ಮೈಸೂರು : ಅರಣ್ಯ ಇಲಾಖೆ ಹಂಗಾಮಿ ಜೀಪ್ ಚಾಲಕ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜಿಲ್ಲೆಯ ಹೆಚ್.ಡಿ ಕೋಟೆ ತಾಲೂಕಿನಲ್ಲಿ ನಡೆದಿದೆ. ಹುಣಸೂರು ತಾಲೂಕಿನ ಸಿಂಗರ ಮಾರನಹಳ್ಳಿ ಗ್ರಾಮದ ವಿನೋದ್ (24) ಆತ್ಮಹತ್ಯೆಗೆ ಯತ್ನಿಸಿದ ಯುವಕ. ಮೇಲಾಧಿಕಾರಿಗಳ ಕಿರುಕುಳದಿಂದ ಯುವಕ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ಹೇಳಲಾಗಿದೆ.
ವಿನೋದ್ ಹೆಚ್.ಡಿ.ಕೋಟೆ ಹ್ಯಾಂಡ್ ಪೋಸ್ಟ್ನ ಅರಣ್ಯ ಇಲಾಖೆ ವಸತಿ ಗೃಹದಲ್ಲಿ ಕ್ರಿಮಿನಾಶಕ ಸೇವಿಸಿದ್ದಾನೆ. ಈ ವೇಳೆ, ಪ್ರಜ್ಞಾಹೀನನಾಗಿದ್ದ ವಿನೋದ್ನನ್ನು ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಇಲ್ಲಿನ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
ಈ ಸಂಬಂಧ ಪ್ರತಿಕ್ರಿಯಿಸಿರುವ ಡಿಆರ್ಎಫ್ಒ ನವೀನ್, ಜೀಪ್ ಟೈರ್ ಪಂಚರ್ ಆಗಿದ್ದ ಹಿನ್ನೆಲೆ ನಾನು ವಿನೋದ್ಗೆ, ನಮಗೆ ಗೊತ್ತಿಲ್ಲ, ನೀವೇ ಪಂಚರ್ ಹಾಕಿಸಬೇಕು ಎಂದು ಸುಮ್ಮನೆ ಗದರಿಸಿದೆ. ಅಷ್ಟಕ್ಕೆ ವಿನೋದ್ ನನ್ನ ವಿರುದ್ಧ ದೂರು ನೀಡಲು ಕಚೇರಿಗೆ ತೆರಳಿದ್ದರು. ಕಚೇರಿಯಲ್ಲಿ ಏನಾಗಿದೆ ಗೊತ್ತಿಲ್ಲ. ಬಳಿಕ ಇಲ್ಲಿನ ವಸತಿಗೃಹಕ್ಕೆ ಬಂದಿದ್ದಾರೆ. ಈ ವೇಳೆ, ನಾನು ಕಾಫಿ ಕುಡಿಯಲು ಹೋಗಿದ್ದೆ. ನಾನು ಬರುವಷ್ಟರಲ್ಲಿ ವಿಷ ಸೇವಿಸಿದ್ದಾನೆ ಎಂದು ಹೇಳಿದರು. ನಾನು ಅವರ ಮೇಲೆ ಹಲ್ಲೆ ಮಾಡಿಲ್ಲ. ನಮಗೆ ಹಲ್ಲೆ ಮಾಡುವ ಯಾವುದೇ ಹಕ್ಕಿಲ್ಲ. ಬುಧವಾರ ಸಂಜೆ 5.45 ಸುಮಾರಿಗೆ ವಿಷ ಸೇವಿಸಿದ್ದಾರೆ. ಈ ಬಗ್ಗೆ ತಿಳಿದ ತಕ್ಷಣ ಅವರನ್ನು ಇಲ್ಲಿನ ಆಸ್ಪತ್ರೆಗೆ ದಾಖಲಿಸಿದೆವು ಎಂದು ಹೇಳಿದರು.
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್ಎಸ್ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…