ಮೈಸೂರು : OTS ಸಾಲ ತಿರುವಳಿ ಮೇಳ ನಡೆಸುವಂತೆ ಒತ್ತಾಯಿಸಿ ರಾಜ್ಯ ಕಬ್ಬು ಬೆಳೆಗಾರ ಸಂಘದ ಮೈಸೂರು ಜಿಲ್ಲಾ ಘಟಕದಿಂದ ಕರ್ನಾಟಕ ಗ್ರಾಮೀಣ ಬ್ಯಾಂಕ್ ಮೈಸೂರಿನ ಪ್ರಾದೇಶಿಕ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.
ಎಲ್ಲಾ ಬ್ಯಾಂಕುಗಳು ರೈತರ ಕೃಷಿ ಸಾಲ OTS ಮೂಲಕ ತಿರುವಳಿ ಮಾಡುತ್ತಿದ್ದರು ಕಾವೇರಿ ಗ್ರಾಮೀಣ ಬ್ಯಾಂಕ್ ಮಾತ್ರ ಸರ್ಕಾರದ ಆದೇಶ ಉಲ್ಲಂಘಿಸಿ OTS ಸಾಲ ತಿರುವಳಿ ಮೇಳ ಮಾಡುತ್ತಿಲ್ಲ ಎಂದು ಆಕ್ರೋಶಗೊಂಡ ರೈತರು, ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.
ಬಳಿಕ ಪ್ರತಿಭಟನಾಕಾರರು ಮಾತನಾಡಿ, ಬರಗಾಲದ ಆರ್ಥಿಕ ಸಂಕಷ್ಟದಲ್ಲಿರುವ ರೈತರಿಗೆ ಕೃಷಿ ಸಾಲ ಮಾಡಿ ತೀರಿಸಲು ಸಾಧ್ಯವಾಗದೆ ಇರುವುದರಿಂದ ಮತ್ತೆ ಕೃಷಿ ಚಟುವಟಿಕೆ ನಡೆಸಲು ಅನುಕೂಲ ಆಗುವಂತೆ ರಾಜ್ಯ ಮಾರ್ಗದರ್ಶಿ ಬ್ಯಾಂಕ್ ಆದೇಶ ಹೊರಡಿಸಿತ್ತು. ಹೀಗಾಗಿ ಬ್ಯಾಂಕ್ ಶಾಖೆಗಳಲ್ಲಿ OTS ಸಾಲ ತಿರುವಳಿ ಮೇಳ ಹೆಚ್ಚು ಪ್ರಚಾರ ನೀಡಿ ನಡೆಸುವಂತೆ ಹಾಗೂ ಇದರ ಸದುಪಯೋಗ ರೈತರು ಪಡೆದುಕೊಳ್ಳುವಂತೆ ನಾಮಫಲಕ ಅನಾವರಣ ಮಾಡಿ ರೈತರಿಗೆ ಜಾಗೃತಿ ಮೂಡಿಸಿ ನೆರವಾಗಬೇಕು. ಆದರೆ ಬ್ಯಾಂಕ್ ಶಾಖೆ ಗಳಲ್ಲಿ ಪ್ರಚಾರ ಮಾಡದೆ ಇರುವುದು ಮುಗ್ಧ ರೈತರು ಈ ಅವಕಾಶದಿಂದ ವಂಚಿತರಾಗಿದ್ದಾರೆ, ಕಳೆದ ಎರಡು ತಿಂಗಳ ಹಿಂದೆ ಬ್ಯಾಂಕ್ ನ ಕೇಂದ್ರ ಕಚೇರಿ ಬಳ್ಳಾರಿಯಲ್ಲಿ ಹೋರಾಟ ನಡೆಸಿದ ಪರಿಣಾಮ ಈ ಆದೇಶ ಹೊರಡಿಸಲಾಗಿದೆ ಆದರೆ ಕೆಲವು ಶಾಖೆಗಳು ಇದನ್ನು ಮರೆಮಾಚಿ ರೈತರಿಗೆ ವಂಚನೆ ಮಾಡುತ್ತಿವೆ. ಹೀಗಾಗಿ ರೈತರಿಗೆ ವಂಚನೆ ಮಾಡದೆ ಅನುಕೂಲ ಮಾಡಿ ಕೊಡಬೇಕೆಂದು ಹಾಗೂ ಒ ಟಿ ಎಸ್ ಮಾಡಿದ ರೈತರಿಗೆ ಮತ್ತೆ ಸಾಲ ಕೊಡಬೇಕು ಎಂದು ಒತ್ತಾಯಿಸಿದರು.
ಬ್ಯಾಂಕ್ ಮುಖ್ಯ ವ್ಯವಸ್ಥಾಪಕ ಯಾದವ ಮೂರ್ತಿ ಹಾಗೂ ಸೀನಿಯರ್ ಮ್ಯಾನೇಜರ್ ಬಾನು ಪ್ರಕಾಶ್ ಪ್ರತಿಭಟನಾ ನಿರತ ರೈತರ ಮನವಲಿಸಿ ಬ್ಯಾಂಕ್ ಗಳಲ್ಲಿ ನಾಮಫಲಕ ಅನಾವರಣ ಮಾಡಿಸಿ ರೈತರಿಗೆ ಜಾಗೃತಿ ಮೂಡಿಸಲು ಸೂಚನೆ ನೀಡುತ್ತೇವೆ ಎಂದು ಭರವಸೆ ನೀಡಿದ ನಂತರ ರೈತರು ತಮ್ಮ ಪ್ರತಿಭಟನೆ ಕೈ ಬಿಟ್ಟರು.
ಕೊಪ್ಪಳ: ಯಾವುದೇ ಕ್ಷಣದಲ್ಲಿ ರಾಜ್ಯದಲ್ಲಿ ಅಧಿಕೃ ಹಸ್ತಾಂತರವಾಗಬಹುದು ಎಂದು ಶಾಸಕ ಜನಾರ್ಧನ ರೆಡ್ಡಿ ಭವಿಷ್ಯ ನುಡಿದಿದ್ದಾರೆ. ಈ ಕುರಿತು ಕೊಪ್ಪಳದಲ್ಲಿ…
ಕಲಬುರ್ಗಿ: ರಾಜ್ಯದಲ್ಲಿ ನಾಯಕತ್ವ ಗೊಂದಲವನ್ನು ಹೈಕಮಾಂಡ್ ಸೃಷ್ಟಿ ಮಾಡಿಲ್ಲ. ಲೋಕಲ್ನವರೇ ಮಾಡಿಕೊಂಡಿದ್ದಾರೆ. ಸ್ಥಳೀಯ ನಾಯಕರೇ ಇದನ್ನು ಬಗೆಹರಿಸಿಕೊಳ್ಳಬೇಕು. ಎಲ್ಲದಕ್ಕೂ ಹೈಕಮಾಂಡ್…
ಬೆಂಗಳೂರು: ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ.ನಗದು ಬಹುಮಾನ ಘೋಷಿಸಲಾಗಿದ್ದು, ಕರ್ನಾಟಕದ ಕ್ರೀಡಾಪಟುಗಳು ಚಿನ್ನದ ಪದಕ…
ಮಂಡ್ಯ: ಯಾರು ಇಲ್ಲದ ವೇಳೆ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ದುಷ್ಕರ್ಮಿಗಳ ಅಮಾನವೀಯ ಕೃತ್ಯ ಪಾಂಡವಪುರ ತಾಲ್ಲೂಕಿನ ಚಿಕ್ಕಕೊಪ್ಪಲು…
ಬೆಂಗಳೂರು: ರಾಜ್ಯದ ಪ್ರತಿ ಯಜಮಾನಿಯರಿಗೆ ಹೊಸ ವರ್ಷಕ್ಕೂ ಮುನ್ನವೇ ರಾಜ್ಯ ಸರ್ಕಾರ ಗುಡ್ನ್ಯೂಸ್ ಕೊಟ್ಟಿದೆ. ಸೋಮವಾರದಿಂದಲೇ ಪ್ರತಿ ಮನೆ ಗೃಹಲಕ್ಷ್ಮೀಯರ…
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹುಲಿ ದಾಳಿ ಪ್ರಕರಣಗಳು ಹೆಚ್ಚುತ್ತಿದ್ದು, ಹುಲಿ ಕಾರ್ಯಾಚರಣೆಗೆ ಅರಣ್ಯ ಇಲಾಖೆ ವಿಶೇಷ ಕಾರ್ಯಾಚರಣೆ ಆರಂಭಿಸಿದೆ.…