ಮೈಸೂರು

ರೈತರ OTS ಸಾಲ ತಿರುವಳಿ ಮೇಳ ನಡೆಸುವಂತೆ ಒತ್ತಾಯಿಸಿ ಅನ್ನದಾತರಿಂದ ಪ್ರತಿಭಟನೆ

ಮೈಸೂರು : OTS ಸಾಲ ತಿರುವಳಿ ಮೇಳ ನಡೆಸುವಂತೆ ಒತ್ತಾಯಿಸಿ ರಾಜ್ಯ ಕಬ್ಬು ಬೆಳೆಗಾರ ಸಂಘದ ಮೈಸೂರು ಜಿಲ್ಲಾ ಘಟಕದಿಂದ ಕರ್ನಾಟಕ ಗ್ರಾಮೀಣ ಬ್ಯಾಂಕ್ ಮೈಸೂರಿನ ಪ್ರಾದೇಶಿಕ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.

ಎಲ್ಲಾ ಬ್ಯಾಂಕುಗಳು ರೈತರ ಕೃಷಿ ಸಾಲ OTS ಮೂಲಕ ತಿರುವಳಿ ಮಾಡುತ್ತಿದ್ದರು ಕಾವೇರಿ ಗ್ರಾಮೀಣ ಬ್ಯಾಂಕ್ ಮಾತ್ರ ಸರ್ಕಾರದ ಆದೇಶ ಉಲ್ಲಂಘಿಸಿ OTS ಸಾಲ ತಿರುವಳಿ ಮೇಳ ಮಾಡುತ್ತಿಲ್ಲ ಎಂದು ಆಕ್ರೋಶಗೊಂಡ ರೈತರು, ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.

ಬಳಿಕ ಪ್ರತಿಭಟನಾಕಾರರು ಮಾತನಾಡಿ, ಬರಗಾಲದ ಆರ್ಥಿಕ ಸಂಕಷ್ಟದಲ್ಲಿರುವ ರೈತರಿಗೆ ಕೃಷಿ ಸಾಲ ಮಾಡಿ ತೀರಿಸಲು ಸಾಧ್ಯವಾಗದೆ ಇರುವುದರಿಂದ ಮತ್ತೆ ಕೃಷಿ ಚಟುವಟಿಕೆ ನಡೆಸಲು ಅನುಕೂಲ ಆಗುವಂತೆ ರಾಜ್ಯ ಮಾರ್ಗದರ್ಶಿ ಬ್ಯಾಂಕ್ ಆದೇಶ ಹೊರಡಿಸಿತ್ತು. ಹೀಗಾಗಿ ಬ್ಯಾಂಕ್ ಶಾಖೆಗಳಲ್ಲಿ OTS  ಸಾಲ ತಿರುವಳಿ ಮೇಳ ಹೆಚ್ಚು ಪ್ರಚಾರ ನೀಡಿ ನಡೆಸುವಂತೆ ಹಾಗೂ ಇದರ ಸದುಪಯೋಗ ರೈತರು ಪಡೆದುಕೊಳ್ಳುವಂತೆ ನಾಮಫಲಕ ಅನಾವರಣ ಮಾಡಿ ರೈತರಿಗೆ ಜಾಗೃತಿ ಮೂಡಿಸಿ ನೆರವಾಗಬೇಕು. ಆದರೆ  ಬ್ಯಾಂಕ್ ಶಾಖೆ ಗಳಲ್ಲಿ ಪ್ರಚಾರ ಮಾಡದೆ ಇರುವುದು ಮುಗ್ಧ ರೈತರು ಈ ಅವಕಾಶದಿಂದ ವಂಚಿತರಾಗಿದ್ದಾರೆ, ಕಳೆದ ಎರಡು ತಿಂಗಳ ಹಿಂದೆ ಬ್ಯಾಂಕ್ ನ ಕೇಂದ್ರ ಕಚೇರಿ ಬಳ್ಳಾರಿಯಲ್ಲಿ ಹೋರಾಟ ನಡೆಸಿದ ಪರಿಣಾಮ ಈ ಆದೇಶ  ಹೊರಡಿಸಲಾಗಿದೆ ಆದರೆ ಕೆಲವು ಶಾಖೆಗಳು ಇದನ್ನು ಮರೆಮಾಚಿ ರೈತರಿಗೆ ವಂಚನೆ ಮಾಡುತ್ತಿವೆ. ಹೀಗಾಗಿ ರೈತರಿಗೆ ವಂಚನೆ ಮಾಡದೆ ಅನುಕೂಲ ಮಾಡಿ ಕೊಡಬೇಕೆಂದು ಹಾಗೂ ಒ ಟಿ ಎಸ್ ಮಾಡಿದ ರೈತರಿಗೆ ಮತ್ತೆ ಸಾಲ ಕೊಡಬೇಕು ಎಂದು ಒತ್ತಾಯಿಸಿದರು.

ಬ್ಯಾಂಕ್ ಮುಖ್ಯ ವ್ಯವಸ್ಥಾಪಕ ಯಾದವ ಮೂರ್ತಿ ಹಾಗೂ ಸೀನಿಯರ್ ಮ್ಯಾನೇಜರ್ ಬಾನು ಪ್ರಕಾಶ್ ಪ್ರತಿಭಟನಾ ನಿರತ ರೈತರ ಮನವಲಿಸಿ ಬ್ಯಾಂಕ್ ಗಳಲ್ಲಿ ನಾಮಫಲಕ ಅನಾವರಣ ಮಾಡಿಸಿ ರೈತರಿಗೆ ಜಾಗೃತಿ ಮೂಡಿಸಲು ಸೂಚನೆ  ನೀಡುತ್ತೇವೆ ಎಂದು ಭರವಸೆ ನೀಡಿದ ನಂತರ ರೈತರು ತಮ್ಮ ಪ್ರತಿಭಟನೆ ಕೈ ಬಿಟ್ಟರು.

 

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ರೈಲ್ವೆ ಮೇಲ್ಸೇತುವೆ; ಭೂ ದರ ಕಗ್ಗಂಟು ಬಗೆಹರಿಯುವುದೇ?

ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…

21 mins ago

ಜನವರಿಗೆ ಚಾ.ಬೆಟ್ಟದ ಅಭಿವೃದ್ಧಿ ಕಾಮಗಾರಿ ಶುರು

ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…

27 mins ago

ಕೋಳಿ ಮೊಟ್ಟೆಗೆ ಬರ: ಏರಿದ ದರ

ಗಿರೀಶ್ ಹುಣಸೂರು ಬಿಡಿ ಮೊಟ್ಟೆಗೆ ೭.೫೦ ರೂ.; ರಫ್ತು ಹೆಚ್ಚಳದಿಂದ ಭಾರೀ ಹೊಡೆತ  ಮೈಸೂರು: ಮಾಗಿ ಚಳಿಗಾಲ ಆರಂಭ, ಚಂಡಮಾರುತದಿಂದ ಹವಾಮಾನ…

36 mins ago

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

10 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

10 hours ago