ಮೈಸೂರು

ಪ್ರವಾಹ ಭೀತಿ: ಟಿ.ನರಸೀಪುರದ ನದಿ ಪಾತ್ರದ ಗ್ರಾಮಗಳಿಗೆ ಜಿ.ಪಂ ಸಿಇಒ ಭೇಟಿ,ಪರಿಶೀಲನೆ

ಮೈಸೂರು: ಕಾವೇರಿ ಜಲಾನಯದ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದ್ದು ಕೆಆರ್‌ಎಸ್‌ ಅಣೆಕಟ್ಟು ಭರ್ತಿಯಾಗಿದೆ. ಹೀಗಾಗಿ ಅಣೆಕಟ್ಟಿನಿಂದ 1 ಲಕ್ಷ ಕ್ಯೂಸೆಕ್ಸ್‌ ನೀರನ್ನು ನದಿಗೆ ಬಿಡಲಾಗಿದೆ. ಈ ಹಿನ್ನಲೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ ಗಾಯಿತ್ರಿ ಗುರುವಾರ(ಜು.25) ಟಿ. ನರಸೀಪುರ ತಾಲ್ಲೂಕಿನ ನದಿ ಪಾತ್ರದ ಗ್ರಾಮಗಳಿಗೆ ಭೇಟಿ ನೀಡಿ ಪ್ರವಾಹ ಬಗ್ಗೆ ಎಚ್ಚರಿಕೆ ಸಲಹೆಗಳನ್ನು ನೀಡಿದರು.

ತಾಲೂಕಿನ ಬೆನಕನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಂಡಗನಕೊಪ್ಪಲು, ಕಲಿಯೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಡಿಮಾಲಂಗಿ ಹಾಗೂ ಹೆಮ್ಮಿಗೆ ಗ್ರಾಮಗಳಲ್ಲಿನ ನದಿ ಪಾತ್ರ ಸ್ಥಳಗಳಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

ಮೇಲ್ಕಂಡ ಗ್ರಾಮ ವ್ಯಾಪ್ತಿಯ ನದಿ ಪಾತ್ರದಲ್ಲಿ ಇರುವ ಮನೆಗಳಿಗೆ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಸಂವಾದ ನಡೆಸಿ ಪ್ರವಾಹ ಸಂದರ್ಭದಲ್ಲಿ ಗ್ರಾಮಸ್ಥರು ಎಚ್ಚರಿಕೆ ಯಿಂದಿರಲು ಹಾಗೂ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ತಿಳಿಸಿದರು.  ಸ್ಥಳೀಯ ಪರಿಸ್ಥಿತಿಯನ್ನಾಧರಿಸಿ ಸ್ಥಳಾಂತರ ಮಾಡಲು ಅಗತ್ಯ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚಿಸಿದರು.

ಇನ್ನೂ ಜಲ್‌ ಜೀವನ್‌ ಮೀಷಿನ್‌ ಯೋಜನೆಯ ಅನುಷ್ಠಾನದ ಬಗ್ಗೆ ಮನೆ-ಮನೆಗಳಿಗೆ ನಳ ಸಂಪರ್ಕ ನೀಡಿರುವ ಬಗ್ಗೆ ಸ್ಥಳ ಪರಿಶೀಲಿಸಿದರು.

ಇದೇ ಸಂದರ್ಭದಲ್ಲಿ ಕಲಿಯೂರು ಗ್ರಾಮ ಪಂಚಾಯಿತಿ ಕಚೇರಿಗೆ ಭೇಟಿ ನೀಡಿ ಸಿಬ್ಬಂದಿಗಳ ಹಾಜರಾತಿ, ತೆರಿಗೆ ಸಂಗ್ರಹಣೆ, ಆಸ್ತಿಗಳ ಸರ್ವೇ, ಬೂದು ನೀರು ನಿರ್ವಹಣೆ, , ಮನರೇಗಾ ಯೋಜನೆ, ಜೆ ಜೆ ಎಮ್ ಯೋಜನೆ ಅನುಷ್ಠಾನ ಕುರಿತು ಅಧ್ಯಕ್ಷರು, ಉಪಾದ್ಯಕ್ಷರು , ಸದಸ್ಯರು, ಪಿಡಿಒಗಳ ಜೊತೆ ಸಭೆ ನಡೆಸಿದರು.

ನಂತರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಮಕ್ಕಳೊಂದಿಗೆ ಸಂವಾದ ನಡೆಸಿದರು. ಬಿಸಿ ಊಟ ವಿತರಣೆ ಬಗ್ಗೆ ಶಾಲಾ ಮೂಲಭೂತ ಸೌಕರ್ಯಗಳ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಕಲಿಯೂರು ಗ್ರಾಮದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಅಭಿವೃದ್ಧಿ ಹೊಂದುತ್ತಿರುವ ಚಿಕ್ಕ ಕೆರೆ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಪರಿಶೀಲನೆ ಮಾಡಿ ಮನರೇಗಾ ಕೂಲಿ ಕಾರ್ಮಿಕರೊಂದಿಗೆ ಸಂವಾದ ನಡೆಸಿದರು. ಕಾರ್ಮಿಕರಿಗೆ ಮನರೇಗಾ ಯೋಜನೆಯಡಿ ಆರೋಗ್ಯ ತಪಾಸಣೆ ಹಾಗೂ ವಿಮಾ ಸೌಲಭ್ಯಗಳನ್ನು ಪಡೆಯುವ ಬಗ್ಗೆ ತಿಳುವಳಿಕೆ ನೀಡಿದರು.

ನಂತರ ಹೆಮ್ಮಿಗೆ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಗ್ರಾಮ ಪಂಚಾಯಿತಿ ಕುಡಿಯುವ ನೀರು ಮತ್ತು ನೈರ್ಮಲ್ಯ ಸಮಿತಿಯ ಸಭೆಯಲ್ಲಿ ಭಾಗವಹಿಸಿರುದ ಜಲ್ ಜೀವನ್ ಮಿಷನ್ ಯೋಜನೆ ಬಗ್ಗೆ ಸಭೆ ಚರ್ಚಿಸಲಾಯಿತು. ಕುಡಿಯುವ ನೀರಿನ ಘಟಕಗಳ ಸುತ್ತಲು ಸ್ವಚ್ಛತೆಯನ್ನು ಕಾಪಾಡಬೇಕು, ಎಲ್ಲೂ ಸಹ ನೀರು ನಿಲ್ಲದಂತೆ ಎಚ್ಚರವಹಿಸಬೇಕು, ಕಾಲ ಕಾಲಕ್ಕೆ ತಪ್ಪದೆ ಕುಡಿಯುವ ನೀರಿನ ಪರೀಕ್ಷೆಯನ್ನು ಮಾಡಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಯೋಜನಾಧಿಕಾರಿಗಳಾದ ಮೇಘಲಾ, ಕಾರ್ಯನಿರ್ವಾಹಕ ಅಧಿಕಾರಿಗಳಾದ ಕೃಷ್ಣ ಸಿ, ಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರರಾದ ರಂಜಿತ್, ಸಹಾಯಕ ಕಾರ್ಯಪಾಲಕ ಅಭಿಯಂತರಾದ ಕೈಲಾಶ್ ಮೂರ್ತಿ, ಸಹಾಯಕ ನಿರ್ದೇಶಕರು (ಗ್ರಾ ಉ) ಶಶಿಕುಮಾರ್, ತಾಲ್ಲೂಕು ಪಂಚಾಯಿತಿ ಯೋಜನಾಧಿಕಾರಿ ರಂಗಸ್ವಾಮಿ, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ ಗಾಯಿತ್ರಿ, ಶೈಲಜಾ ಹಾಗೂ ಚಿದಾನಂದ ಮತ್ತು ಇನ್ನಿತರ ತಾಲ್ಲೂಕು ಮತ್ತು ಗ್ರಾಮ ಪಂಚಾಯತಿ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರುಗಳು, ಉಪಾಧ್ಯಕ್ಷರು, ಸದಸ್ಯರುಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅರಮನೆ ಮುಂಭಾಗ ಹೀಲಿಯಂ ಸಿಲಿಂಡರ್ ಸ್ಪೋಟ : ಓರ್ವ ಸಾವು, ನಾಲ್ವರು ಗಂಭೀರ

ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…

2 hours ago

ರಸ್ತೆಯಲ್ಲಿ ರಾಗಿ ಒಕ್ಕಣೆ | ಮುಗುಚಿ ಬಿದ್ದ ಕಾರು ; ಓರ್ವ ಸಾವು

ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…

4 hours ago

ಕಾರು ಮುಖಾಮುಖಿ ಡಿಕ್ಕಿ : ಮೂವರಿಗೆ ಗಾಯ

ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…

5 hours ago

ಮೈಸೂರು | ಜಿಲ್ಲೆಯಾದ್ಯಂತ ಕ್ರಿಸ್‌ಮಸ್‌ ಸಂಭ್ರಮಾಚರಣೆ

ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್‌ಮಸ್‌ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್‌ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…

5 hours ago

ಕೆ.ಆರ್.ಪೇಟೆ | ವೇತನದಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ ಕಲ್ಪಿಸಿದ ಶಿಕ್ಷಕ

ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…

5 hours ago

ತುರ್ತು ನಿರ್ಗಮನದ ಬಾಗಿಲು ಇಲ್ಲದಿದ್ದರೆ ಎಫ್‌ಸಿ ಇಲ್ಲ ; ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ

ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…

5 hours ago