ಮೈಸೂರು

ಇತಿಹಾಸದಲ್ಲೇ ಮೊದಲು..; 10 ದಿನವಲ್ಲ, ಈ ಬಾರಿ 11 ದಿನಗಳ ಕಾಲ ದಸರಾ ಆಚರಣೆ

ಈ ಮಹತ್ವದ ನಿರ್ಧಾರದ ಹಿಂದಿನ ಕಾರಣವೇನು?

ಮೈಸೂರು : ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವವು ಈ ಬಾರಿ ಹತ್ತು ದಿನಗಳ ಬದಲಿಗೆ ಹನ್ನೊಂದು ದಿನಗಳ ಕಾಲ ನಡೆಯಲಿದ್ದು, ದಸರಾ ಮಹೋತ್ಸವದ ಇತಿಹಾಸದಲ್ಲೇ ದಾಖಲೆ ಬರೆಯಲಿದೆ.

ಯದುವಂಶದ ಆಡಳಿತದ ದಿನಗಳಿಂದಲೂ ಚಾಚೂತಪ್ಪದೆ ನಡೆಸಿಕೊಂಡು ಬರುತ್ತಿರುವ ದಸರಾ ಮಹೋತ್ಸವವು ಸಾಮಾನ್ಯವಾಗಿ ಪ್ರತಿ ವರ್ಷ 10 ದಿನಗಳ ಕಾಲ ನಡೆಯುತ್ತದೆ. ದಸರಾ ಪ್ರಾರಂಭವಾಗಿದ್ದಾಗಿನಿಂದಲೂ ಅಂದರೆ 400 ವರ್ಷಗಳಿಂದಲೂ 10 ದಿನಗಳ ಕಾಲ ನಡೆಯುತ್ತಲೇ ಬಂದಿದೆ. ಆದರೆ, ಈ ಬಾರಿ ದಸರಾ 10 ಅಲ್ಲ, 11 ದಿನ.

ಈ ಬಾರಿ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2 ರವರೆಗೆ ದಸರಾ ಆಚರಣೆ ಮಾಡಲಾಗುತ್ತದೆ. ಸೆಪ್ಟಂಬರ್ 26, ಸೆ.27 ಎರಡೂ ದಿನ ಪಂಚಮಿ ಆಗಮನವಿದ್ದು, ಹೀಗಾಗಿ ಈ ಬಾರಿ 11 ದಿನ ದಸರಾ ಆಚರಣೆ ಇರಲಿದೆ. ಇದು ಇತಿಹಾಸದಲ್ಲೇ ಕಂಡು- ಕೇಳರಿಯದ ರೀತಿಯ ದಸರಾ ಮಹೋತ್ಸವ ಆಗಿದ್ದು, ನಾಲ್ಕು ನೂರಕ್ಕೂ ಹೆಚ್ಚು ವರ್ಷಗಳ ಇತಿಹಾಸದಲ್ಲೇ ಈ ರೀತಿ 11 ದಿನಗಳ ಕಾಲ ದಸರಾ ಆಚರಣೆ ಮಾಡುತ್ತಿರುವುದು ಇದೇ ಪ್ರಥಮ ಬಾರಿ ಎಂದು ಹೇಳಲಾಗಿದೆ.

ಈ ಹಿನ್ನೆಲೆಯಲ್ಲಿ ಈ ಬಾರಿಯ ದಸರಾ ದಿನಗಳು ವಿದ್ವಾಂಸರಲ್ಲಿಯೇ ಗೊಂದಲ ಹುಟ್ಟುಹಾಕಿದೆ. 1399 ರ ವಿಜಯನಗರ ಸಾಮ್ರಾಜ್ಯದ ಆಳ್ವಿಕೆ, 1410ರ ಮೈಸೂರು ಸಂಸ್ಥಾನದ ಆಳ್ವಿಕೆ ಕಾಲದಿಂದ ದಸರಾ ಮಹೋತ್ಸವ ಆಚರಣೆ ಮಾಡಲಾಗುತ್ತಿದ್ದು, ಈವರೆಗೆ 11 ದಿನಗಳ ಕಾಲ ದಸರಾ ಮಹೋತ್ಸವ ಆಚರಿಸಿದ ಉದಾಹರಣೆಗಳಿಲ್ಲ. ನವರಾತ್ರಿಯ ಮರುದಿನ ವಿಜಯದಶಮಿ ಆಚರಿಸುವುದು ಸಂಪ್ರದಾಯ. ವಿಜಯದಶಮಿಯಂದು ಅರಮನೆಯಲ್ಲಿ ಪೂಜೆ ಪುನಸ್ಕಾರಗಳು ನಡೆದರೆ, ರಾಜ್ಯ ಸರ್ಕಾರದ ವತಿಯಿಂದ ಜಂಬೂ ಸವಾರಿ ಮೆರವಣಿಗೆ ನಡೆಯಲಿದೆ.

ರಾಜ್ಯಸರ್ಕಾರ ದಶಮಿ ಪ್ರಕಾರ ಹತ್ತು ದಿನಗಳ ಕಾಲ ಆಚರಿಸಿ ವಿಜಯದಶಮಿ ಮೆರವಣಿಗೆ ನಡೆಸಲಾಗದು. ಏಕೆಂದರೆ ಪಂಚಾಂಗದಲ್ಲಿ ಯಾವ್ಯಾವ ವರ್ಷಗಳಲ್ಲಿ ಏನೇನು ನಡೆಯಬೇಕು ಎಂಬುದು ಈಗಾಗಲೇ ಅಡಕವಾಗಿರುವ ಕಾರಣ ಅದೇ ರೀತಿ ನಡೆಯಬೇಕಿದೆ. ಹಾಗಾಗಿ, ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಚರ್ಚೆಯಾದ ಬಳಿಕವಷ್ಟೇ ಅಂತಿಮ ನಿರ್ಧಾರವಾಗಲಿದೆ ಎಂದು ಅರಮನೆ ಮಂಡಳಿ ಉಪ ನಿರ್ದೇಶಕ ಟಿ.ಎಸ್.ಸುಬ್ರಹ್ಮಣ್ಯ ತಿಳಿಸಿದರು.

ನವರಾತ್ರಿ ಮುಗಿದು ಹತ್ತನೇ ದಿನ ವಿಜಯದಶಮಿ ಬರಲಿದೆ. ದಸರಾ ಮಹೋತ್ಸವ ಹನ್ನೊಂದು ದಿನ ಬಂದರೂ ಅದರ ಲೆಕ್ಕ ಹತ್ತು ದಿನಗಳೇ ಆಗಿರುತ್ತದೆ. ಪಂಚಾಂಗದಲ್ಲಿ ಯಾವ ರೀತಿ ಆಚರಣೆ ಮಾಡಬೇಕು ಎಂಬುದನ್ನು ನೋಡಿ ಹೇಳಬೇಕಿದೆ ಎಂದು ಪುರೋಹಿತರಾದ ಜನಾರ್ಧನ್ ಹೇಳಿದರು.

ಆಂದೋಲನ ಡೆಸ್ಕ್

Recent Posts

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

5 hours ago

ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ: ಇಂಡಿಗೋ ಏರ್‌ಲೈನ್ಸ್‌ಗೆ ಗಡುವು ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…

5 hours ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

5 hours ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

6 hours ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

7 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

7 hours ago