ಸಾವಿರ ಕ್ಯೂಸೆಕ್ಸ್ ನೀರು ಹರಿದು ಬರುತ್ತಿದ್ದು, ಮುಂದಿನ ದಿನಗಳಲ್ಲಿ ನೀರಿನ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ತಿ.ನರಸೀಪುರದಲ್ಲಿ 3 ಕಡೆ, ನಂಜನಗೂಡು ತಾಲೂಕಿನಲ್ಲಿ 6 ಕಡೆ, ಎಚ್ಡಿ ಕೋಟೆ ತಾಲೂಕಿನ 1 ಪ್ರದೇಶ ಸೇರಿ ಜಿಲ್ಲೆಯಾದ್ಯಂತ 10 ಪ್ರದೇಶಗಳಲ್ಲಿ ನದಿ ಪಾತ್ರದಲ್ಲಿರುವ ಗ್ರಾಮಸ್ಥರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…