ಮೈಸೂರು

ಇತಿಹಾಸದಲ್ಲೇ ಮೊದಲು..; 10 ದಿನವಲ್ಲ, ಈ ಬಾರಿ 11 ದಿನಗಳ ಕಾಲ ದಸರಾ ಆಚರಣೆ

ಈ ಮಹತ್ವದ ನಿರ್ಧಾರದ ಹಿಂದಿನ ಕಾರಣವೇನು?

ಮೈಸೂರು : ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವವು ಈ ಬಾರಿ ಹತ್ತು ದಿನಗಳ ಬದಲಿಗೆ ಹನ್ನೊಂದು ದಿನಗಳ ಕಾಲ ನಡೆಯಲಿದ್ದು, ದಸರಾ ಮಹೋತ್ಸವದ ಇತಿಹಾಸದಲ್ಲೇ ದಾಖಲೆ ಬರೆಯಲಿದೆ.

ಯದುವಂಶದ ಆಡಳಿತದ ದಿನಗಳಿಂದಲೂ ಚಾಚೂತಪ್ಪದೆ ನಡೆಸಿಕೊಂಡು ಬರುತ್ತಿರುವ ದಸರಾ ಮಹೋತ್ಸವವು ಸಾಮಾನ್ಯವಾಗಿ ಪ್ರತಿ ವರ್ಷ 10 ದಿನಗಳ ಕಾಲ ನಡೆಯುತ್ತದೆ. ದಸರಾ ಪ್ರಾರಂಭವಾಗಿದ್ದಾಗಿನಿಂದಲೂ ಅಂದರೆ 400 ವರ್ಷಗಳಿಂದಲೂ 10 ದಿನಗಳ ಕಾಲ ನಡೆಯುತ್ತಲೇ ಬಂದಿದೆ. ಆದರೆ, ಈ ಬಾರಿ ದಸರಾ 10 ಅಲ್ಲ, 11 ದಿನ.

ಈ ಬಾರಿ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2 ರವರೆಗೆ ದಸರಾ ಆಚರಣೆ ಮಾಡಲಾಗುತ್ತದೆ. ಸೆಪ್ಟಂಬರ್ 26, ಸೆ.27 ಎರಡೂ ದಿನ ಪಂಚಮಿ ಆಗಮನವಿದ್ದು, ಹೀಗಾಗಿ ಈ ಬಾರಿ 11 ದಿನ ದಸರಾ ಆಚರಣೆ ಇರಲಿದೆ. ಇದು ಇತಿಹಾಸದಲ್ಲೇ ಕಂಡು- ಕೇಳರಿಯದ ರೀತಿಯ ದಸರಾ ಮಹೋತ್ಸವ ಆಗಿದ್ದು, ನಾಲ್ಕು ನೂರಕ್ಕೂ ಹೆಚ್ಚು ವರ್ಷಗಳ ಇತಿಹಾಸದಲ್ಲೇ ಈ ರೀತಿ 11 ದಿನಗಳ ಕಾಲ ದಸರಾ ಆಚರಣೆ ಮಾಡುತ್ತಿರುವುದು ಇದೇ ಪ್ರಥಮ ಬಾರಿ ಎಂದು ಹೇಳಲಾಗಿದೆ.

ಈ ಹಿನ್ನೆಲೆಯಲ್ಲಿ ಈ ಬಾರಿಯ ದಸರಾ ದಿನಗಳು ವಿದ್ವಾಂಸರಲ್ಲಿಯೇ ಗೊಂದಲ ಹುಟ್ಟುಹಾಕಿದೆ. 1399 ರ ವಿಜಯನಗರ ಸಾಮ್ರಾಜ್ಯದ ಆಳ್ವಿಕೆ, 1410ರ ಮೈಸೂರು ಸಂಸ್ಥಾನದ ಆಳ್ವಿಕೆ ಕಾಲದಿಂದ ದಸರಾ ಮಹೋತ್ಸವ ಆಚರಣೆ ಮಾಡಲಾಗುತ್ತಿದ್ದು, ಈವರೆಗೆ 11 ದಿನಗಳ ಕಾಲ ದಸರಾ ಮಹೋತ್ಸವ ಆಚರಿಸಿದ ಉದಾಹರಣೆಗಳಿಲ್ಲ. ನವರಾತ್ರಿಯ ಮರುದಿನ ವಿಜಯದಶಮಿ ಆಚರಿಸುವುದು ಸಂಪ್ರದಾಯ. ವಿಜಯದಶಮಿಯಂದು ಅರಮನೆಯಲ್ಲಿ ಪೂಜೆ ಪುನಸ್ಕಾರಗಳು ನಡೆದರೆ, ರಾಜ್ಯ ಸರ್ಕಾರದ ವತಿಯಿಂದ ಜಂಬೂ ಸವಾರಿ ಮೆರವಣಿಗೆ ನಡೆಯಲಿದೆ.

ರಾಜ್ಯಸರ್ಕಾರ ದಶಮಿ ಪ್ರಕಾರ ಹತ್ತು ದಿನಗಳ ಕಾಲ ಆಚರಿಸಿ ವಿಜಯದಶಮಿ ಮೆರವಣಿಗೆ ನಡೆಸಲಾಗದು. ಏಕೆಂದರೆ ಪಂಚಾಂಗದಲ್ಲಿ ಯಾವ್ಯಾವ ವರ್ಷಗಳಲ್ಲಿ ಏನೇನು ನಡೆಯಬೇಕು ಎಂಬುದು ಈಗಾಗಲೇ ಅಡಕವಾಗಿರುವ ಕಾರಣ ಅದೇ ರೀತಿ ನಡೆಯಬೇಕಿದೆ. ಹಾಗಾಗಿ, ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಚರ್ಚೆಯಾದ ಬಳಿಕವಷ್ಟೇ ಅಂತಿಮ ನಿರ್ಧಾರವಾಗಲಿದೆ ಎಂದು ಅರಮನೆ ಮಂಡಳಿ ಉಪ ನಿರ್ದೇಶಕ ಟಿ.ಎಸ್.ಸುಬ್ರಹ್ಮಣ್ಯ ತಿಳಿಸಿದರು.

ನವರಾತ್ರಿ ಮುಗಿದು ಹತ್ತನೇ ದಿನ ವಿಜಯದಶಮಿ ಬರಲಿದೆ. ದಸರಾ ಮಹೋತ್ಸವ ಹನ್ನೊಂದು ದಿನ ಬಂದರೂ ಅದರ ಲೆಕ್ಕ ಹತ್ತು ದಿನಗಳೇ ಆಗಿರುತ್ತದೆ. ಪಂಚಾಂಗದಲ್ಲಿ ಯಾವ ರೀತಿ ಆಚರಣೆ ಮಾಡಬೇಕು ಎಂಬುದನ್ನು ನೋಡಿ ಹೇಳಬೇಕಿದೆ ಎಂದು ಪುರೋಹಿತರಾದ ಜನಾರ್ಧನ್ ಹೇಳಿದರು.

ಆಂದೋಲನ ಡೆಸ್ಕ್

Recent Posts

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

1 hour ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

2 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

4 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

10 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

16 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

16 hours ago