ಮೈಸೂರು : ಅರಣ್ಯ ಇಲಾಖೆ ಹಂಗಾಮಿ ಜೀಪ್ ಚಾಲಕ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜಿಲ್ಲೆಯ ಹೆಚ್.ಡಿ ಕೋಟೆ ತಾಲೂಕಿನಲ್ಲಿ ನಡೆದಿದೆ. ಹುಣಸೂರು ತಾಲೂಕಿನ ಸಿಂಗರ ಮಾರನಹಳ್ಳಿ ಗ್ರಾಮದ ವಿನೋದ್ (24) ಆತ್ಮಹತ್ಯೆಗೆ ಯತ್ನಿಸಿದ ಯುವಕ. ಮೇಲಾಧಿಕಾರಿಗಳ ಕಿರುಕುಳದಿಂದ ಯುವಕ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ಹೇಳಲಾಗಿದೆ.
ವಿನೋದ್ ಹೆಚ್.ಡಿ.ಕೋಟೆ ಹ್ಯಾಂಡ್ ಪೋಸ್ಟ್ನ ಅರಣ್ಯ ಇಲಾಖೆ ವಸತಿ ಗೃಹದಲ್ಲಿ ಕ್ರಿಮಿನಾಶಕ ಸೇವಿಸಿದ್ದಾನೆ. ಈ ವೇಳೆ, ಪ್ರಜ್ಞಾಹೀನನಾಗಿದ್ದ ವಿನೋದ್ನನ್ನು ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಇಲ್ಲಿನ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
ಈ ಸಂಬಂಧ ಪ್ರತಿಕ್ರಿಯಿಸಿರುವ ಡಿಆರ್ಎಫ್ಒ ನವೀನ್, ಜೀಪ್ ಟೈರ್ ಪಂಚರ್ ಆಗಿದ್ದ ಹಿನ್ನೆಲೆ ನಾನು ವಿನೋದ್ಗೆ, ನಮಗೆ ಗೊತ್ತಿಲ್ಲ, ನೀವೇ ಪಂಚರ್ ಹಾಕಿಸಬೇಕು ಎಂದು ಸುಮ್ಮನೆ ಗದರಿಸಿದೆ. ಅಷ್ಟಕ್ಕೆ ವಿನೋದ್ ನನ್ನ ವಿರುದ್ಧ ದೂರು ನೀಡಲು ಕಚೇರಿಗೆ ತೆರಳಿದ್ದರು. ಕಚೇರಿಯಲ್ಲಿ ಏನಾಗಿದೆ ಗೊತ್ತಿಲ್ಲ. ಬಳಿಕ ಇಲ್ಲಿನ ವಸತಿಗೃಹಕ್ಕೆ ಬಂದಿದ್ದಾರೆ. ಈ ವೇಳೆ, ನಾನು ಕಾಫಿ ಕುಡಿಯಲು ಹೋಗಿದ್ದೆ. ನಾನು ಬರುವಷ್ಟರಲ್ಲಿ ವಿಷ ಸೇವಿಸಿದ್ದಾನೆ ಎಂದು ಹೇಳಿದರು. ನಾನು ಅವರ ಮೇಲೆ ಹಲ್ಲೆ ಮಾಡಿಲ್ಲ. ನಮಗೆ ಹಲ್ಲೆ ಮಾಡುವ ಯಾವುದೇ ಹಕ್ಕಿಲ್ಲ. ಬುಧವಾರ ಸಂಜೆ 5.45 ಸುಮಾರಿಗೆ ವಿಷ ಸೇವಿಸಿದ್ದಾರೆ. ಈ ಬಗ್ಗೆ ತಿಳಿದ ತಕ್ಷಣ ಅವರನ್ನು ಇಲ್ಲಿನ ಆಸ್ಪತ್ರೆಗೆ ದಾಖಲಿಸಿದೆವು ಎಂದು ಹೇಳಿದರು.
ನೇರಳೆ ಹಣ್ಣಿನ ಬೀಜಗಳ ಔಷಧಿಯ ಗುಣಗಳನ್ನು ಪರಿಗಣಿಸಿ ಸರ್ಕಾರವು ಇವುಗಳ ಸಂರಕ್ಷಣೆ ಮತ್ತು ಮೌಲ್ಯವರ್ಧನೆಗೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ತೋಟಗಾರಿಕಾ…
ಮೈಸೂರಿನ ರಿಂಗ್ ರಸ್ತೆ ಪರಸಯ್ಯನ ಹುಂಡಿ ಸರ್ಕಲ್ನಲ್ಲಿ ಪ್ರತಿನಿತ್ಯ ಸಾರಿಗೆ ನಿಗಮದ ಬಸ್ಗಳನ್ನು ನಿಲುಗಡೆ ಮಾಡುವುದರಿಂದ ಪ್ರತಿನಿತ್ಯ ಟ್ರಾಫಿಕ್ ಜಾಮ್…
ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದು, ಶಾಲೆಗಳು ಮತ್ತೆ ಬಾಗಿಲು ತೆರೆದಿವೆ. ಹೊಸ ಕನಸುಗಳೊಂದಿಗೆ ಮಕ್ಕಳು ತರಗತಿಗಳತ್ತ ಹೆಜ್ಜೆ ಇಟ್ಟಿದ್ದಾರೆ. ನೂತನ…
ನವೀನ್ ಡಿಸೋಜ ಜಿಲ್ಲೆಯಲ್ಲಿ ಶೇ.೩೦.೮೫ರಷ್ಟು ಮಂದಿಗೆ ಮಾತ್ರ ಲಸಿಕೆ; ಗರ್ಭಕಂಠ ಕ್ಯಾನ್ಸರ್ ತಡೆಯಲು ಲಸಿಕೆ ಕಡ್ಡಾಯ: ಆರೋಗ್ಯ ಇಲಾಖೆ ಮನವಿ…
ಹೇಮಂತ್ಕುಮಾರ್ ೧೦ ಚಿನ್ನ, ೬ ಬೆಳ್ಳಿ, ೩ ಕಂಚಿನ ಪದಕಗಳನ್ನು ಬಾಚಿದ ಆಕ್ಸ್ಫರ್ಡ್ ಅಕಾಡೆಮಿ ಮಂಡ್ಯ: ಪರಿಶ್ರಮವಿದ್ದೆಡೆ ಸಾಧನೆ ಸಾಧ್ಯ ಎಂಬುದಕ್ಕೆ ಶ್ರೀರಂಗಪಟ್ಟಣ…
ಮಂಜು ಕೋಟೆ ಕೋಟೆ: ಔಷಧ ಸಿಂಪಡಿಸಿದ ಬಿತ್ತನೆ ಬೀಜ ವಿತರಿಸಿದರೂ ಪ್ರಯೋಜನವಾಗದೆ ಲಕ್ಷಾಂತರ ರೂ. ನಷ್ಟ ಎಚ್.ಡಿ.ಕೋಟೆ: ಸಾವಿರಾರು ಎಕರೆಯಲ್ಲಿ…