ಮೈಸೂರು

ಮಾಜಿ ಐಬಿ ಅಧಿಕಾರಿ ಕುಲಕರ್ಣಿ ನಿಧನ: ಇಬ್ಬರ ಬಂಧನ

ಅಕ್ರಮ ಮನೆ ನಿರ್ಮಾಣ ಪ್ರಶ್ನಿಸಿದ್ದೇ ನಿವೃತ್ತ ಐಬಿ ಅಧಿಕಾರಿಯ ಕೊಲೆಗೆ ಕಾರಣವಾಯಿತು.

ಮೈಸೂರು : ಮಾನಸಗಂಗೋತ್ರಿ ಕ್ಯಾಂಪಸ್ ನಲ್ಲಿ ಮೃತಪಟ್ಟ ಕೇಂದ್ರ ಗುಪ್ತಚರ ದಳದ ನಿವೃತ್ತ ಅಧಿಕಾರಿ ಆರ್. ಬಿ. ಕುಲಕರ್ಣಿ ಅವರ ಕೊಲೆ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಮೈಸೂರು ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಮೈಸೂರಿನ ಟಿ.ಕೆ.ಲೇಔಟ್  ನಿವಾಸಿಯಾಗಿದ್ದ 83 ವರ್ಷದ ಆರ್.ಎನ್.ಕುಲಕರ್ಣಿ ಅವರ ಕೊಲೆ ಸಂಬಂಧ ಅವರ ನೆರೆಮನೆ ನಿವಾಸಿ ಮಾದಪ್ಪ ಅವರ ಕಿರಿಯ ಮಗ ಮನು (30) ಮತ್ತು ಆತನ ಸ್ನೇಹಿತ ವರುಣ್ (30) ಎಂಬಾತನನ್ನು ಬಂಧಿಸಲಾಗಿದೆ.

ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಮಂಗಳವಾರ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ‘ಶುಕ್ರವಾರ ಸಂಜೆ ಮಾನಸ ಗಂಗೋತ್ರಿ ಆವರಣದಲ್ಲಿ ವಾಕ್ ಮಾಡುತ್ತಿದ್ದ ಆರ್.ಎನ್.ಕುಲಕರ್ಣಿ ಅವರಿಗೆ ಉದ್ದೇಶಪೂರ್ವಕವಾಗಿ ಕಾರಿನಿಂದ ಡಿಕ್ಕಿ ಹೊಡೆಸಿ ಅಪಘಾತ ಮಾಡಲಾಗಿತ್ತು. ಇದರಿಂದ ತಲೆಗೆ ತೀವ್ರವಾಗಿ ಗಾಯಗೊಂಡು ಅವರು ಮೃತಪಟ್ಟಿದ್ದರು. ಈ ಸಂಬಂಧ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ ೩೦೨ ಅಡಿ ಪ್ರಕರಣ ದಾಖಲಾಗಿತ್ತು. ಸ್ಥಳ ಪರಿಶೀಲನೆ ಮತ್ತು ಸಿಸಿಟಿವಿ ದೃಶ್ಯಾವಳಿಗಳನ್ನು ವೀಕ್ಷಣೆ ಮಾಡಿದ ನಂತರ ಪ್ರಕರಣದ ತನಿಖೆಗೆ ಎಸಿಪಿ ಶಿವಶಂಕರ್ ಅವರ ನೇತೃತ್ವದಲ್ಲಿ 4 ತಂಡ ರಚಿಸಲಾಗಿತ್ತು’ ಎಂದರು.

‘ತನಿಖೆ ಕೈಗೊಂಡ ತಂಡಕ್ಕೆ ಮಾದಪ್ಪ ಅವರ ಕಿರಿಯ ಮಗ ಮನು ಮತ್ತು ಆತನ ಸ್ನೇಹಿತ ಸೇರಿಕೊಂಡು ಕೃತ್ಯ ಎಸಗಿರುವುದಾಗಿ ತಿಳಿದು ಬಂದ ಹಿನ್ನೆಲೆಯಲ್ಲಿ ಮನು ಅವರನ್ನು ಬಂಧಿಸಲಾಗಿದೆ. ಆತನ ಸ್ನೇಹಿತನಿಗಾಗಿ ಶೋಧ ನಡೆಯುತ್ತಿದೆ’ ಎಂದರು.
ಕಾರಣವೇನು ? : ‘ಆರ್.ಎನ್.ಕುಲಕರ್ಣಿ ಅವರ ಮನೆಯ ಪಕ್ಕದ ಜಾಗದಲ್ಲಿ ಮಾದಪ್ಪ ಅವರು ಮನೆಯನ್ನು ಕಟ್ಟಿದ್ದರು. ಮನೆಯನ್ನು ನಿರ್ಮಾಣ ಮಾಡುವ ಆರಂಭದಲ್ಲಿಯೇ ಮಾದಪ್ಪ ಕಾನೂನುಬಾಹಿರವಾಗಿ ಮನೆ ನಿರ್ಮಾಣ ಮಾಡುತ್ತಿದ್ದಾರೆ ಎಂದು ಕುಲಕರ್ಣಿ ಅವರು ಕಾನೂನು ಹೋರಾಟ ಆರಂಭಿಸಿದ್ದರು. ಈ ವಿಷಯವಾಗಿ ಇದ್ದ ವೈಮನಸ್ಸಿನಿಂದ  ಈ ಕೃತ್ಯ ಎಸಗಲಾಗಿದೆ ಎಂಬುದು ತಿಳಿದು ಬಂದಿದ್ದು, ಬೇರೆ ಕಾರಣಗಳೇನಾದರೂ ಇದೆಯೇ ಎಂಬ ಕುರಿತು ಇನ್ನು ಹೆಚ್ಚಿನ ತನಿಖೆ ಅಗತ್ಯವಿದೆ’ ಎಂದು ತಿಳಿಸಿದರು.

ಪ್ರಕರಣದ ಸವಾಲು : ‘ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಪಘಾತ ಮಾಡಿದೆ ಎನ್ನಲಾದ ನಂಬರ್ ಪ್ಲೇಟ್ ಇಲ್ಲದ ಕಾರನ್ನು ಪತ್ತೆ ಮಾಡುವುದು ಸವಾಲಾಗಿತ್ತು. ರಘು ಎಂಬವರು ಕಾರಿನ ಮಾಲೀಕರಾಗಿದ್ದು, ಅವರು ಈ ಕಾರನ್ನು ಮಾರಲು ಮುಂದಾಗಿದ್ದರು. ಇದನ್ನು ತಿಳಿದ ಮನು ಕಾರನ್ನು ಮಾರಾಟ ಮಾಡಿಕೊಡುವುದಾಗಿ ಪಡೆದುಕೊಂಡಿದ್ದರು ಎಂಬುದಾಗಿ ತನಿಖೆ ವೇಳೆ ತಿಳಿದು ಬಂದಿದೆ’ಎಂದು ಮಾಹಿತಿ ನೀಡಿದರು.

ಕೊಲೆಗೆ ಪ್ಲಾನ್ : ‘ಘಟನೆಯಾಗುವ ಕೆಲವು ದಿನಗಳ ಮುನ್ನ ಕುಲಕರ್ಣಿ ಅವರ ದೈನಂದಿನ ಚಟುವಟಿಕೆಯ ಬಗ್ಗೆ ವಾಚ್ ಮಾಡುವ ಕೆಲಸವನ್ನು ಆರೋಪಿಗಳು ಮಾಡಿದ್ದರು. ದಿನನಿತ್ಯ ಕುಲಕರ್ಣಿ ಅವರು ವಾಕ್ ಬರುವ ಜಾಗ ಮತ್ತು ಸಮಯವನ್ನು ತಿಳಿದುಕೊಂಡಿದ್ದರು. ಶುಕ್ರವಾರ ಸಂಜೆ ಅಪಘಾತ ಮಾಡಿದ ಕಾರಿನ ಡ್ರೈವರ್ ಸೀಟಿನಲ್ಲಿ ಮನು ಇದ್ದ. ಅವನ ಹೊರತಾಗಿ ಕಾರಿನಲ್ಲಿ ಬೇರೆ ಯಾರೂ ಇರಲಿಲ್ಲ. ಆತನ ಸ್ನೇಹಿತ ಬೈಕ್ ನಲ್ಲಿ ವಾಚ್ ಮಾಡುತ್ತಾ ಮಾಹಿತಿ ನೀಡುತ್ತಿದ್ದ ಎಂಬುದು ತನಿಖೆ ಮತ್ತು ಸಿಸಿ ಟಿವಿಯ ದೃಶ್ಯಾವಳಿಗಳಿಂದ ತಿಳಿದು ಬಂದಿದೆ’ ಎಂದು ವಿವರಿಸಿದರು.

ಎಸಿಪಿ ಶಿವಶಂಕರ್ ಅವರ ನೇತೃತ್ವದಲ್ಲಿ ನಾಲ್ಕು ತಂಡಗಳು ಕಾರ್ಯಾಚರಣೆ ನಡೆಸಿದ್ದು, ಇದಕ್ಕೆ ಸಿಸಿಬಿ ಮತ್ತು ತಾಂತ್ರಿಕ ವಿಭಾಗ ಸಹಕರಿಸಿದೆ ಎಂದರು. ಶೀಘ್ರ ಕಾರ್ಯಾಚರಣೆಯನ್ನು ಮೆಚ್ಚಿ ಎಸಿಪಿ ಶಿವಶಂಕರ್ ಅವರ ನೇತೃತ್ವದಲ್ಲಿ ತಂಡಕ್ಕೆ 50 ಸಾವಿರ ರೂ.ಬಹುಮಾನ ನೀಡಲಾಗಿದೆ.

ಸುದ್ದಿಗೋಷ್ಠಿ ಮುಗಿಯುತ್ತಿದ್ದಂತೆ ಸಿಕ್ಕ ಮತ್ತೊಬ್ಬ ಆರೋಪಿ
ಸುದ್ಧಿಗೋಷ್ಠಿ ನಡೆಸಿ ಮಾಹಿತಿ ನೀಡಿದ ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಆರೋಪಿ ಮನು ಎಂಬಾತನನ್ನು ಮಾತ್ರ ಬಂಧಿಸಲಾಗಿದ್ದು, ಆತನ ಸ್ನೇಹಿತನಿಗೆ ಶೋಧ ನಡೆಯುತ್ತಿದೆ ಎಂದು ಹೇಳಿದ್ದರು. ಆದರೆ, ಸುದ್ದಿಗೋಷ್ಠಿ ಮುಗಿದು ಆಯುಕ್ತರು ಹೋಗುತ್ತಿದ್ದಂತೆ ತನಿಖಾ ತಂಡ ಮತ್ತೊಬ್ಬ ಆರೋಪಿ ವರುಣ್ ಎಂಬಾತನನ್ನು ಬಂಧಿಸಿದೆ ಎಂಬ ಮಾಹಿತಿ ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.

andolana

Recent Posts

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

5 mins ago

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

2 hours ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

3 hours ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

4 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

4 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

4 hours ago