ಮೈಸೂರು: ಇಲ್ಲಿನ ಚಾಮುಂಡಿ ಬೆಟ್ಟದಲ್ಲಿ ಶುಕ್ರವಾರ ಕಾಣಿಸಿಕೊಂಡ ಬೆಂಕಿಯಿಂದ 35 ಎಕರೆ ಕಾಡು ಸಂಪೂರ್ಣ ಸುಟ್ಟು ಹೋಗಿದೆ ಎಂದು ಡಿಸಿಎಫ್ ಬಸವರಾಜು ಹೇಳಿದರು.
ಇಂದು ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಿನ್ನೆ ಮಾನವ ನಿರ್ಮಿತ ಬೆಂಕಿಯು ಚಾಮುಂಡಿ ಬೆಟ್ಟವನ್ನು ಆವರಿಸಿದ್ದು, ದೇವಿಕೆರೆ, ಗೊಲ್ಲಹಳ್ಳಿ ಭಾಗದಲ್ಲಿ 35 ಎಕರೆ ಕಾಡು ಸಂಪೂರ್ಣ ಸುಟ್ಟು ಹೋಗಿದೆ ಎಂದರು.
ಉದ್ದೇಶ ಪೂರ್ವಕವಾಗಿ ಬೆಂಕಿ ಹಾಕಿದ್ದಾರೆ. ಆ ಬಗ್ಗೆ ತನಿಖೆ ನಡೆಯುತ್ತಿದೆ ಗಾಳಿ ವೇಗ ಹಾಗೂ ಬಿಸಿಲಿನ ವಾತಾವರಣ ಇದ್ದುದರಿಂದ ಬೆಂಕಿ ಹೆಚ್ಚಿತ್ತು ನಾವು ಎಷ್ಟೇ ಪ್ರಯತ್ನ ಪಟ್ಟರೂ ಆ ಜಾಗಕ್ಕೆ ಹೋಗಲು ಸಾಧ್ಯವಾಗಲಿಲ್ಲ. ಅಗ್ನಿಶಾಮಕ ದಳ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಬೆಂಕಿ ನಂದಿಸಲು ಶ್ರಮ ಹಾಕಿದ್ದಾರೆ. ಸದ್ಯ ಬೆಂಕಿ ನಿಯಂತ್ರಣಕ್ಕೆ ಬಂದಿದೆ ಎಂದು ತಿಳಿಸಿದರು.
ಇಂದು ಬೆಳಿಗ್ಗೆ ಕೂಡ ಎರಡು ತಂಡ ಮಾಡಿ ಕೆಂಡ ಇದ್ರೆ ಅದನ್ನು ಆರಿಸಲು ಹೇಳಿದ್ವಿ. ಸದ್ಯಕ್ಕೆ ಡ್ರೋನ್ ಹಾರಿಸಿ ಎಲ್ಲವನ್ನೂ ಪರಿಶೀಲನೆ ಮಾಡಿದ್ದೇವೆ ಎಂದು ಹೇಳಿದರು.
ಸಣ್ಣ ಕಿಡಿ ಇಡೀ ಕಾಡನ್ನೇ ನಾಶ ಮಾಡತ್ತದೆ ಹೀಗಾಗಿ ಸಾರ್ವಜನಿಕರು ಕಾಡಿನಲ್ಲಿ ಬಿಡಿ ಸಿಗರೇಟ್ ಸೇದಿ ಎಸೆಯಬೇಡಿ ಎಂದು ಮನವಿ ಅವರು ಮಾಡಿದರು.
ಅದೃಷ್ಟವಶಾತ್ ಯಾವುದೇ ಪ್ರಾಣಿಗಳಿಗೆ ಹಾನಿಯಾಗಿಲ್ಲ. ಬೆಳಿಗ್ಗೆ ನಮ್ಮ ವಾಚರ್ ಕಣ್ಣಿಗೆ ಚಿರತೆ ಹಾಗೂ ಮರಿಗಳು ಬಿದ್ದಿದೆ. ಬೆಂಕಿ ಬಿದ್ದ ತಕ್ಷಣ ಪ್ರಾಣಿಗಳು ಒಂದು ಕಡೆಯಿಂದ ಮತ್ತೊಂದು ಭಾಗಕ್ಕೆ ಹೋಗಿವೆ ಎಂದರು.
ರಾಮನಗರ: ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದ ನಟ ದಿಲೀಪ್ ರಾಜ್ ಅವರ ಅಂತ್ಯಕ್ರಿಯೆ ಲಿಂಗಾಯತ ಸಂಪ್ರದಾಯದಂತೆ ನೆರವೇರಿತು. ರಾಮನಗರ ತಾಲ್ಲೂಕಿನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಗೋಪಿನಾಥಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲಂಬಾಡಿ ಗ್ರಾಮದಲ್ಲಿನ ಪುರಾತನ…
ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕಿ ಸೋನಿಗಾ ಗಾಂಧೀ ಅವರು ನಿಯಮಿತ ವೈದ್ಯಕೀಯ ತಪಾಸಣೆಗೆ ತೆರಳಿದ್ದರು. ಇದೀಗ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.…
ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದ ಪರಿಣಾಮ ವೈದ್ಯಕೀಯ ಕೋರ್ಸ್ಗಳ ಪ್ರವೇಶಾತಿಗೆ ಕಳೆದ ಮೇ.3ರಂದು ನಡೆದಿದ್ದ ನೀಟ್- ಯುಜಿ ಮರುಪರೀಕ್ಷೆಯ ದಿನಾಂಕವನ್ನು…
ಬೆಂಗಳೂರು: ಡೀಸೆಲ್ ಬೆಲೆ ಹೆಚ್ಚಾದರೆ ಸಾರಿಗೆ ಸಂಸ್ಥೆಗಳಿಗೆ ಹೊರೆಯಾಗಲಿದೆ. ಬಸ್ ಪ್ರಯಾಣ ದರ ಏರಿಕೆ ಬಗ್ಗೆ ಸದ್ಯಕ್ಕೆ ಯಾವುದೇ ಚಿಂತನೆ…
ಮೈಸೂರು: ನೀಟ್ ಪರೀಕ್ಷೆ ರದ್ದಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಮೈಸೂರು ಯೂತ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಸಂಸದ…