ಮೈಸೂರು: ಇಲ್ಲಿನ ಚಾಮುಂಡಿ ಬೆಟ್ಟದಲ್ಲಿ ಶುಕ್ರವಾರ ಕಾಣಿಸಿಕೊಂಡ ಬೆಂಕಿಯಿಂದ 35 ಎಕರೆ ಕಾಡು ಸಂಪೂರ್ಣ ಸುಟ್ಟು ಹೋಗಿದೆ ಎಂದು ಡಿಸಿಎಫ್ ಬಸವರಾಜು ಹೇಳಿದರು.
ಇಂದು ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಿನ್ನೆ ಮಾನವ ನಿರ್ಮಿತ ಬೆಂಕಿಯು ಚಾಮುಂಡಿ ಬೆಟ್ಟವನ್ನು ಆವರಿಸಿದ್ದು, ದೇವಿಕೆರೆ, ಗೊಲ್ಲಹಳ್ಳಿ ಭಾಗದಲ್ಲಿ 35 ಎಕರೆ ಕಾಡು ಸಂಪೂರ್ಣ ಸುಟ್ಟು ಹೋಗಿದೆ ಎಂದರು.
ಉದ್ದೇಶ ಪೂರ್ವಕವಾಗಿ ಬೆಂಕಿ ಹಾಕಿದ್ದಾರೆ. ಆ ಬಗ್ಗೆ ತನಿಖೆ ನಡೆಯುತ್ತಿದೆ ಗಾಳಿ ವೇಗ ಹಾಗೂ ಬಿಸಿಲಿನ ವಾತಾವರಣ ಇದ್ದುದರಿಂದ ಬೆಂಕಿ ಹೆಚ್ಚಿತ್ತು ನಾವು ಎಷ್ಟೇ ಪ್ರಯತ್ನ ಪಟ್ಟರೂ ಆ ಜಾಗಕ್ಕೆ ಹೋಗಲು ಸಾಧ್ಯವಾಗಲಿಲ್ಲ. ಅಗ್ನಿಶಾಮಕ ದಳ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಬೆಂಕಿ ನಂದಿಸಲು ಶ್ರಮ ಹಾಕಿದ್ದಾರೆ. ಸದ್ಯ ಬೆಂಕಿ ನಿಯಂತ್ರಣಕ್ಕೆ ಬಂದಿದೆ ಎಂದು ತಿಳಿಸಿದರು.
ಇಂದು ಬೆಳಿಗ್ಗೆ ಕೂಡ ಎರಡು ತಂಡ ಮಾಡಿ ಕೆಂಡ ಇದ್ರೆ ಅದನ್ನು ಆರಿಸಲು ಹೇಳಿದ್ವಿ. ಸದ್ಯಕ್ಕೆ ಡ್ರೋನ್ ಹಾರಿಸಿ ಎಲ್ಲವನ್ನೂ ಪರಿಶೀಲನೆ ಮಾಡಿದ್ದೇವೆ ಎಂದು ಹೇಳಿದರು.
ಸಣ್ಣ ಕಿಡಿ ಇಡೀ ಕಾಡನ್ನೇ ನಾಶ ಮಾಡತ್ತದೆ ಹೀಗಾಗಿ ಸಾರ್ವಜನಿಕರು ಕಾಡಿನಲ್ಲಿ ಬಿಡಿ ಸಿಗರೇಟ್ ಸೇದಿ ಎಸೆಯಬೇಡಿ ಎಂದು ಮನವಿ ಅವರು ಮಾಡಿದರು.
ಅದೃಷ್ಟವಶಾತ್ ಯಾವುದೇ ಪ್ರಾಣಿಗಳಿಗೆ ಹಾನಿಯಾಗಿಲ್ಲ. ಬೆಳಿಗ್ಗೆ ನಮ್ಮ ವಾಚರ್ ಕಣ್ಣಿಗೆ ಚಿರತೆ ಹಾಗೂ ಮರಿಗಳು ಬಿದ್ದಿದೆ. ಬೆಂಕಿ ಬಿದ್ದ ತಕ್ಷಣ ಪ್ರಾಣಿಗಳು ಒಂದು ಕಡೆಯಿಂದ ಮತ್ತೊಂದು ಭಾಗಕ್ಕೆ ಹೋಗಿವೆ ಎಂದರು.
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…
ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…