ಮೈಸೂರು

ಇತಿಹಾಸದಲ್ಲೇ ಮೊದಲು..; 10 ದಿನವಲ್ಲ, ಈ ಬಾರಿ 11 ದಿನಗಳ ಕಾಲ ದಸರಾ ಆಚರಣೆ

ಈ ಮಹತ್ವದ ನಿರ್ಧಾರದ ಹಿಂದಿನ ಕಾರಣವೇನು?

ಮೈಸೂರು : ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವವು ಈ ಬಾರಿ ಹತ್ತು ದಿನಗಳ ಬದಲಿಗೆ ಹನ್ನೊಂದು ದಿನಗಳ ಕಾಲ ನಡೆಯಲಿದ್ದು, ದಸರಾ ಮಹೋತ್ಸವದ ಇತಿಹಾಸದಲ್ಲೇ ದಾಖಲೆ ಬರೆಯಲಿದೆ.

ಯದುವಂಶದ ಆಡಳಿತದ ದಿನಗಳಿಂದಲೂ ಚಾಚೂತಪ್ಪದೆ ನಡೆಸಿಕೊಂಡು ಬರುತ್ತಿರುವ ದಸರಾ ಮಹೋತ್ಸವವು ಸಾಮಾನ್ಯವಾಗಿ ಪ್ರತಿ ವರ್ಷ 10 ದಿನಗಳ ಕಾಲ ನಡೆಯುತ್ತದೆ. ದಸರಾ ಪ್ರಾರಂಭವಾಗಿದ್ದಾಗಿನಿಂದಲೂ ಅಂದರೆ 400 ವರ್ಷಗಳಿಂದಲೂ 10 ದಿನಗಳ ಕಾಲ ನಡೆಯುತ್ತಲೇ ಬಂದಿದೆ. ಆದರೆ, ಈ ಬಾರಿ ದಸರಾ 10 ಅಲ್ಲ, 11 ದಿನ.

ಈ ಬಾರಿ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2 ರವರೆಗೆ ದಸರಾ ಆಚರಣೆ ಮಾಡಲಾಗುತ್ತದೆ. ಸೆಪ್ಟಂಬರ್ 26, ಸೆ.27 ಎರಡೂ ದಿನ ಪಂಚಮಿ ಆಗಮನವಿದ್ದು, ಹೀಗಾಗಿ ಈ ಬಾರಿ 11 ದಿನ ದಸರಾ ಆಚರಣೆ ಇರಲಿದೆ. ಇದು ಇತಿಹಾಸದಲ್ಲೇ ಕಂಡು- ಕೇಳರಿಯದ ರೀತಿಯ ದಸರಾ ಮಹೋತ್ಸವ ಆಗಿದ್ದು, ನಾಲ್ಕು ನೂರಕ್ಕೂ ಹೆಚ್ಚು ವರ್ಷಗಳ ಇತಿಹಾಸದಲ್ಲೇ ಈ ರೀತಿ 11 ದಿನಗಳ ಕಾಲ ದಸರಾ ಆಚರಣೆ ಮಾಡುತ್ತಿರುವುದು ಇದೇ ಪ್ರಥಮ ಬಾರಿ ಎಂದು ಹೇಳಲಾಗಿದೆ.

ಈ ಹಿನ್ನೆಲೆಯಲ್ಲಿ ಈ ಬಾರಿಯ ದಸರಾ ದಿನಗಳು ವಿದ್ವಾಂಸರಲ್ಲಿಯೇ ಗೊಂದಲ ಹುಟ್ಟುಹಾಕಿದೆ. 1399 ರ ವಿಜಯನಗರ ಸಾಮ್ರಾಜ್ಯದ ಆಳ್ವಿಕೆ, 1410ರ ಮೈಸೂರು ಸಂಸ್ಥಾನದ ಆಳ್ವಿಕೆ ಕಾಲದಿಂದ ದಸರಾ ಮಹೋತ್ಸವ ಆಚರಣೆ ಮಾಡಲಾಗುತ್ತಿದ್ದು, ಈವರೆಗೆ 11 ದಿನಗಳ ಕಾಲ ದಸರಾ ಮಹೋತ್ಸವ ಆಚರಿಸಿದ ಉದಾಹರಣೆಗಳಿಲ್ಲ. ನವರಾತ್ರಿಯ ಮರುದಿನ ವಿಜಯದಶಮಿ ಆಚರಿಸುವುದು ಸಂಪ್ರದಾಯ. ವಿಜಯದಶಮಿಯಂದು ಅರಮನೆಯಲ್ಲಿ ಪೂಜೆ ಪುನಸ್ಕಾರಗಳು ನಡೆದರೆ, ರಾಜ್ಯ ಸರ್ಕಾರದ ವತಿಯಿಂದ ಜಂಬೂ ಸವಾರಿ ಮೆರವಣಿಗೆ ನಡೆಯಲಿದೆ.

ರಾಜ್ಯಸರ್ಕಾರ ದಶಮಿ ಪ್ರಕಾರ ಹತ್ತು ದಿನಗಳ ಕಾಲ ಆಚರಿಸಿ ವಿಜಯದಶಮಿ ಮೆರವಣಿಗೆ ನಡೆಸಲಾಗದು. ಏಕೆಂದರೆ ಪಂಚಾಂಗದಲ್ಲಿ ಯಾವ್ಯಾವ ವರ್ಷಗಳಲ್ಲಿ ಏನೇನು ನಡೆಯಬೇಕು ಎಂಬುದು ಈಗಾಗಲೇ ಅಡಕವಾಗಿರುವ ಕಾರಣ ಅದೇ ರೀತಿ ನಡೆಯಬೇಕಿದೆ. ಹಾಗಾಗಿ, ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಚರ್ಚೆಯಾದ ಬಳಿಕವಷ್ಟೇ ಅಂತಿಮ ನಿರ್ಧಾರವಾಗಲಿದೆ ಎಂದು ಅರಮನೆ ಮಂಡಳಿ ಉಪ ನಿರ್ದೇಶಕ ಟಿ.ಎಸ್.ಸುಬ್ರಹ್ಮಣ್ಯ ತಿಳಿಸಿದರು.

ನವರಾತ್ರಿ ಮುಗಿದು ಹತ್ತನೇ ದಿನ ವಿಜಯದಶಮಿ ಬರಲಿದೆ. ದಸರಾ ಮಹೋತ್ಸವ ಹನ್ನೊಂದು ದಿನ ಬಂದರೂ ಅದರ ಲೆಕ್ಕ ಹತ್ತು ದಿನಗಳೇ ಆಗಿರುತ್ತದೆ. ಪಂಚಾಂಗದಲ್ಲಿ ಯಾವ ರೀತಿ ಆಚರಣೆ ಮಾಡಬೇಕು ಎಂಬುದನ್ನು ನೋಡಿ ಹೇಳಬೇಕಿದೆ ಎಂದು ಪುರೋಹಿತರಾದ ಜನಾರ್ಧನ್ ಹೇಳಿದರು.

ಆಂದೋಲನ ಡೆಸ್ಕ್

Recent Posts

ಕೈಕೊಟ್ಟ ಮುಂಗಾರು: ಕಬಿನಿ ಜಲಾಶಯದ ನೀರಿನ ಮಟ್ಟ ಮತ್ತಷ್ಟು ಕುಸಿತ

ಎಚ್.ಡಿ.ಕೋಟೆ: ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದ ಜಲಾಶಯಗಳು ಬರಿದಾಗುತ್ತಿವೆ. ರಾಜ್ಯದಲ್ಲಿ ಮೊದಲು ಭರ್ತಿಯಾಗುವ ಜಲಾಶಯ ಎಂಬ…

6 mins ago

ರಾಮಮಂದಿರದಲ್ಲಿ ಅಕ್ರಮ; ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ

ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…

6 hours ago

ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಮೇಜರ್ ಸರ್ಜರಿಗೆ ಕೇಂದ್ರ ವರಿಷ್ಠರ ಚಿಂತನೆ

ಬೆಂಗಳೂರು ಡೈರಿ  ಆರ್.ಟಿ.ವಿಠ್ಠಲಮೂರ್ತಿ  ಹಲವು ಲಿಂಗಾಯತ ಮಠಗಳಿಗೆ ಮುಖ್ಯಮಂತ್ರಿ ಡಿಕೆಶಿ ಅವರು ಆಪ್ಯಾಯಮಾನ ಕರ್ನಾಟಕದಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು…

6 hours ago

ಅವನತಿಯತ್ತ ಸಾಗಿದ ಅಗಸನ ಕೆರೆಯ ಪುನಶ್ಚೇತನ

ಭೇರ್ಯ ಮಹೇಶ್ ಕೆ.ಆರ್.ನಗರ: ಧರ್ಮಸ್ಥಳ ಸಂಸ್ಥೆಯಿಂದ ಕೆರೆ ಅಭಿವೃದ್ಧಿ; ಗ್ರಾಮಸ್ಥರು, ರೈತರಿಂದಲೂ ಸಹಕಾರ  ಕೆ.ಆರ್.ನಗರ: ಹೂಳು ತುಂಬಿ ಅವನತಿಯ ಹಾದಿ…

6 hours ago

2 ವರ್ಷಗಳಿಂದ ಕಬ್ಬು ಅರೆಯದ ಚುಂಚನಕಟ್ಟೆ ಶ್ರೀರಾಮ ಸಕ್ಕರೆ ಕಾರ್ಖಾನೆ

ಆನಂದ್ ಹೊಸೂರು ಕಬ್ಬಿಗೆ ಕಾರ್ಖಾನೆಗಳಿಂದ ಬೇಡಿಕೆಯಿದ್ದರೂ ರೈತರಿಗೆ ದುಬಾರಿ ಸಾಗಣೆ ವೆಚ್ಚ ಭರಿಸುವ ಅನಿವಾರ್ಯತೆ  ಹೊಸೂರು: ಮಾಜಿ ಶಾಸಕ ದಿವಂಗತ…

6 hours ago

ಸಾಹಿತ್ಯದಲ್ಲೂ ಹೋರಾಟದ ಛಾಪು ಮೂಡಿಸಿದ ಮುಳ್ಳೂರು: ಎಸ್.ಜಿ.ಸಿದ್ದರಾಮಯ್ಯ ಬಣ್ಣನೆ

ಮುಳ್ಳೂರು ನಾಗರಾಜ ಕಾವ್ಯ ಪ್ರಶಸ್ತಿ, ರಾಜಶೇಖರ ಕೋಟಿ ನೆನಪು ಕಾರ್ಯಕ್ರಮ ಪತ್ರಿಕಾರಂಗ ಸೇರಿ ಬಹುತೇಕ ಕ್ಷೇತ್ರಗಳಿಗೆ ಕೋಟಿ ಕೊಡುಗೆ:ಮಹದೇವಸ್ವಾಮಿ ಮೈಸೂರು:…

6 hours ago