ಮೊನ್ನೆಯಷ್ಟೇ ದನ ಮೇಯಿಸಲೆಂದು ತೆರಳಿದ್ದ ಮಹಿಳೆಯೊಬ್ಬರ ಮೇಲೆ ದಾಳಿ ನಡೆಸಿ ಕೊಂದು ಹಾಕಿದ್ದ ನರಭಕ್ಷಕ ಹುಲಿಯನ್ನು ಇದೀಗ ಅರಣ್ಯ ಇಲಾಖೆಯ ಸಿಬ್ಬಂದಿಗಳು ಬಂಧಿಸಿದ್ದಾರೆ. ನಂಜನಗೂಡು ತಾಲೂಕಿನ ಹೆಡಿಯಾಲ ಸಮೀಪ ಬಂಡೀಪುರ ರಕ್ಷಿತಾರಣ್ಯದ ವ್ಯಾಪ್ತಿಯಲ್ಲಿ ಕೆಲ ದಿನಗಳ ಹಿಂದೆ ಇದೇ ಹುಲಿ ಹಸುವೊಂದನ್ನೂ ಸಹ ಕೊಂದಿತ್ತು.
ಮಧ್ಯರಾತ್ರಿ 1.45ರ ವೇಳೆಗೆ ಹಸುವನ್ನು ಕೊಂದಿದ್ದ ಜಾಗಕ್ಕೆ ಮತ್ತೆ ಬಂದಿದ್ದ ಈ ಹುಲಿಯನ್ನು ಅರಿವಳಿಕೆ ಚುಚ್ಚುಮದ್ದು ನೀಡುವ ಮೂಲಕ ಹಿಡಿಯಲಾಗಿದೆ. ಸೆರೆಸಿಕ್ಕ ಹುಲಿ 10 ವರ್ಷದ ಗಂಡು ಹುಲಿಯಾಗಿದ್ದು ಸದ್ಯ ಈ ಹುಲಿಯನ್ನು ಮೈಸೂರಿನ ಮೃಗಾಯಲದಲ್ಲಿ ಬಿಡಲಾಗಿದೆ.
ರತ್ನಮ್ಮ ಎಂಬ ದನಗಾಹಿಯನ್ನು ಕೊಂದ ಬಳಿಕ ಈ ಹುಲಿಯನ್ನು ಹಿಡಿಯಬೇಕೆಂದು ಜನರು ಅರಣ್ಯ ಇಲಾಖೆಯ ವಿರುದ್ಧ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದರು. ಸತತವಾಗಿ ಮೂರು ದಿನಗಳ ಪ್ರಯತ್ನದ ಬಳಿಕ ಹುಲಿಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ.
ರಾಯಪುರ: ಛತ್ತೀಸ್ಗಢದ ಶಕ್ತಿ ಜಿಲ್ಲೆಯ ವಿದ್ಯುತ್ ಸ್ಥಾವರದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ…
ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…
ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…
ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ…
ಮೈಸೂರು ಮಹಾರಾಜರ ಕಾಲದಲ್ಲಿ ನಿರ್ಮಾಣಗೊಂಡ ಕಟ್ಟಡಗಳು ಇಂದಿಗೂ ಸದೃಢವಾಗಿ ಕಂಗೊಳಿಸುತ್ತಿರುವುದು ಮೈಸೂರಿನ ಭವ್ಯ ಪರಂಪರೆಗೆ ಸಾಕ್ಷಿಯಾಗಿವೆ. ಇಂತಹ ಪಾರಂಪರಿಕ ಕಟ್ಟಡಗಳ…
ಮಡಿಕೇರಿ: ಓದುವ ಛಲ, ಆತ್ಮವಿಶ್ವಾಸ, ಪ್ರೋತ್ಸಾಹ, ಮಾರ್ಗದರ್ಶನವಿದ್ದರೆ ಮಕ್ಕಳು ಸರ್ಕಾರಿ ಕಾಲೇಜಿನಲ್ಲಿ ಓದಿದರೂ ಉತ್ತಮ ಅಂಕ ಗಳಿಸಲು ಸಾಧ್ಯವಿದೆ. ಇದಕ್ಕೆ…