ಮೈಸೂರು

ಇತಿಹಾಸದಲ್ಲೇ ಮೊದಲು..; 10 ದಿನವಲ್ಲ, ಈ ಬಾರಿ 11 ದಿನಗಳ ಕಾಲ ದಸರಾ ಆಚರಣೆ

ಈ ಮಹತ್ವದ ನಿರ್ಧಾರದ ಹಿಂದಿನ ಕಾರಣವೇನು?

ಮೈಸೂರು : ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವವು ಈ ಬಾರಿ ಹತ್ತು ದಿನಗಳ ಬದಲಿಗೆ ಹನ್ನೊಂದು ದಿನಗಳ ಕಾಲ ನಡೆಯಲಿದ್ದು, ದಸರಾ ಮಹೋತ್ಸವದ ಇತಿಹಾಸದಲ್ಲೇ ದಾಖಲೆ ಬರೆಯಲಿದೆ.

ಯದುವಂಶದ ಆಡಳಿತದ ದಿನಗಳಿಂದಲೂ ಚಾಚೂತಪ್ಪದೆ ನಡೆಸಿಕೊಂಡು ಬರುತ್ತಿರುವ ದಸರಾ ಮಹೋತ್ಸವವು ಸಾಮಾನ್ಯವಾಗಿ ಪ್ರತಿ ವರ್ಷ 10 ದಿನಗಳ ಕಾಲ ನಡೆಯುತ್ತದೆ. ದಸರಾ ಪ್ರಾರಂಭವಾಗಿದ್ದಾಗಿನಿಂದಲೂ ಅಂದರೆ 400 ವರ್ಷಗಳಿಂದಲೂ 10 ದಿನಗಳ ಕಾಲ ನಡೆಯುತ್ತಲೇ ಬಂದಿದೆ. ಆದರೆ, ಈ ಬಾರಿ ದಸರಾ 10 ಅಲ್ಲ, 11 ದಿನ.

ಈ ಬಾರಿ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2 ರವರೆಗೆ ದಸರಾ ಆಚರಣೆ ಮಾಡಲಾಗುತ್ತದೆ. ಸೆಪ್ಟಂಬರ್ 26, ಸೆ.27 ಎರಡೂ ದಿನ ಪಂಚಮಿ ಆಗಮನವಿದ್ದು, ಹೀಗಾಗಿ ಈ ಬಾರಿ 11 ದಿನ ದಸರಾ ಆಚರಣೆ ಇರಲಿದೆ. ಇದು ಇತಿಹಾಸದಲ್ಲೇ ಕಂಡು- ಕೇಳರಿಯದ ರೀತಿಯ ದಸರಾ ಮಹೋತ್ಸವ ಆಗಿದ್ದು, ನಾಲ್ಕು ನೂರಕ್ಕೂ ಹೆಚ್ಚು ವರ್ಷಗಳ ಇತಿಹಾಸದಲ್ಲೇ ಈ ರೀತಿ 11 ದಿನಗಳ ಕಾಲ ದಸರಾ ಆಚರಣೆ ಮಾಡುತ್ತಿರುವುದು ಇದೇ ಪ್ರಥಮ ಬಾರಿ ಎಂದು ಹೇಳಲಾಗಿದೆ.

ಈ ಹಿನ್ನೆಲೆಯಲ್ಲಿ ಈ ಬಾರಿಯ ದಸರಾ ದಿನಗಳು ವಿದ್ವಾಂಸರಲ್ಲಿಯೇ ಗೊಂದಲ ಹುಟ್ಟುಹಾಕಿದೆ. 1399 ರ ವಿಜಯನಗರ ಸಾಮ್ರಾಜ್ಯದ ಆಳ್ವಿಕೆ, 1410ರ ಮೈಸೂರು ಸಂಸ್ಥಾನದ ಆಳ್ವಿಕೆ ಕಾಲದಿಂದ ದಸರಾ ಮಹೋತ್ಸವ ಆಚರಣೆ ಮಾಡಲಾಗುತ್ತಿದ್ದು, ಈವರೆಗೆ 11 ದಿನಗಳ ಕಾಲ ದಸರಾ ಮಹೋತ್ಸವ ಆಚರಿಸಿದ ಉದಾಹರಣೆಗಳಿಲ್ಲ. ನವರಾತ್ರಿಯ ಮರುದಿನ ವಿಜಯದಶಮಿ ಆಚರಿಸುವುದು ಸಂಪ್ರದಾಯ. ವಿಜಯದಶಮಿಯಂದು ಅರಮನೆಯಲ್ಲಿ ಪೂಜೆ ಪುನಸ್ಕಾರಗಳು ನಡೆದರೆ, ರಾಜ್ಯ ಸರ್ಕಾರದ ವತಿಯಿಂದ ಜಂಬೂ ಸವಾರಿ ಮೆರವಣಿಗೆ ನಡೆಯಲಿದೆ.

ರಾಜ್ಯಸರ್ಕಾರ ದಶಮಿ ಪ್ರಕಾರ ಹತ್ತು ದಿನಗಳ ಕಾಲ ಆಚರಿಸಿ ವಿಜಯದಶಮಿ ಮೆರವಣಿಗೆ ನಡೆಸಲಾಗದು. ಏಕೆಂದರೆ ಪಂಚಾಂಗದಲ್ಲಿ ಯಾವ್ಯಾವ ವರ್ಷಗಳಲ್ಲಿ ಏನೇನು ನಡೆಯಬೇಕು ಎಂಬುದು ಈಗಾಗಲೇ ಅಡಕವಾಗಿರುವ ಕಾರಣ ಅದೇ ರೀತಿ ನಡೆಯಬೇಕಿದೆ. ಹಾಗಾಗಿ, ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಚರ್ಚೆಯಾದ ಬಳಿಕವಷ್ಟೇ ಅಂತಿಮ ನಿರ್ಧಾರವಾಗಲಿದೆ ಎಂದು ಅರಮನೆ ಮಂಡಳಿ ಉಪ ನಿರ್ದೇಶಕ ಟಿ.ಎಸ್.ಸುಬ್ರಹ್ಮಣ್ಯ ತಿಳಿಸಿದರು.

ನವರಾತ್ರಿ ಮುಗಿದು ಹತ್ತನೇ ದಿನ ವಿಜಯದಶಮಿ ಬರಲಿದೆ. ದಸರಾ ಮಹೋತ್ಸವ ಹನ್ನೊಂದು ದಿನ ಬಂದರೂ ಅದರ ಲೆಕ್ಕ ಹತ್ತು ದಿನಗಳೇ ಆಗಿರುತ್ತದೆ. ಪಂಚಾಂಗದಲ್ಲಿ ಯಾವ ರೀತಿ ಆಚರಣೆ ಮಾಡಬೇಕು ಎಂಬುದನ್ನು ನೋಡಿ ಹೇಳಬೇಕಿದೆ ಎಂದು ಪುರೋಹಿತರಾದ ಜನಾರ್ಧನ್ ಹೇಳಿದರು.

ಆಂದೋಲನ ಡೆಸ್ಕ್

Recent Posts

ಹನೂರು| ಆಟೋ ಹಾಗೂ ಕಾರಿನ ನಡುವೆ ಡಿಕ್ಕಿ: ಮೂವರಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ‌ ಮಹದೇಶ್ವರಬೆಟ್ಟ ರಸ್ತೆಯ ತಾಳುಬೆಟ್ಟ–ಕೋಣನಕೆರೆ ಮಾರ್ಗದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಆಟೋ…

5 hours ago

ನೀಟ್‌ ಪರೀಕ್ಷೆಯ ರದ್ದು, ಕೇಂದ್ರ ಸರ್ಕಾರದ ಬಹು ದೊಡ್ಡ ಹಗರಣ: ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್

ಬೆಂಗಳೂರು: ನೀಟ್‌ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ…

5 hours ago

ಪಾಕಿಸ್ತಾನದಲ್ಲಿ ಭೀಕರ ಬಾಂಬ್‌ ಸ್ಫೋಟ: 9 ಮಂದಿ ಸಾವು

ಪಾಕಿಸ್ತಾನ: ಇಲ್ಲಿನ ವಾಯುವ್ಯ ಭಾಗದ ಮಾರುಕಟ್ಟೆಯೊಂದರಲ್ಲಿ ರಿಕ್ಷಾಗೆ ಅಳವಡಿಸಿದ್ದ ಬಾಂಬ್‌ ಸ್ಫೋಟಗೊಂಡ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ…

5 hours ago

ನಾಳೆಯಿಂದ ಎರಡು ದಿನ ಸಿದ್ದರಾಮಯ್ಯ ಮೈಸೂರು ಪ್ರವಾಸ

ಮೈಸೂರು: ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಸಂಜೆ 5.30ಕ್ಕೆ ವಿಶೇಷ…

5 hours ago

ವನ್ಯಜೀವಿ ಸಂಚಾರವಿರುವ ಚಾರಣಪಥ, ಸಂಚಾರಪಥ ಸ್ಥಗಿತಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ…

5 hours ago

ನಾಗಮಲೆ ಗ್ರಾಮದಲ್ಲಿ ಎರಡು ಮೇಕೆ ಹೊತ್ತೊಯ್ದ ಚಿರತೆ: ಮತ್ತಷ್ಟು ಆತಂಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ…

5 hours ago