ಮೈಸೂರು : OTS ಸಾಲ ತಿರುವಳಿ ಮೇಳ ನಡೆಸುವಂತೆ ಒತ್ತಾಯಿಸಿ ರಾಜ್ಯ ಕಬ್ಬು ಬೆಳೆಗಾರ ಸಂಘದ ಮೈಸೂರು ಜಿಲ್ಲಾ ಘಟಕದಿಂದ ಕರ್ನಾಟಕ ಗ್ರಾಮೀಣ ಬ್ಯಾಂಕ್ ಮೈಸೂರಿನ ಪ್ರಾದೇಶಿಕ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.
ಎಲ್ಲಾ ಬ್ಯಾಂಕುಗಳು ರೈತರ ಕೃಷಿ ಸಾಲ OTS ಮೂಲಕ ತಿರುವಳಿ ಮಾಡುತ್ತಿದ್ದರು ಕಾವೇರಿ ಗ್ರಾಮೀಣ ಬ್ಯಾಂಕ್ ಮಾತ್ರ ಸರ್ಕಾರದ ಆದೇಶ ಉಲ್ಲಂಘಿಸಿ OTS ಸಾಲ ತಿರುವಳಿ ಮೇಳ ಮಾಡುತ್ತಿಲ್ಲ ಎಂದು ಆಕ್ರೋಶಗೊಂಡ ರೈತರು, ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.
ಬಳಿಕ ಪ್ರತಿಭಟನಾಕಾರರು ಮಾತನಾಡಿ, ಬರಗಾಲದ ಆರ್ಥಿಕ ಸಂಕಷ್ಟದಲ್ಲಿರುವ ರೈತರಿಗೆ ಕೃಷಿ ಸಾಲ ಮಾಡಿ ತೀರಿಸಲು ಸಾಧ್ಯವಾಗದೆ ಇರುವುದರಿಂದ ಮತ್ತೆ ಕೃಷಿ ಚಟುವಟಿಕೆ ನಡೆಸಲು ಅನುಕೂಲ ಆಗುವಂತೆ ರಾಜ್ಯ ಮಾರ್ಗದರ್ಶಿ ಬ್ಯಾಂಕ್ ಆದೇಶ ಹೊರಡಿಸಿತ್ತು. ಹೀಗಾಗಿ ಬ್ಯಾಂಕ್ ಶಾಖೆಗಳಲ್ಲಿ OTS ಸಾಲ ತಿರುವಳಿ ಮೇಳ ಹೆಚ್ಚು ಪ್ರಚಾರ ನೀಡಿ ನಡೆಸುವಂತೆ ಹಾಗೂ ಇದರ ಸದುಪಯೋಗ ರೈತರು ಪಡೆದುಕೊಳ್ಳುವಂತೆ ನಾಮಫಲಕ ಅನಾವರಣ ಮಾಡಿ ರೈತರಿಗೆ ಜಾಗೃತಿ ಮೂಡಿಸಿ ನೆರವಾಗಬೇಕು. ಆದರೆ ಬ್ಯಾಂಕ್ ಶಾಖೆ ಗಳಲ್ಲಿ ಪ್ರಚಾರ ಮಾಡದೆ ಇರುವುದು ಮುಗ್ಧ ರೈತರು ಈ ಅವಕಾಶದಿಂದ ವಂಚಿತರಾಗಿದ್ದಾರೆ, ಕಳೆದ ಎರಡು ತಿಂಗಳ ಹಿಂದೆ ಬ್ಯಾಂಕ್ ನ ಕೇಂದ್ರ ಕಚೇರಿ ಬಳ್ಳಾರಿಯಲ್ಲಿ ಹೋರಾಟ ನಡೆಸಿದ ಪರಿಣಾಮ ಈ ಆದೇಶ ಹೊರಡಿಸಲಾಗಿದೆ ಆದರೆ ಕೆಲವು ಶಾಖೆಗಳು ಇದನ್ನು ಮರೆಮಾಚಿ ರೈತರಿಗೆ ವಂಚನೆ ಮಾಡುತ್ತಿವೆ. ಹೀಗಾಗಿ ರೈತರಿಗೆ ವಂಚನೆ ಮಾಡದೆ ಅನುಕೂಲ ಮಾಡಿ ಕೊಡಬೇಕೆಂದು ಹಾಗೂ ಒ ಟಿ ಎಸ್ ಮಾಡಿದ ರೈತರಿಗೆ ಮತ್ತೆ ಸಾಲ ಕೊಡಬೇಕು ಎಂದು ಒತ್ತಾಯಿಸಿದರು.
ಬ್ಯಾಂಕ್ ಮುಖ್ಯ ವ್ಯವಸ್ಥಾಪಕ ಯಾದವ ಮೂರ್ತಿ ಹಾಗೂ ಸೀನಿಯರ್ ಮ್ಯಾನೇಜರ್ ಬಾನು ಪ್ರಕಾಶ್ ಪ್ರತಿಭಟನಾ ನಿರತ ರೈತರ ಮನವಲಿಸಿ ಬ್ಯಾಂಕ್ ಗಳಲ್ಲಿ ನಾಮಫಲಕ ಅನಾವರಣ ಮಾಡಿಸಿ ರೈತರಿಗೆ ಜಾಗೃತಿ ಮೂಡಿಸಲು ಸೂಚನೆ ನೀಡುತ್ತೇವೆ ಎಂದು ಭರವಸೆ ನೀಡಿದ ನಂತರ ರೈತರು ತಮ್ಮ ಪ್ರತಿಭಟನೆ ಕೈ ಬಿಟ್ಟರು.
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್ಪಿಜಿಯನ್ನು ಹೊತ್ತ…