ಮೈಸೂರು

ಆತ್ಮಹತ್ಯೆ ಯತ್ನಿಸಿದ ಅರಣ್ಯ ಇಲಾಖೆ ಗುತ್ತಿಗೆ ನೌಕರ

ಮೈಸೂರು : ಅರಣ್ಯ ಇಲಾಖೆ ಹಂಗಾಮಿ ಜೀಪ್ ಚಾಲಕ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜಿಲ್ಲೆಯ ಹೆಚ್.ಡಿ ಕೋಟೆ ತಾಲೂಕಿನಲ್ಲಿ ನಡೆದಿದೆ. ಹುಣಸೂರು ತಾಲೂಕಿನ ಸಿಂಗರ ಮಾರನಹಳ್ಳಿ ಗ್ರಾಮದ ವಿನೋದ್ (24) ಆತ್ಮಹತ್ಯೆಗೆ ಯತ್ನಿಸಿ‌ದ ಯುವಕ. ಮೇಲಾಧಿಕಾರಿಗಳ ಕಿರುಕುಳದಿಂದ ಯುವಕ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ಹೇಳಲಾಗಿದೆ.

ವಿನೋದ್​ ಹೆಚ್.ಡಿ.ಕೋಟೆ ಹ್ಯಾಂಡ್ ಪೋಸ್ಟ್​ನ ಅರಣ್ಯ ಇಲಾಖೆ ವಸತಿ ಗೃಹದಲ್ಲಿ ಕ್ರಿಮಿನಾಶಕ ಸೇವಿಸಿದ್ದಾನೆ. ಈ ವೇಳೆ, ಪ್ರಜ್ಞಾಹೀನನಾಗಿದ್ದ ವಿನೋದ್‌ನನ್ನು ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಇಲ್ಲಿನ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಈ ಸಂಬಂಧ ಪ್ರತಿಕ್ರಿಯಿಸಿರುವ ಡಿಆರ್​ಎಫ್​ಒ ನವೀನ್, ಜೀಪ್​ ಟೈರ್ ಪಂಚರ್​ ಆಗಿದ್ದ ಹಿನ್ನೆಲೆ ನಾನು ವಿನೋದ್​​ಗೆ, ನಮಗೆ ಗೊತ್ತಿಲ್ಲ, ನೀವೇ ಪಂಚರ್​ ಹಾಕಿಸಬೇಕು ಎಂದು ಸುಮ್ಮನೆ ಗದರಿಸಿದೆ. ಅಷ್ಟಕ್ಕೆ ವಿನೋದ್​ ನನ್ನ ವಿರುದ್ಧ ದೂರು ನೀಡಲು ಕಚೇರಿಗೆ ತೆರಳಿದ್ದರು. ಕಚೇರಿಯಲ್ಲಿ ಏನಾಗಿದೆ ಗೊತ್ತಿಲ್ಲ. ಬಳಿಕ ಇಲ್ಲಿನ ವಸತಿಗೃಹಕ್ಕೆ ಬಂದಿದ್ದಾರೆ. ಈ ವೇಳೆ, ನಾನು ಕಾಫಿ ಕುಡಿಯಲು ಹೋಗಿದ್ದೆ. ನಾನು ಬರುವಷ್ಟರಲ್ಲಿ ವಿಷ ಸೇವಿಸಿದ್ದಾನೆ ಎಂದು ಹೇಳಿದರು. ನಾನು ಅವರ ಮೇಲೆ ಹಲ್ಲೆ ಮಾಡಿಲ್ಲ. ನಮಗೆ ಹಲ್ಲೆ ಮಾಡುವ ಯಾವುದೇ ಹಕ್ಕಿಲ್ಲ. ಬುಧವಾರ ಸಂಜೆ 5.45 ಸುಮಾರಿಗೆ ವಿಷ ಸೇವಿಸಿದ್ದಾರೆ. ಈ ಬಗ್ಗೆ ತಿಳಿದ ತಕ್ಷಣ ಅವರನ್ನು ಇಲ್ಲಿನ ಆಸ್ಪತ್ರೆಗೆ ದಾಖಲಿಸಿದೆವು ಎಂದು ಹೇಳಿದರು.

lokesh

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

6 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

6 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

6 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

9 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

9 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

9 hours ago