ರಸ್ತೆ ವಿಭಜಕಗಳಲ್ಲಿ ಬೆಳೆದು ನಿಂತಿರುವ ಹೂವು ಗಿಡ
ಮೈಸೂರು : ಮೈಸೂರು ಮಹಾನಗರ ಪಾಲಿಕೆಯು ನಗರದ ಅಂದವನ್ನು ಮತ್ತಷ್ಟು ಹೆಚ್ಚಿಸುವ ಸಲುವಾಗಿ ರಸ್ತೆ ವಿಭಜಕಗಳ ಮಧ್ಯೆ ಖಾಲಿ ಇರುವ ಜಾಗದಲ್ಲಿ ಬಗೆ ಬಗೆಯ ಹೂವು ಗಿಡಗಳನ್ನು ಬೆಳೆಸುತ್ತಿದೆ. ಆದರೆ, ಬೆಳೆದು ನಿಂತಿರುವ ಹೂವು, ಗಿಡಗಳಿಗೆ ರಕ್ಷಣೆ ಇಲ್ಲದಂತಾಗಿದ್ದು, ಬಿಡಾಡಿಗಳ ದನಗಳಿಗೆ ಮೇವು ಸ್ಥಳವಾಗಿ ಮಾರ್ಪಟ್ಟಿದೆ.
ನಗರದ ಕುವೆಂಪುನಗರದ ವಿಶ್ವಮಾನವ ಜೋಡಿ ರಸ್ತೆ, ಚಾಮರಾಜ ಜೋಡಿ ರಸ್ತೆ, ಕೋರ್ಟ್ ರಸ್ತೆ ಸೇರಿದಂತೆ ಹಲವೆಡೆ ರಸ್ತೆ ವಿಭಜಕದ ಮಧ್ಯೆ ಅಂದವಾದ ಅಲಂಕಾರಿಕ ಹೂವು ಗಿಡಗಳು ಬೆಳೆದು ನಗರದ ಸೌಂದರ್ಯ ಹೆಚ್ಚಿಸುತ್ತಿವೆ. ಆದರೆ ಸೌಂದರ್ಯಕ್ಕೆ ಮೈಸೂರಿಗರೇ ಕುತ್ತು ತರುತ್ತಿರುವುದು ಬೇಸರದ ಸಂಗತಿಯಾಗಿದೆ.
ಪಾಲಿಕೆ ನಿರ್ಲಕ್ಷ್ಯ
ರಸ್ತೆ ವಿಭಜಕಗಳ ನಡುವೆ ಬಗೆ ಬಗೆಯ ಹೂವುಗಳು ಬೆಳೆದು ನಿಂತಿವೆ. ಆದರೆ, ಪಾಲಿಕೆಯ ಈ ಯೋಜನೆಗೆ ಸ್ವತಃ ಪಾಲಿಕೆಯೇ ನಿರ್ಲಕ್ಷ್ಯ ವಹಿಸುತ್ತಿದ್ದು, ಬೆಳೆದು ನಿಂತ ಹೂವುಗಿಡಗಳಿಗೆ ಯಾವುದೇ ರಕ್ಷಣೆ ನೀಡಿಲ್ಲಿ. ಪ್ರತಿನಿತ್ಯ ಬಿಡಾಡಿ ದನಗಳಿಂದ ಬಂದು ಹೂವುಗಿಡಗಳನ್ನು ಮೇವು ಸ್ಥಳಗಳನ್ನಾಗಿ ಮಾಡಿಕೊಂಡು, ಹೂವು ಗಿಡಗಳನ್ನ ಹಾಳುಮಾಡುತ್ತಿವೆ.
ಸರಿಯಾದ ನಿರ್ವಹಣೆ ಇಲ್ಲದೆ ಪಾಲಿಕೆ ಕನಸಿನ ಯೋಜನೆ ಮಣ್ಣು ಪಾಲಾಗಿದ್ದು, ಬೆಳೆದು ಹೂವು ಬಿಟ್ಟ ಗಿಡಗಳನ್ನು ಬಿಡಾಡಿ ದನಗಳು ತಿಂದು ತೇಗುತ್ತಿವೆ. ಈ ಬಗ್ಗೆ ಪಾಲಿಕೆ ಗಮನಹರಿಸಿ ಸರಿಯಾದ ನಿರ್ವಹಣೆ ಮಾಡಲಿ ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.
ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…
15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…
ಮಲ್ಟಿಪ್ಲೆಕ್ಸ್ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್ನಲ್ಲಿ ಚಿತ್ರದ…
ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್ಐಆರ್ ಬಗ್ಗೆ ಹಲವಾರು ಅನುಮಾನ…
ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…