ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್ ಕುಮಾರ್ ಅವರನ್ನು ಲೋಕಾಯುಕ್ತ ಪೊಲೀಸರ ಕಸ್ಟಡಿಗೆ ನೀಡಲು ಕೋರ್ಟ್ ಮಂಗಳವಾರ ಆದೇಶಿಸಿದೆ.
ಈ ಸಂಬಂಧ ಮೈಸೂರು ಲೋಕಾಯುಕ್ತ ಪೊಲೀಸರು, ಬೆಂಗಳೂರಿನಲ್ಲಿರುವ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಮುಡಾ ಹಗರಣದ ಹೆಚ್ಚಿನ ವಿಚಾರಣೆಗೆ ಮಾಜಿ ಆಯುಕ್ತ, ಹಾಲಿ ಜೈಲು ಶಿಕ್ಷೆಗೆ ಒಳಪಟ್ಟಿರುವ ದಿನೇಶ್ ಕುಮಾರ್ ಅವರನ್ನು ಕಸ್ಟಡಿಗೆ ನೀಡುವಂತೆ ರಿಟ್ ಅರ್ಜಿ ಸಲ್ಲಿಸಿ ಕೋರಲಾಗಿತ್ತು.
ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳು, ಮೈಸೂರು ಲೋಕಾಯುಕ್ತ ಪೊಲೀಸರ ಅರ್ಜಿ ಪುರಸ್ಕರಿಸಿ ಡಿ.12 ರಂದು ಕಸ್ಟಡಿಗೆ ನೀಡುವಂತೆ ಆದೇಶಿಸಿತು.




