ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಉಮೇದುವಾರಿಗೆ ಸಲ್ಲಿಸಿದ ಒಂದು ದಿನದ ಬಳಿಕ ಯದುವೀರ್ ಅವರು ತಮ್ಮ ಅಭಿಮಾನಿಗಳಿಗೆ ಧನ್ಯವಾದ ಅರ್ಪಿಸಿದ್ದಾರೆ. ಮತ್ತು ಮೈಸೂರು ಅಭಿವೃದ್ಧಿಗಾಗಿ ಇದೇ ರೀತಿ ಬೆಂಬಲಿಸಿ ಎಂದು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮನವಿ ಮಾಡಿದ್ದಾರೆ.
ಏ.೩ ರಂದು ತಮ್ಮ ಅಪಾರ ಅಭಿಮಾನಿಗಳ ಬೆಂಬಲದೊಂದಿಗೆ ನಗರದ ಅರಮನೆ ಆವರಣದ ಕೋಟೆ ಆಂಜನೇಯ ದೇವಾಲಯದ ಮುಂಭಾಗದಿಂದ ರ್ಯಾಲಿಯಲ್ಲಿ ತೆರಳಿ ಉಮೇದುವಾರಿಕೆ ಸಲ್ಲಿಸಿದರು. ಯದುವೀರ್ ಅವರಿಗೆ ಜೊತೆಯಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಸಂಸದ ಪ್ರತಾಪ್ ಸಿಂಹ, ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ, ಸಿ.ಎನ್ ಅಶ್ವಥ್ ನಾರಾಯಣ್ ಜೊತೆಯಾಗಿದ್ದರು.
ಈ ಸಂಬಂಧ ಇಂದು (ಏ.೪) ನಾಮಪತ್ರ ಸಲ್ಲಿಕೆಗೆ ಬೆಂಬಲ ಸೂಚಿಸಲು ಕ್ಷೇತ್ರದ ವಿವಿಧ ಭಾಗಗಳಿಂದ ಆಗಮಿಸಿದ್ದ ಕಾರ್ಯಕರ್ತರು, ಬಿಜೆಪಿ ಹಾಗೂ ಜೆಡಿಎಸ್ ಮಖಂಡರಿಗೆ ಮತ್ತು ಮತಭಾಂದವರಿಗೆ ಕೃತಜ್ಞತೆಯನ್ನು ಸಮರ್ಪಿಸಿದ್ದಾರೆ.
ಚುನಾವಣೆಯಲ್ಲಿ ಇದೇ ರೀತಿ ಉತ್ಸಾಹವನ್ನು ತೋರಿದ್ದೇ ಆದಲ್ಲಿ ನಮ್ಮೆಲ್ಲಾ ಕೆಲಸಗಳು ಯಶಸ್ವಿಯಾಗುತ್ತದೆ. ನಿಮ್ಮೆಲ್ಲರ ಭಾಗವಹಿಸುವಿಕೆ ನಮಗೆ ಶಕ್ತಿ ತುಂಬಿದೆ. ಇದೇ ರೀತಿ ಈ ಕ್ಷೇತ್ರದ ಅಭಿವೃದ್ಧಿಗಾಗಿ ಬೆಂಬಲ ನೀಡಿ ನನ್ನನ್ನು ಹಾರೈಸಿ ಎಂದು ಯದುವೀರ್ ವೀಡಿಯೋ ತುಣುಕೊಂದನ್ನು ಹಂಚಿಕೊಂಡಿದ್ದಾರೆ.
ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…
ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…
ಬೀಜಿಂಗ್: ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…
ಬೆಂಗಳೂರು : ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2026-27ನೇ ಸಾಲಿನಲ್ಲಿ ಸಂಶೋಧನೆ ಕೈಗೊಂಡಿರುವ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡದ (ST)…
ಮೈಸೂರು : ಫುಟ್ಪಾತ್ಗಳನ್ನು ಅತಿಕ್ರಮಿಸಿದ್ದ ಅನಧಿಕೃತ ವ್ಯಾಪಾರಿಗಳ ವಿರುದ್ಧ ಮೈಸೂರು ಮಹಾನಗರ ಪಾಲಿಕೆ ಶುಕ್ರವಾರ ಖಡಕ್ಕಾಗಿ ಕಾರ್ಯಾಚರಣೆ ನಡೆಸಿತು. ವಲಯ-5…
ರಸ್ತೆಗಳ ಬಾಳಿಕೆ ಹೆಚ್ಚಳ ; ಬಫರ್ ಜೋನ್ ಇಲ್ಲದಿದ್ದರೆ ಸಂಕಷ್ಟ ವಿಶ್ವನಾಥ್ ಶಂಕರಪ್ಪ ರಸ್ತೆ ವೈಟ್ ಟಾಪಿಂಗ್ ಮಾಡುವುದು ಎಂದರೆ,…