ಮೈಸೂರು

ಮಾಜಿ ಐಬಿ ಅಧಿಕಾರಿ ಕುಲಕರ್ಣಿ ನಿಧನ: ಇಬ್ಬರ ಬಂಧನ

ಅಕ್ರಮ ಮನೆ ನಿರ್ಮಾಣ ಪ್ರಶ್ನಿಸಿದ್ದೇ ನಿವೃತ್ತ ಐಬಿ ಅಧಿಕಾರಿಯ ಕೊಲೆಗೆ ಕಾರಣವಾಯಿತು.

ಮೈಸೂರು : ಮಾನಸಗಂಗೋತ್ರಿ ಕ್ಯಾಂಪಸ್ ನಲ್ಲಿ ಮೃತಪಟ್ಟ ಕೇಂದ್ರ ಗುಪ್ತಚರ ದಳದ ನಿವೃತ್ತ ಅಧಿಕಾರಿ ಆರ್. ಬಿ. ಕುಲಕರ್ಣಿ ಅವರ ಕೊಲೆ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಮೈಸೂರು ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಮೈಸೂರಿನ ಟಿ.ಕೆ.ಲೇಔಟ್  ನಿವಾಸಿಯಾಗಿದ್ದ 83 ವರ್ಷದ ಆರ್.ಎನ್.ಕುಲಕರ್ಣಿ ಅವರ ಕೊಲೆ ಸಂಬಂಧ ಅವರ ನೆರೆಮನೆ ನಿವಾಸಿ ಮಾದಪ್ಪ ಅವರ ಕಿರಿಯ ಮಗ ಮನು (30) ಮತ್ತು ಆತನ ಸ್ನೇಹಿತ ವರುಣ್ (30) ಎಂಬಾತನನ್ನು ಬಂಧಿಸಲಾಗಿದೆ.

ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಮಂಗಳವಾರ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ‘ಶುಕ್ರವಾರ ಸಂಜೆ ಮಾನಸ ಗಂಗೋತ್ರಿ ಆವರಣದಲ್ಲಿ ವಾಕ್ ಮಾಡುತ್ತಿದ್ದ ಆರ್.ಎನ್.ಕುಲಕರ್ಣಿ ಅವರಿಗೆ ಉದ್ದೇಶಪೂರ್ವಕವಾಗಿ ಕಾರಿನಿಂದ ಡಿಕ್ಕಿ ಹೊಡೆಸಿ ಅಪಘಾತ ಮಾಡಲಾಗಿತ್ತು. ಇದರಿಂದ ತಲೆಗೆ ತೀವ್ರವಾಗಿ ಗಾಯಗೊಂಡು ಅವರು ಮೃತಪಟ್ಟಿದ್ದರು. ಈ ಸಂಬಂಧ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ ೩೦೨ ಅಡಿ ಪ್ರಕರಣ ದಾಖಲಾಗಿತ್ತು. ಸ್ಥಳ ಪರಿಶೀಲನೆ ಮತ್ತು ಸಿಸಿಟಿವಿ ದೃಶ್ಯಾವಳಿಗಳನ್ನು ವೀಕ್ಷಣೆ ಮಾಡಿದ ನಂತರ ಪ್ರಕರಣದ ತನಿಖೆಗೆ ಎಸಿಪಿ ಶಿವಶಂಕರ್ ಅವರ ನೇತೃತ್ವದಲ್ಲಿ 4 ತಂಡ ರಚಿಸಲಾಗಿತ್ತು’ ಎಂದರು.

‘ತನಿಖೆ ಕೈಗೊಂಡ ತಂಡಕ್ಕೆ ಮಾದಪ್ಪ ಅವರ ಕಿರಿಯ ಮಗ ಮನು ಮತ್ತು ಆತನ ಸ್ನೇಹಿತ ಸೇರಿಕೊಂಡು ಕೃತ್ಯ ಎಸಗಿರುವುದಾಗಿ ತಿಳಿದು ಬಂದ ಹಿನ್ನೆಲೆಯಲ್ಲಿ ಮನು ಅವರನ್ನು ಬಂಧಿಸಲಾಗಿದೆ. ಆತನ ಸ್ನೇಹಿತನಿಗಾಗಿ ಶೋಧ ನಡೆಯುತ್ತಿದೆ’ ಎಂದರು.
ಕಾರಣವೇನು ? : ‘ಆರ್.ಎನ್.ಕುಲಕರ್ಣಿ ಅವರ ಮನೆಯ ಪಕ್ಕದ ಜಾಗದಲ್ಲಿ ಮಾದಪ್ಪ ಅವರು ಮನೆಯನ್ನು ಕಟ್ಟಿದ್ದರು. ಮನೆಯನ್ನು ನಿರ್ಮಾಣ ಮಾಡುವ ಆರಂಭದಲ್ಲಿಯೇ ಮಾದಪ್ಪ ಕಾನೂನುಬಾಹಿರವಾಗಿ ಮನೆ ನಿರ್ಮಾಣ ಮಾಡುತ್ತಿದ್ದಾರೆ ಎಂದು ಕುಲಕರ್ಣಿ ಅವರು ಕಾನೂನು ಹೋರಾಟ ಆರಂಭಿಸಿದ್ದರು. ಈ ವಿಷಯವಾಗಿ ಇದ್ದ ವೈಮನಸ್ಸಿನಿಂದ  ಈ ಕೃತ್ಯ ಎಸಗಲಾಗಿದೆ ಎಂಬುದು ತಿಳಿದು ಬಂದಿದ್ದು, ಬೇರೆ ಕಾರಣಗಳೇನಾದರೂ ಇದೆಯೇ ಎಂಬ ಕುರಿತು ಇನ್ನು ಹೆಚ್ಚಿನ ತನಿಖೆ ಅಗತ್ಯವಿದೆ’ ಎಂದು ತಿಳಿಸಿದರು.

ಪ್ರಕರಣದ ಸವಾಲು : ‘ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಪಘಾತ ಮಾಡಿದೆ ಎನ್ನಲಾದ ನಂಬರ್ ಪ್ಲೇಟ್ ಇಲ್ಲದ ಕಾರನ್ನು ಪತ್ತೆ ಮಾಡುವುದು ಸವಾಲಾಗಿತ್ತು. ರಘು ಎಂಬವರು ಕಾರಿನ ಮಾಲೀಕರಾಗಿದ್ದು, ಅವರು ಈ ಕಾರನ್ನು ಮಾರಲು ಮುಂದಾಗಿದ್ದರು. ಇದನ್ನು ತಿಳಿದ ಮನು ಕಾರನ್ನು ಮಾರಾಟ ಮಾಡಿಕೊಡುವುದಾಗಿ ಪಡೆದುಕೊಂಡಿದ್ದರು ಎಂಬುದಾಗಿ ತನಿಖೆ ವೇಳೆ ತಿಳಿದು ಬಂದಿದೆ’ಎಂದು ಮಾಹಿತಿ ನೀಡಿದರು.

ಕೊಲೆಗೆ ಪ್ಲಾನ್ : ‘ಘಟನೆಯಾಗುವ ಕೆಲವು ದಿನಗಳ ಮುನ್ನ ಕುಲಕರ್ಣಿ ಅವರ ದೈನಂದಿನ ಚಟುವಟಿಕೆಯ ಬಗ್ಗೆ ವಾಚ್ ಮಾಡುವ ಕೆಲಸವನ್ನು ಆರೋಪಿಗಳು ಮಾಡಿದ್ದರು. ದಿನನಿತ್ಯ ಕುಲಕರ್ಣಿ ಅವರು ವಾಕ್ ಬರುವ ಜಾಗ ಮತ್ತು ಸಮಯವನ್ನು ತಿಳಿದುಕೊಂಡಿದ್ದರು. ಶುಕ್ರವಾರ ಸಂಜೆ ಅಪಘಾತ ಮಾಡಿದ ಕಾರಿನ ಡ್ರೈವರ್ ಸೀಟಿನಲ್ಲಿ ಮನು ಇದ್ದ. ಅವನ ಹೊರತಾಗಿ ಕಾರಿನಲ್ಲಿ ಬೇರೆ ಯಾರೂ ಇರಲಿಲ್ಲ. ಆತನ ಸ್ನೇಹಿತ ಬೈಕ್ ನಲ್ಲಿ ವಾಚ್ ಮಾಡುತ್ತಾ ಮಾಹಿತಿ ನೀಡುತ್ತಿದ್ದ ಎಂಬುದು ತನಿಖೆ ಮತ್ತು ಸಿಸಿ ಟಿವಿಯ ದೃಶ್ಯಾವಳಿಗಳಿಂದ ತಿಳಿದು ಬಂದಿದೆ’ ಎಂದು ವಿವರಿಸಿದರು.

ಎಸಿಪಿ ಶಿವಶಂಕರ್ ಅವರ ನೇತೃತ್ವದಲ್ಲಿ ನಾಲ್ಕು ತಂಡಗಳು ಕಾರ್ಯಾಚರಣೆ ನಡೆಸಿದ್ದು, ಇದಕ್ಕೆ ಸಿಸಿಬಿ ಮತ್ತು ತಾಂತ್ರಿಕ ವಿಭಾಗ ಸಹಕರಿಸಿದೆ ಎಂದರು. ಶೀಘ್ರ ಕಾರ್ಯಾಚರಣೆಯನ್ನು ಮೆಚ್ಚಿ ಎಸಿಪಿ ಶಿವಶಂಕರ್ ಅವರ ನೇತೃತ್ವದಲ್ಲಿ ತಂಡಕ್ಕೆ 50 ಸಾವಿರ ರೂ.ಬಹುಮಾನ ನೀಡಲಾಗಿದೆ.

ಸುದ್ದಿಗೋಷ್ಠಿ ಮುಗಿಯುತ್ತಿದ್ದಂತೆ ಸಿಕ್ಕ ಮತ್ತೊಬ್ಬ ಆರೋಪಿ
ಸುದ್ಧಿಗೋಷ್ಠಿ ನಡೆಸಿ ಮಾಹಿತಿ ನೀಡಿದ ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಆರೋಪಿ ಮನು ಎಂಬಾತನನ್ನು ಮಾತ್ರ ಬಂಧಿಸಲಾಗಿದ್ದು, ಆತನ ಸ್ನೇಹಿತನಿಗೆ ಶೋಧ ನಡೆಯುತ್ತಿದೆ ಎಂದು ಹೇಳಿದ್ದರು. ಆದರೆ, ಸುದ್ದಿಗೋಷ್ಠಿ ಮುಗಿದು ಆಯುಕ್ತರು ಹೋಗುತ್ತಿದ್ದಂತೆ ತನಿಖಾ ತಂಡ ಮತ್ತೊಬ್ಬ ಆರೋಪಿ ವರುಣ್ ಎಂಬಾತನನ್ನು ಬಂಧಿಸಿದೆ ಎಂಬ ಮಾಹಿತಿ ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.

andolana

Recent Posts

ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ಗ್ಯಾರಂಟಿ ಕೊಡುತ್ತೇವೆ: ಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ…

24 mins ago

ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಕ್ಬಾಲ್‌ ಹುಸೇನ್‌ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ…

2 hours ago

ಹಿರಿಯ ಸಾಹಿತಿ ಪಿ.ಲಂಕೇಶ್‌ ಪತ್ನಿ ಇಂದಿರಾ ಲಂಕೇಶ್‌ ನಿಧನ

ಬೆಂಗಳೂರು: ಲಂಕೇಶ್‌ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್‌ ಅವರ ಪತ್ನಿ ಇಂದಿರಾ ಲಂಕೇಶ್‌ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…

3 hours ago

ಮಹಾರಾಷ್ಟ್ರ| ತೆರೆದ ಬಾವಿಗೆ ಬಿದ್ದ ಪಿಕ್‌ಅಪ್‌ ವಾಹನ: 8 ಮಂದಿ ದುರ್ಮರಣ

ಮುಂಬೈ: ಪಿಕ್‌ ಅಪ್‌ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…

3 hours ago

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

8 hours ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

8 hours ago