ಮೈಸೂರು

ವಿವಿಧ ಆನೆ ಶಿಬಿರಗಳಿಗೆ ಅರಣ್ಯಾಧಿಕಾರಿಗಳ ಭೇಟಿ: ಆನೆಗಳ ಆರೋಗ್ಯ ತಪಾಸಣೆ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸಲು ಈಗಾಗಲೇ ಆನೆಗಳ ಆಯ್ಕೆ ಪ್ರಕ್ರಿಯೆ ಶುರುವಾಗಿದೆ.

ಈ ಹಿನ್ನೆಲೆಯಲ್ಲಿ ವಿವಿಧ ಆನೆ ಶಿಬಿರಗಳಿಗೆ ಭೇಟಿ ನೀಡುತ್ತಿರುವ ಅರಣ್ಯಾಧಿಕಾರಿಗಳು, ಹೆಣ್ಣು ಆನೆಗಳ ಗರ್ಭಾಧಾರಣೆಯ ಪರೀಕ್ಷೆಗಾಗಿ ಸ್ಯಾಂಪಲ್ಸ್‌ಗಳನ್ನು ಸಂಗ್ರಹಿಸಿ ಲ್ಯಾಬ್‌ಗೆ ಕಳುಹಿಸುತ್ತಿದ್ದಾರೆ.

ಲ್ಯಾಬ್‌ನಿಂದ ಪರೀಕ್ಷಾ ವರದಿ ಬಂದ ನಂತರ ಆನೆಗಳ ತಾತ್ಕಾಲಿಕ ಪಟ್ಟಿಯನ್ನು ತಯಾರಿಸಿ ಸಂಬಂಧಪಟ್ಟ ಮೇಲಾಧಿಕಾರಿಗಳೊಂದಿಗೆ ಚರ್ಚಿಸಿ ಅಂತಿಮ ಪಟ್ಟಿಯನ್ನು ತಯಾರಿಸಿ ಅನುಮೋದನೆಗಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಿದ್ದಾರೆ.

ಸರ್ಕಾರದಿಂದ ಅನುಮೋದನೆಗೊಂಡ ಆನೆಗಳ ಆಯ್ಕೆ ಪಟ್ಟಿಯನ್ನು ತದನಂತರ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಅವರು, ಅರಣ್ಯ ಇಲಾಖೆಯಿಂದ ಜಂಬೂಸವಾರಿಯಲ್ಲಿ ಭಾಗವಹಿಸುವ ಇಲಾಖೆ ಆನೆಗಳ ಆಯ್ಕೆ ಪಟ್ಟಿಯನ್ನು ಬಿಡುಗಡೆಗೊಳಿಸಲಿದ್ದಾರೆ.

ಪ್ರಸ್ತುತ ಆನೆಗಳ ಆರೋಗ್ಯ ತಪಾಸಣೆ ಕಾರ್ಯ ಪ್ರಗತಿಯಲ್ಲಿದ್ದು, ಜುಲೈ.20ರ ನಂತರ ಆನೆಗಳ ಆಯ್ಕೆಪಟ್ಟಿಯ ಪ್ರಕಟಣೆಯನ್ನು ಪ್ರಕಟಿಸಲು ಕ್ರಮ ಕೈಗೊಳ್ಳಲಾಗುತ್ತದೆ.

ಆಂದೋಲನ ಡೆಸ್ಕ್

Recent Posts

ಕಾವೇರಿ ಕೊಳ್ಳದ ರೈತರಿಗೆ 4 ಕಟ್ಟು ನೀರು ; ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…

4 hours ago

ಮೈಸೂರು | ಭಾರತ್ ಜೋಡೋ ನೋಂದಣಿಗೆ ಚಾಲನೆ

ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…

4 hours ago

ಎಂಡಿಎ ಬದಲಿ ನಿವೇಶನ ಹಂಚಿಕೆ ರದ್ದುಪಡಿಸಿ ಸರ್ಕಾರ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…

5 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ : ಸಿ.ಎಂ ಡಿ.ಕೆ.ಶಿವಕುಮಾರ್*

ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…

8 hours ago

ಕ್ಯಾಪ್ಟನ್ ಅಭಿಮನ್ಯು ಆನೆಗೆ ರಾಜೋಚಿತ ಬೀಳ್ಕೊಡುಗೆ ನೀಡಿ : ಸಚಿವ ಖಂಡ್ರೆ

ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…

10 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…

11 hours ago