ಮೈಸೂರು

ನಂಜನಗೂಡಿನಲ್ಲಿ ಹೆದ್ದಾರಿ ತಡೆದು ಅನ್ನದಾತರ ಪ್ರತಿಭಟನೆ

ನಂಜನಗೂಡು: ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಭತ್ತ ಖರೀದಿ ಕೇಂದ್ರಗಳನ್ನು ತೆರೆಯುವಂತೆ ಒತ್ತಾಯಿಸಿ ನಂಜನಗೂಡಿನಲ್ಲಿ ರೈತರು ಬೃಹತ್‌ ಪ್ರತಿಭಟನೆ ನಡೆಸಿದರು.

ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದ ಅನ್ನದಾತರು, ರಸ್ತೆಯಲ್ಲಿ ಎತ್ತಿನ ಗಾಡಿಗಳನ್ನು ನಿಲ್ಲಿಸಿ ರಾಜ್ಯ ಸರ್ಕಾರದ ವಿರುದ್ಧ ವಿವಿಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ರೈತರು ರಸ್ತೆ ತಡೆಗೆ ಮುಂದಾದಾಗ ರೈತರು ಹಾಗೂ ಸ್ಥಳೀಯ ಪೊಲೀಸರ ನಡುವೆ ತೀವ್ರ ಮಾತಿನ ಚಕಮಕಿ ನಡೆಯಿತು.

ಇದನ್ನು ಓದಿ: ದೊಮ್ಮನಗದ್ದೆ ಗ್ರಾ.ಪಂ ಮುಂದೆ ಪ್ರತಿಭಟನೆಗಿಳಿದ ಗ್ರಾಮಸ್ಥರು: ಕಾರಣ ಇಷ್ಟೇ

ಈ ವೇಳೆ ಕೆರಳಿದ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್‌ ಅವರು, ಪೊಲೀಸರನ್ನು ತರಾಟೆಗೆ ತೆಗೆದುಕೊಂಡರು. ರಾಜಕಾರಣಿಗಳು ಬರುವಾಗ ಹೆದ್ದಾರಿಗಳನ್ನು ಬಂದ್‌ ಮಾಡುತ್ತೀರಿ. ನಾವು ಹಕ್ಕು ಕೇಳಲು ಬಂದ್‌ ಮಾಡಿದರೆ ಕೇಳುತ್ತಿದ್ದೀರಿ ಎಂದು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ರೈತರು, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಭತ್ತ ಖರೀದಿ ಕೇಂದ್ರ ತೆರೆಯಬೇಕು. ಪ್ರತಿ ಕ್ವಿಂಟಾಲ್‌ ಭತ್ತಕ್ಕೆ 500 ರೂ ಹೆಚ್ಚುವರಿ ದರ ನಿಗದಿ ಮಾಡಿ ನೋಂದಣಿ ಪ್ರಕ್ರಿಯೆ ಪ್ರಾರಂಭಿಸಬೇಕು. ಉತ್ತರ ಕರ್ನಾಟಕದ ಸಕ್ಕರೆ ಕಾರ್ಖಾನೆಗಳಿಗೆ ನಿಗದಿ ಮಾಡಿದಂತೆ, ದಕ್ಷಿಣ ಕರ್ನಾಟಕದ ಕಾರ್ಖಾನೆಗಳಿಗೂ ಕಬ್ಬು ಕಟಾವು ಸಾಗಾಣಿಕೆಯನ್ನು ಬಿಟ್ಟು ಹಣ ಪಾವತಿಗೆ ಸರ್ಕಾರ ಆದೇಶ ನೀಡಬೇಕು ಎಂದು ಆಗ್ರಹಿಸಿದರು.

ಆಂದೋಲನ ಡೆಸ್ಕ್

Recent Posts

ಮುತ್ತತ್ತಿಯಲ್ಲಿ ಘೋರ ದುರಂತ: ಒಂದೇ ಕುಟುಂಬದ ನಾಲ್ವರು ಮಹಿಳೆಯರು ಸೇರಿ ಐವರು ನೀರುಪಾಲು

ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…

9 hours ago

ಚಾಮರಾಜನಗರ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ

ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…

12 hours ago

ಬಿಆರ್‌ಟಿ ವ್ಯಾಪ್ತಿಯಲ್ಲಿ ಕಾಡಾನೆ ಕಳೇಬರ ಪತ್ತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…

12 hours ago

ತೊಟ್ಟಿಲುಶಾಸ್ತ್ರ, ಸಿದ್ದಪ್ಪಾಜಿ ಕಂಡಾಯೋತ್ಸವದಲ್ಲಿ ತಾರಾ, ಶಶಿಕುಮಾರ್ ಭಾಗಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…

12 hours ago

ಬೆಳೆಗೆ ಸಿಗದ ಬೆಲೆ: ಯುವ ರೈತ ಆತ್ಮಹತ್ಯೆ

ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…

13 hours ago

ಮುಂದಿನ ಒಂದು ವಾರಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…

14 hours ago