ನಂಜನಗೂಡು: ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಭತ್ತ ಖರೀದಿ ಕೇಂದ್ರಗಳನ್ನು ತೆರೆಯುವಂತೆ ಒತ್ತಾಯಿಸಿ ನಂಜನಗೂಡಿನಲ್ಲಿ ರೈತರು ಬೃಹತ್ ಪ್ರತಿಭಟನೆ ನಡೆಸಿದರು.
ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದ ಅನ್ನದಾತರು, ರಸ್ತೆಯಲ್ಲಿ ಎತ್ತಿನ ಗಾಡಿಗಳನ್ನು ನಿಲ್ಲಿಸಿ ರಾಜ್ಯ ಸರ್ಕಾರದ ವಿರುದ್ಧ ವಿವಿಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ರೈತರು ರಸ್ತೆ ತಡೆಗೆ ಮುಂದಾದಾಗ ರೈತರು ಹಾಗೂ ಸ್ಥಳೀಯ ಪೊಲೀಸರ ನಡುವೆ ತೀವ್ರ ಮಾತಿನ ಚಕಮಕಿ ನಡೆಯಿತು.
ಇದನ್ನು ಓದಿ: ದೊಮ್ಮನಗದ್ದೆ ಗ್ರಾ.ಪಂ ಮುಂದೆ ಪ್ರತಿಭಟನೆಗಿಳಿದ ಗ್ರಾಮಸ್ಥರು: ಕಾರಣ ಇಷ್ಟೇ
ಈ ವೇಳೆ ಕೆರಳಿದ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಅವರು, ಪೊಲೀಸರನ್ನು ತರಾಟೆಗೆ ತೆಗೆದುಕೊಂಡರು. ರಾಜಕಾರಣಿಗಳು ಬರುವಾಗ ಹೆದ್ದಾರಿಗಳನ್ನು ಬಂದ್ ಮಾಡುತ್ತೀರಿ. ನಾವು ಹಕ್ಕು ಕೇಳಲು ಬಂದ್ ಮಾಡಿದರೆ ಕೇಳುತ್ತಿದ್ದೀರಿ ಎಂದು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ರೈತರು, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಭತ್ತ ಖರೀದಿ ಕೇಂದ್ರ ತೆರೆಯಬೇಕು. ಪ್ರತಿ ಕ್ವಿಂಟಾಲ್ ಭತ್ತಕ್ಕೆ 500 ರೂ ಹೆಚ್ಚುವರಿ ದರ ನಿಗದಿ ಮಾಡಿ ನೋಂದಣಿ ಪ್ರಕ್ರಿಯೆ ಪ್ರಾರಂಭಿಸಬೇಕು. ಉತ್ತರ ಕರ್ನಾಟಕದ ಸಕ್ಕರೆ ಕಾರ್ಖಾನೆಗಳಿಗೆ ನಿಗದಿ ಮಾಡಿದಂತೆ, ದಕ್ಷಿಣ ಕರ್ನಾಟಕದ ಕಾರ್ಖಾನೆಗಳಿಗೂ ಕಬ್ಬು ಕಟಾವು ಸಾಗಾಣಿಕೆಯನ್ನು ಬಿಟ್ಟು ಹಣ ಪಾವತಿಗೆ ಸರ್ಕಾರ ಆದೇಶ ನೀಡಬೇಕು ಎಂದು ಆಗ್ರಹಿಸಿದರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…