ಮೈಸೂರು

ರೈತರ OTS ಸಾಲ ತಿರುವಳಿ ಮೇಳ ನಡೆಸುವಂತೆ ಒತ್ತಾಯಿಸಿ ಅನ್ನದಾತರಿಂದ ಪ್ರತಿಭಟನೆ

ಮೈಸೂರು : OTS ಸಾಲ ತಿರುವಳಿ ಮೇಳ ನಡೆಸುವಂತೆ ಒತ್ತಾಯಿಸಿ ರಾಜ್ಯ ಕಬ್ಬು ಬೆಳೆಗಾರ ಸಂಘದ ಮೈಸೂರು ಜಿಲ್ಲಾ ಘಟಕದಿಂದ ಕರ್ನಾಟಕ ಗ್ರಾಮೀಣ ಬ್ಯಾಂಕ್ ಮೈಸೂರಿನ ಪ್ರಾದೇಶಿಕ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.

ಎಲ್ಲಾ ಬ್ಯಾಂಕುಗಳು ರೈತರ ಕೃಷಿ ಸಾಲ OTS ಮೂಲಕ ತಿರುವಳಿ ಮಾಡುತ್ತಿದ್ದರು ಕಾವೇರಿ ಗ್ರಾಮೀಣ ಬ್ಯಾಂಕ್ ಮಾತ್ರ ಸರ್ಕಾರದ ಆದೇಶ ಉಲ್ಲಂಘಿಸಿ OTS ಸಾಲ ತಿರುವಳಿ ಮೇಳ ಮಾಡುತ್ತಿಲ್ಲ ಎಂದು ಆಕ್ರೋಶಗೊಂಡ ರೈತರು, ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.

ಬಳಿಕ ಪ್ರತಿಭಟನಾಕಾರರು ಮಾತನಾಡಿ, ಬರಗಾಲದ ಆರ್ಥಿಕ ಸಂಕಷ್ಟದಲ್ಲಿರುವ ರೈತರಿಗೆ ಕೃಷಿ ಸಾಲ ಮಾಡಿ ತೀರಿಸಲು ಸಾಧ್ಯವಾಗದೆ ಇರುವುದರಿಂದ ಮತ್ತೆ ಕೃಷಿ ಚಟುವಟಿಕೆ ನಡೆಸಲು ಅನುಕೂಲ ಆಗುವಂತೆ ರಾಜ್ಯ ಮಾರ್ಗದರ್ಶಿ ಬ್ಯಾಂಕ್ ಆದೇಶ ಹೊರಡಿಸಿತ್ತು. ಹೀಗಾಗಿ ಬ್ಯಾಂಕ್ ಶಾಖೆಗಳಲ್ಲಿ OTS  ಸಾಲ ತಿರುವಳಿ ಮೇಳ ಹೆಚ್ಚು ಪ್ರಚಾರ ನೀಡಿ ನಡೆಸುವಂತೆ ಹಾಗೂ ಇದರ ಸದುಪಯೋಗ ರೈತರು ಪಡೆದುಕೊಳ್ಳುವಂತೆ ನಾಮಫಲಕ ಅನಾವರಣ ಮಾಡಿ ರೈತರಿಗೆ ಜಾಗೃತಿ ಮೂಡಿಸಿ ನೆರವಾಗಬೇಕು. ಆದರೆ  ಬ್ಯಾಂಕ್ ಶಾಖೆ ಗಳಲ್ಲಿ ಪ್ರಚಾರ ಮಾಡದೆ ಇರುವುದು ಮುಗ್ಧ ರೈತರು ಈ ಅವಕಾಶದಿಂದ ವಂಚಿತರಾಗಿದ್ದಾರೆ, ಕಳೆದ ಎರಡು ತಿಂಗಳ ಹಿಂದೆ ಬ್ಯಾಂಕ್ ನ ಕೇಂದ್ರ ಕಚೇರಿ ಬಳ್ಳಾರಿಯಲ್ಲಿ ಹೋರಾಟ ನಡೆಸಿದ ಪರಿಣಾಮ ಈ ಆದೇಶ  ಹೊರಡಿಸಲಾಗಿದೆ ಆದರೆ ಕೆಲವು ಶಾಖೆಗಳು ಇದನ್ನು ಮರೆಮಾಚಿ ರೈತರಿಗೆ ವಂಚನೆ ಮಾಡುತ್ತಿವೆ. ಹೀಗಾಗಿ ರೈತರಿಗೆ ವಂಚನೆ ಮಾಡದೆ ಅನುಕೂಲ ಮಾಡಿ ಕೊಡಬೇಕೆಂದು ಹಾಗೂ ಒ ಟಿ ಎಸ್ ಮಾಡಿದ ರೈತರಿಗೆ ಮತ್ತೆ ಸಾಲ ಕೊಡಬೇಕು ಎಂದು ಒತ್ತಾಯಿಸಿದರು.

ಬ್ಯಾಂಕ್ ಮುಖ್ಯ ವ್ಯವಸ್ಥಾಪಕ ಯಾದವ ಮೂರ್ತಿ ಹಾಗೂ ಸೀನಿಯರ್ ಮ್ಯಾನೇಜರ್ ಬಾನು ಪ್ರಕಾಶ್ ಪ್ರತಿಭಟನಾ ನಿರತ ರೈತರ ಮನವಲಿಸಿ ಬ್ಯಾಂಕ್ ಗಳಲ್ಲಿ ನಾಮಫಲಕ ಅನಾವರಣ ಮಾಡಿಸಿ ರೈತರಿಗೆ ಜಾಗೃತಿ ಮೂಡಿಸಲು ಸೂಚನೆ  ನೀಡುತ್ತೇವೆ ಎಂದು ಭರವಸೆ ನೀಡಿದ ನಂತರ ರೈತರು ತಮ್ಮ ಪ್ರತಿಭಟನೆ ಕೈ ಬಿಟ್ಟರು.

 

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಮಡಿಕೇರಿ: ವಿದ್ಯುತ್ ತಂತಿ ಮೇಲೆ ಮರ ಬೀಳಿಸಿ ಕಾಡಾನೆಗಳ ಪುಂಡಾಟ

ಮಡಿಕೇರಿ: ಕೊಡಗಿನಲ್ಲಿ ವನ್ಯಜೀವಿ–ಮಾನವ ಸಂಘರ್ಷ ಮತ್ತೆ ಮುಂದುವರಿದಿದೆ. ಈ ಬಾರಿ ಕಾಡಾನೆಗಳ ಬುದ್ಧಿವಂತಿಕೆ ಹಾಗೂ ಉಪಾಯದಿಂದ ನಡೆದ ಘಟನೆ ಗ್ರಾಮಸ್ಥರಲ್ಲಿ…

6 hours ago

ಶ್ರೀಲಂಕಾ ಜೈಲಿನಲ್ಲಿ ಗ್ಯಾಂಗ್‌ ವಾರ್:‌ 25 ಕೈದಿಗಳು ಸಾವು

ಕೊಲಂಬೊ: ಶ್ರೀಲಂಕಾದ ಜೈಲಿನಲ್ಲಿ ಕೈದಿಗಳ ಎರಡು ಗುಂಪಿನ ಮಧ್ಯೆ ಗಲಾಟೆ ನಡೆದ ಪರಿಣಾಮ 25 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು…

7 hours ago

ಜನತೆಗೆ ಮತ್ತೊಂದು ಬ್ಯಾಡ್‌ನ್ಯೂಸ್:‌ ದುಬಾರಿಯಾಗಲಿದೆ ಸೇಬು

ನವದೆಹಲಿ: ಬೆಲೆ ಏರಿಕೆಯಿಂದ ಹೈರಾಣಾಗಿರುವ ಜನರಿಗೆ ಈಗ ಮತ್ತೊಂದು ಬ್ಯಾಡ್‌ ನ್ಯೂಸ್‌ ಸಿಕ್ಕಿದೆ. ಹವಾಮಾನ ವೈಪರೀತ್ಯದಿಂದಾಗಿ ಸೇಬು ಹಣ್ಣಿನ ಇಳುವರಿ…

7 hours ago

ಮೊಬೈಲ್‌ ಟಾರ್ಚ್‌ ಹಿಡಿದು ಬಸ್‌ ಚಾಲನೆ: ಮೂವರು ಅಮಾನತು

ಕಲಬುರ್ಗಿ: ಟಾರ್ಚ್‌ ಹಿಡಿದು ಬಸ್‌ ಚಾಲನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್‌ ಡ್ರೈವರ್‌ ಸೇರಿದಂತೆ ಮೂವರನ್ನು ಅಮಾನತು ಮಾಡಲಾಗಿದೆ. ತಾಂತ್ರಿಕ…

7 hours ago

ರಾಜ್ಯದಲ್ಲಿ ಚುರುಕು ಪಡೆದುಕೊಂಡ ಮಳೆ: ಜಲಾಶಯಗಳ ಒಳಹರಿವಿನಲ್ಲಿ ಏರಿಕೆ

ಬೆಂಗಳೂರು: ಕರ್ನಾಟಕದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮುಂಗಾರು ಮಳೆ ದಾಖಲಾಗದಿದ್ದರೂ, ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಉತ್ತರ…

7 hours ago

ಧಾರಾಕಾರ ಮಳೆಗೆ ತತ್ತರಿಸಿದ ಮುಂಬೈ

ಮುಂಬೈ: ಕಳೆದ ಐದು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ದೇಶದ ವಾಣಿಜ್ಯ ರಾಜಧಾನಿ ಮುಂಬೈ ತತ್ತರಿಸಿದೆ. ಮಳೆಯ ಆರ್ಭಟಕ್ಕೆ ನಗರದ…

7 hours ago