ಮೈಸೂರು

ಇತಿಹಾಸದಲ್ಲೇ ಮೊದಲು..; 10 ದಿನವಲ್ಲ, ಈ ಬಾರಿ 11 ದಿನಗಳ ಕಾಲ ದಸರಾ ಆಚರಣೆ

ಈ ಮಹತ್ವದ ನಿರ್ಧಾರದ ಹಿಂದಿನ ಕಾರಣವೇನು?

ಮೈಸೂರು : ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವವು ಈ ಬಾರಿ ಹತ್ತು ದಿನಗಳ ಬದಲಿಗೆ ಹನ್ನೊಂದು ದಿನಗಳ ಕಾಲ ನಡೆಯಲಿದ್ದು, ದಸರಾ ಮಹೋತ್ಸವದ ಇತಿಹಾಸದಲ್ಲೇ ದಾಖಲೆ ಬರೆಯಲಿದೆ.

ಯದುವಂಶದ ಆಡಳಿತದ ದಿನಗಳಿಂದಲೂ ಚಾಚೂತಪ್ಪದೆ ನಡೆಸಿಕೊಂಡು ಬರುತ್ತಿರುವ ದಸರಾ ಮಹೋತ್ಸವವು ಸಾಮಾನ್ಯವಾಗಿ ಪ್ರತಿ ವರ್ಷ 10 ದಿನಗಳ ಕಾಲ ನಡೆಯುತ್ತದೆ. ದಸರಾ ಪ್ರಾರಂಭವಾಗಿದ್ದಾಗಿನಿಂದಲೂ ಅಂದರೆ 400 ವರ್ಷಗಳಿಂದಲೂ 10 ದಿನಗಳ ಕಾಲ ನಡೆಯುತ್ತಲೇ ಬಂದಿದೆ. ಆದರೆ, ಈ ಬಾರಿ ದಸರಾ 10 ಅಲ್ಲ, 11 ದಿನ.

ಈ ಬಾರಿ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2 ರವರೆಗೆ ದಸರಾ ಆಚರಣೆ ಮಾಡಲಾಗುತ್ತದೆ. ಸೆಪ್ಟಂಬರ್ 26, ಸೆ.27 ಎರಡೂ ದಿನ ಪಂಚಮಿ ಆಗಮನವಿದ್ದು, ಹೀಗಾಗಿ ಈ ಬಾರಿ 11 ದಿನ ದಸರಾ ಆಚರಣೆ ಇರಲಿದೆ. ಇದು ಇತಿಹಾಸದಲ್ಲೇ ಕಂಡು- ಕೇಳರಿಯದ ರೀತಿಯ ದಸರಾ ಮಹೋತ್ಸವ ಆಗಿದ್ದು, ನಾಲ್ಕು ನೂರಕ್ಕೂ ಹೆಚ್ಚು ವರ್ಷಗಳ ಇತಿಹಾಸದಲ್ಲೇ ಈ ರೀತಿ 11 ದಿನಗಳ ಕಾಲ ದಸರಾ ಆಚರಣೆ ಮಾಡುತ್ತಿರುವುದು ಇದೇ ಪ್ರಥಮ ಬಾರಿ ಎಂದು ಹೇಳಲಾಗಿದೆ.

ಈ ಹಿನ್ನೆಲೆಯಲ್ಲಿ ಈ ಬಾರಿಯ ದಸರಾ ದಿನಗಳು ವಿದ್ವಾಂಸರಲ್ಲಿಯೇ ಗೊಂದಲ ಹುಟ್ಟುಹಾಕಿದೆ. 1399 ರ ವಿಜಯನಗರ ಸಾಮ್ರಾಜ್ಯದ ಆಳ್ವಿಕೆ, 1410ರ ಮೈಸೂರು ಸಂಸ್ಥಾನದ ಆಳ್ವಿಕೆ ಕಾಲದಿಂದ ದಸರಾ ಮಹೋತ್ಸವ ಆಚರಣೆ ಮಾಡಲಾಗುತ್ತಿದ್ದು, ಈವರೆಗೆ 11 ದಿನಗಳ ಕಾಲ ದಸರಾ ಮಹೋತ್ಸವ ಆಚರಿಸಿದ ಉದಾಹರಣೆಗಳಿಲ್ಲ. ನವರಾತ್ರಿಯ ಮರುದಿನ ವಿಜಯದಶಮಿ ಆಚರಿಸುವುದು ಸಂಪ್ರದಾಯ. ವಿಜಯದಶಮಿಯಂದು ಅರಮನೆಯಲ್ಲಿ ಪೂಜೆ ಪುನಸ್ಕಾರಗಳು ನಡೆದರೆ, ರಾಜ್ಯ ಸರ್ಕಾರದ ವತಿಯಿಂದ ಜಂಬೂ ಸವಾರಿ ಮೆರವಣಿಗೆ ನಡೆಯಲಿದೆ.

ರಾಜ್ಯಸರ್ಕಾರ ದಶಮಿ ಪ್ರಕಾರ ಹತ್ತು ದಿನಗಳ ಕಾಲ ಆಚರಿಸಿ ವಿಜಯದಶಮಿ ಮೆರವಣಿಗೆ ನಡೆಸಲಾಗದು. ಏಕೆಂದರೆ ಪಂಚಾಂಗದಲ್ಲಿ ಯಾವ್ಯಾವ ವರ್ಷಗಳಲ್ಲಿ ಏನೇನು ನಡೆಯಬೇಕು ಎಂಬುದು ಈಗಾಗಲೇ ಅಡಕವಾಗಿರುವ ಕಾರಣ ಅದೇ ರೀತಿ ನಡೆಯಬೇಕಿದೆ. ಹಾಗಾಗಿ, ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಚರ್ಚೆಯಾದ ಬಳಿಕವಷ್ಟೇ ಅಂತಿಮ ನಿರ್ಧಾರವಾಗಲಿದೆ ಎಂದು ಅರಮನೆ ಮಂಡಳಿ ಉಪ ನಿರ್ದೇಶಕ ಟಿ.ಎಸ್.ಸುಬ್ರಹ್ಮಣ್ಯ ತಿಳಿಸಿದರು.

ನವರಾತ್ರಿ ಮುಗಿದು ಹತ್ತನೇ ದಿನ ವಿಜಯದಶಮಿ ಬರಲಿದೆ. ದಸರಾ ಮಹೋತ್ಸವ ಹನ್ನೊಂದು ದಿನ ಬಂದರೂ ಅದರ ಲೆಕ್ಕ ಹತ್ತು ದಿನಗಳೇ ಆಗಿರುತ್ತದೆ. ಪಂಚಾಂಗದಲ್ಲಿ ಯಾವ ರೀತಿ ಆಚರಣೆ ಮಾಡಬೇಕು ಎಂಬುದನ್ನು ನೋಡಿ ಹೇಳಬೇಕಿದೆ ಎಂದು ಪುರೋಹಿತರಾದ ಜನಾರ್ಧನ್ ಹೇಳಿದರು.

ಆಂದೋಲನ ಡೆಸ್ಕ್

Recent Posts

ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಗಳಿಗೆ ವಾಹನ ಚಾಲನೆ ಅಪಾಯ

ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್ ೧೮ರ ಬುಧವಾರ ಆರಂಭವಾಗಿದೆ. ಅಂದು ಬಹುತೇಕ ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಸಮವಸ್ತ್ರ…

2 hours ago

ಯುಗಾದಿ; ಹೊನ್ನೇರು ಕಟ್ಟಿ ಸಂಭ್ರಮಿಸಿದ ರೈತರು

ಭೇರ್ಯ ಮಹೇಶ್ ಕೆ.ಆರ್.ನಗರ: ಯುಗಾದಿ ಹಬ್ಬದ ಅಂಗವಾಗಿ ಕೆ.ಆರ್.ನಗರ ಮತ್ತು ಸಾಲಿ ಗ್ರಾಮ ಅವಳಿ ತಾಲ್ಲೂಕುಗಳ ಹಲವೆಡೆ ರೈತರು ಸಂಭ್ರಮದಿಂದ…

2 hours ago

ಕೇರಳಕ್ಕೆ ನೂರಾರು ಟಿಪ್ಪರ್‌ಗಳಲ್ಲಿ ರಾಜ್ಯದ ಸಂಪತ್ತು ಸಾಗಣೆ

ಮಹೇಂದ್ರ ಹಸಗೂಲಿ ಕಡಿವಾಣ ಹಾಕದಿದ್ದರೆ ರೈತಸಂಘ, ಕನ್ನಡಪರ ಸಂಘಟನೆಗಳು, ಜನಸಾಮಾನ್ಯರಿಂದ ಉಗ್ರ ಹೋರಾಟದ ಎಚ್ಚರಿಕೆ  ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಕೇರಳ ನೋಂದಣಿಯ…

2 hours ago

ರಸ್ತೆಯ ಮೇಲೆ ಹರಿಯುವ ಒಳಚರಂಡಿ ನೀರಿಂದ ಅನೈರ್ಮಲ್ಯ

ಎಂ.ನಾರಾಯಣ ತಿ.ನರಸೀಪುರ: ಪುರಸಭಾ ಅಧಿಕಾರಿಗಳ ನಿರ್ಲಕ್ಷ್ಯದಿಂದ ಒಳಚರಂಡಿಯ ನೀರು ರಸ್ತೆಯ ಮೇಲೆ ಹರಿದು ಮನೆ ಮುಂಭಾಗ ದುರ್ನಾತ ಬೀರುತ್ತಾ ಅನೈರ್ಮಲ್ಯ…

2 hours ago

ಏ.೧೦ರಿಂದ ವಸ್ತು ಪ್ರದರ್ಶನದಲ್ಲಿ ಬೇಸಿಗೆ ಮೇಳ

ದಿನೇಶ್‌ಕುಮಾರ್ ಹೆಚ್.ಎಸ್ ಮೈಸೂರು: ಶಾಲಾ-ಕಾಲೇಜುಗಳಿಗೆ ಬೇಸಿಗೆ ರಜೆ ಬರುತ್ತಿರುವ ಹಿನ್ನೆಲೆಯಲ್ಲಿ ಏ.೧೦ ರಿಂದ ಮೇ ೩೦ರವರೆಗೆ ೫೦ ದಿನಗಳ ಕಾಲ…

2 hours ago

ಪಾಳು ಬಿದ್ದ ಪಾರ್ಕ್.. ಶುಚಿ ಇಲ್ಲದ ಶೌಚಾಲಯ..

ಕಸ, ಕೊಳಚೆ ಮತ್ತು ಕಟ್ಟಡ ತ್ಯಾಜ್ಯದಿಂದ ವಾಯುವಿಹಾರಿಗಳಿಗೆ ತೊಂದರೆ  ಮೈಸೂರು: ನಗರದ ಸರಸ್ವತಿಪುರಂನ ವಾರ್ಡ್ ಸಂಖ್ಯೆ ೨೧ರಲ್ಲಿ ಇರುವ ಪಾರ್ಕ್…

2 hours ago