ಮೈಸೂರು

ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಲೋಕಾ ಪೊಲೀಸ್‌ ಕಸ್ಟಡಿಗೆ : ಕೋರ್ಟ್‌ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಅವರನ್ನು ಲೋಕಾಯುಕ್ತ ಪೊಲೀಸರ ಕಸ್ಟಡಿಗೆ ನೀಡಲು ಕೋರ್ಟ್‌ ಮಂಗಳವಾರ ಆದೇಶಿಸಿದೆ.

ಈ ಸಂಬಂಧ ಮೈಸೂರು ಲೋಕಾಯುಕ್ತ ಪೊಲೀಸರು, ಬೆಂಗಳೂರಿನಲ್ಲಿರುವ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಮುಡಾ ಹಗರಣದ ಹೆಚ್ಚಿನ ವಿಚಾರಣೆಗೆ ಮಾಜಿ ಆಯುಕ್ತ, ಹಾಲಿ ಜೈಲು ಶಿಕ್ಷೆಗೆ ಒಳಪಟ್ಟಿರುವ ದಿನೇಶ್‌ ಕುಮಾರ್‌ ಅವರನ್ನು ಕಸ್ಟಡಿಗೆ ನೀಡುವಂತೆ ರಿಟ್‌ ಅರ್ಜಿ ಸಲ್ಲಿಸಿ ಕೋರಲಾಗಿತ್ತು.

ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳು, ಮೈಸೂರು ಲೋಕಾಯುಕ್ತ ಪೊಲೀಸರ ಅರ್ಜಿ ಪುರಸ್ಕರಿಸಿ ಡಿ.12 ರಂದು ಕಸ್ಟಡಿಗೆ ನೀಡುವಂತೆ ಆದೇಶಿಸಿತು.

ಆಂದೋಲನ ಡೆಸ್ಕ್

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಇಚ್ಛಾಶಕ್ತಿ ಇದ್ದರೆ , ಕನ್ನಡ ಚಿತ್ರೋದ್ಯಮದ ಕಾಯಕಲ್ಪಕ್ಕಿದು ಸಕಾಲ

ಚಿತ್ರೋದ್ಯಮಿಗಳೂ ಆಗಿರುವ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರನ್ನು ಮೊನ್ನೆ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ಮತ್ತು ಮಾಜಿ ಅಧ್ಯಕ್ಷರ…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 3 , ಶುಕ್ರವಾರ

5 hours ago

ನಂಜನಗೂಡು | ಲೋಕಾ ಬಲೆಗೆ ಬಿದ್ದ ಸರ್ವೆಯರ್‌

ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…

19 hours ago

ಅನೈತಿಕ ಸಂಬಂಧದ ಶಂಕೆ : ರಾಡ್‌ನಿಂದ ಹೊಡೆದು ಪತ್ನಿ ಕೊಂದ ಪತಿ

ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…

20 hours ago

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

1 day ago

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

1 day ago